ಮನೆಗಳ ಬಾಗಿಲಿಗೆ ಕುಂಕುಮ ಎರಚಿದ ದುಷ್ಕರ್ಮಿಗಳು: ಚುನಾವಣೆ ಬಹಿಷ್ಕಾರದ ಎಚ್ಚರಿಕೆ
Team Udayavani, Dec 21, 2020, 1:32 PM IST
ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ಮನೆ ಮನೆಗೆ ಕುಂಕುಮ ಎರಚಿದ ಘಟನೆ ಜರುಗಿದ್ದು, ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಗ್ರಾ.ಪಂ. ಚುನಾವಣೆಯಲ್ಲಿ ಸ್ಪರ್ಧಿಸಿರುವ 7 ಅಭ್ಯರ್ಥಿಗಳಲ್ಲಿ ಯಾರೋ ಒಬ್ಬರು ಈ ಕೃತ್ಯ ಎಸಗಿದ್ದು, ಮಾಟ ಮಂತ್ರ ಮಾಡಿಸಿ ಜನರಲ್ಲಿ ಆತಂಕ ಸೃಷ್ಟಿಸಿದ್ದಾರೆ ಎಂದು ಶಂಕಿಸಲಾಗಿದೆ.
ಮನೆಗಳ ಬಾಗಿಲಿಗೆ ಕುಂಕುಮ ಎರಚಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಏಳೂ ಅಭ್ಯರ್ಥಿಗಳು ಈ ಬಗ್ಗೆ ಗ್ರಾಮದ ದೇವಸ್ಥಾನದಲ್ಲಿ ಪ್ರಮಾಣ ಮಾಡಿ ಸತ್ಯ ಒಪ್ಪಿಕೊಂಡರೆ ಮಾತ್ರ ಮಂಗಳವಾರ ಮತದಾನ ಮಾಡುವುದಾಗಿ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಇಲ್ಲವಾದಲ್ಲಿ ಮತದಾನವನ್ನೇ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ.
ಘಟನೆ ಬೆಳಕಿಗೆ ಬರುತ್ತಲೇ ಸ್ಥಳಕ್ಕೆ ಧಾವಿಸಿದ ಮುದ್ದೇಬಿಹಾಳ ಪಿಎಸೈ ಮಲ್ಲಪ್ಪ ಮಡ್ಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳವಾರ ಮತದಾನ ಇರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಇದರಿಂದಾಗಿ ಘಟನೆ ಹೆಚ್ಚು ಮಹತ್ವ ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ