ಸಾರ್ವಭೌಮತಕ್ವೆ ಕುವೆಂಪು ಅನುಪಮ ಕೊಡುಗ
Team Udayavani, Dec 30, 2017, 1:39 PM IST
ವಿಜಯಪುರ: ಕರ್ನಾಟಕದ ಅಖಂಡತೆ, ಸಾರ್ವಭೌಮತೆಗೆ ರಾಷ್ಟ್ರಕವಿ ಕುವೆಂಪು ಅವರು ನೀಡಿದ ಕೊಡುಗೆ ಅನುಪಮ ಎಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ರಾಜು ಆಲಗೂರ ಅಭಿಪ್ರಾಯಪಟ್ಟರು.
ಶುಕ್ರವಾರ ಜಿಲ್ಲಾಡಳಿತ ನಗರದ ಕಂದಗಲ್ ಹನುಮಂತರಾಯ ಮಂದಿರದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ ಹಾಗೂ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯುಗದ ಕವಿ, ಜಗದ ಕವಿಯಾಗಿರುವ ಕುವೆಂಪು ಕನ್ನಡ ನಾಡು ಕಂಡ ಮಹಾನ್ ಲೇಖಕ. ಕನ್ನಡಕ್ಕೆ ಮೊಟ್ಟ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟು ನಾಡಿನ ಶ್ರೇಷ್ಠ ಹಿರಿಮೆ ದೇಶಕ್ಕೆ ಸಾರಿದ ಮಹಾನ್ ಚೇತನ ಎಂದರು.
ತಮ್ಮ ಪರಿಣಾಮಕಾರಿ ಸಾಹಿತ್ಯದ ಮೂಲಕ ನಾಡಿನ ಜನರಲ್ಲಿ ಆತ್ಮಗಳಲ್ಲಿ ಐಕ್ಯತೆಯ ಮಂತ್ರಬೀಜ ಬಿತ್ತಿದ ರಾಷ್ಟ್ರಕವಿ ಕುವೆಂಪು ಸಮಾನತೆ, ವೈಚಾರಿಕತೆ ಮತ್ತು ವೈಜ್ಞಾನಿಕ ಚಿಂತನೆಗಳ ಮೂಲಕ ಉತ್ತಮ ಸಮಾಜ ರೂಪಿಸಲು ನೆರವಾಗಿದ್ದಾರೆ ಎಂದರು.
ವಿಶ್ವಜ್ಯೋತಿ ಬಸವೇಶ್ವರರು, ದಮನಿತರ ಧ್ವನಿ ಜ್ಯೋತಿಬಾ ಫುಲೆ ಅವರಂಥ ಸಮಾನತೆಯ ಹರಿಕಾರರ ಸಂದೇಶಗಳ ಮೂಲಕ ಸ್ವಸ್ಥ ಸಮಾಜ ಮತ್ತು ಸ್ವಸ್ಥ ರಾಷ್ಟ್ರ ನಿರ್ಮಾಣಕ್ಕಾಗಿ ವಿಶ್ವ ಮಾನವ ಚಿಂತನೆಗಳನ್ನು ಪಸರಿಸಿದರು. ಪ್ರಾಧ್ಯಾಪಕರಾಗಿ, ಸಾಹಿತ್ಯದ ಮೂಲಕವೇ ನಾಡಿನ ಜನಮನಗಳಲ್ಲಿ ಜೀವಂತವಾಗಿದ್ದು ಎಂದಿಗೂ ಚಿರ ಸ್ಮರಣೀಯರಾಗಿದ್ದಾರೆ ಎಂದರು.
ಪತ್ರಕರ್ತ ಪರಶುರಾಮ ಶಿವಶರಣ ಮಾತನಾಡಿದರು. ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ, ಜಿಪಂ ಸಿಇಒ ಎಂ.ಸುಂದರೇಶಬಾಬು, ಉಪ ವಿಭಾಗಾಧಿಕಾರಿ ಶಂಕರ ವಣಕ್ಯಾಳ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಡಿಡಿಪಿಐ ಪ್ರಸನ್ನಕುಮಾರ, ತಹಶೀಲ್ದಾರ್ ಎಂ.ಎನ್. ಬಳಿಗಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ
ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ
Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ
Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ
ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ