ಜಿಪಂಗೆ ಅನುದಾನದ ಕೊರತೆ: ಕಳ್ಳಿಮನಿ


Team Udayavani, Oct 3, 2020, 4:37 PM IST

ಜಿಪಂಗೆ ಅನುದಾನದ ಕೊರತೆ: ಕಳ್ಳಿಮನಿ

ಮುದ್ದೇಬಿಹಾಳ: ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಜಿಪಂ ಸದಸ್ಯೆಯರ ಜೊತೆ ಕಾಳಗಿ ಸರ್ಕಾರಿ ಆಸ್ಪತ್ರೆ ವಾರ್ಡ್‌ನಲ್ಲಿ ವಾಸ್ತವ್ಯ ಮಾಡಿದರು.

ಮುದ್ದೇಬಿಹಾಳ: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ತಜ್ಞರು, ವೈದ್ಯರು, ಸಿಬ್ಬಂದಿ, ಅಗತ್ಯ ವೈದ್ಯಕೀಯ ಉಪಕರಣ ಕೊರತೆ ನೀಗಿಸಲು ಕೋವಿಡ್ ದಿಂದ ಹಿನ್ನಡೆಯಾಗಿದೆ. ಜಿಪಂಗೆ ಅನುದಾನದ ಕೊರತೆ ಕಾಡುತ್ತಿದೆ. ಆದರೂ ಕೊರತೆ ಶೀಘ್ರ ನೀಗಿಸಲು ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದ್ದೇನೆ. ನನ್ನ ಅಧಿಕಾರ ಇರುವಷ್ಟು ದಿನ ಜಿಲ್ಲೆಯನ್ನು ಮಾದರಿಯಾಗಿ ಮಾಡಲು ಶ್ರಮಿಸುತ್ತೇನೆ ಎಂದು ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಹೇಳಿದ್ದಾರೆ.

ಕಾಳಗಿ ಗ್ರಾಮದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿ, ಬಾಣಂತಿಯರ ಸಮಸ್ಯೆ ತಿಳಿದುಕೊಳ್ಳಲು ಗುರುವಾರ ರಾತ್ರಿ ಆಸ್ಪತ್ರೆ ವಾಸ್ತವ್ಯ ನಡೆಸಿ, ಶುಕ್ರವಾರ ಬೆಳಗ್ಗೆ ಗ್ರಾಪಂ ಮಾಜಿ ಅಧ್ಯಕ್ಷ ಜಾವೀದ್‌ ಇನಾಮದಾರ ನಿವಾಸದಲ್ಲಿ ಸನ್ಮಾನ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಳೆದ ತಿಂಗಳು ಕುರಿಗಾರರ ದೊಡ್ಡಿಯಲ್ಲಿ ವಾಸ್ತವ್ಯ ನಡೆಸಿದ್ದಾಗ ಪಡೆದ ಅನುಭವದಿಂದ ಆಸ್ಪತ್ರೆ ವಾಸ್ತವ್ಯ ನಡೆಸಲಾಗಿದೆ. ಇದರಿಂದ ಅಲ್ಲಿನ ಕಷ್ಟಗಳು, ಸಮಸ್ಯೆಗಳು, ಕುಂದು ಕೊರತೆಗಳು ಪ್ರಾಯೋಗಿಕವಾಗಿ ಗೊತ್ತಾಗಿ ಮುಂದೇನು ಮಾಡಬೇಕು ಎನ್ನುವ ಸ್ಪಷ್ಟ ನಿರ್ಧಾರಕ್ಕೆ ಅವಕಾಶವಾಗುತ್ತದೆ. ಸಣ್ಣಪುಟ್ಟ ತೊಂದರೆ ಕಂಡು ಬಂದಲ್ಲಿ ಸ್ಥಳದಲ್ಲೇ ಬಗೆಹರಿಸಲು ಅವಕಾಶವಾಗುತ್ತದೆ. ಕೋವಿಡ್  ನಿಯಂತ್ರಣಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಿರುವುದರಿಂದ ಸಮಸ್ಯೆ ಪರಿಹಾರಕ್ಕೆ, ಅಭಿವೃದ್ಧಿಗೆ ಸ್ವಲ್ಪ ಹಿನ್ನೆಡೆ ಆಗಿದ್ದರೂ ಆದಷ್ಟು ಬೇಗ ಸರಿಪಡಿಸಲಾಗುತ್ತದೆ ಎಂದರು.

ವಾಸ್ತವ್ಯದ ವೇಳೆ ಗರ್ಭಿಣಿಯರು, ಬಾಣಂತಿಯರನ್ನು ಮಾತನಾಡಿಸಿದಾಗ ಆಸ್ಪತ್ರೆ ಸ್ವಚ್ಛವಾಗಿದೆ. ಅನುಕೂಲಕರ ಪರಿಸರಇದೆ. ಕೊರತೆ ಇಲ್ಲ ಎಂದರು. ಪ್ರತಿಯೊಂದು ಆಸ್ಪತ್ರೆ ಸುವ್ಯವಸ್ಥೆಯಲ್ಲಿದ್ದರೆ ಸಮಸ್ಯೆಗಳು ಇರುವುದಿಲ್ಲ ಎನ್ನುವುದನ್ನು ತಿಳಿದುಕೊಂಡೆ. ಪಿಎಚ್‌ಸಿಗಳಿಗೆ ಭೇಟಿ ನೀಡಿದ್ದಾಗ ಹಲವು ಸಮಸ್ಯೆಗಳು ಗೊತ್ತಾಗಿವೆ. ಅಲ್ಲಿನ ಸಿಬ್ಬಂದಿಗೆ ಕೆಲಸದ ಮೇಲೆ ನಿಗಾ ಇದ್ದರೆ ಸಮಸ್ಯೆಗಳು ಬಗೆಹರಿಯುತ್ತವೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು ಸರಿಯಾಗಿ ಸ್ಪಂ ದಿಸುತ್ತಿಲ್ಲ. ಪೌಷ್ಟಿಕ ಆಹಾರ ಕೊಡುತ್ತಿಲ್ಲ. ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಬರೋದಿಲ್ಲ. ಸೂಕ್ತ ಸ್ಪಂದನೆ ಇಲ್ಲ. ವೈದ್ಯರು ತಮ್ಮ ಕಡೆ ಚಿಕಿತ್ಸೆ ಸಾಧ್ಯವಿದ್ದರೂ ಬೇರೆ ಕಡೆ ಹೋಗಿ ಎಂದು ಶಿಫಾರಸು ಮಾಡಿ ಕಳುಹಿಸುತ್ತಿದ್ದಾರೆ ಎನ್ನುವ ಆರೋಪಗಳನ್ನು ಅಧಿ ಕಾರಿಗಳ ಗಮನಕ್ಕೆ ತಂದು ಸರಿಪಡಿಸಲು ಕ್ರಮ ಕೈಗೊಂಡಿದ್ದೇನೆ ಎಂದರು.

ಪ್ರೇಮಬಾಯಿ ಚವ್ಹಾಣ, ಪದ್ಮಾವತಿ ವಾಲೀಕಾರ, ಸಿ.ಬಿ. ದೇವರಮನಿ, ಸಿ.ಬಿ. ಕುಂಬಾರ, ಶಶಿಧರ ಶಿವಪುರೆ, ಸೋಮನಾಥ ಕಳ್ಳಿಮನಿ, ಸಂತೋಷ ರಾಠೊಡ, ಜಾವೀದ್‌ ಜಮಾದಾರ, ಮುತ್ತಣ್ಣ ಮುತ್ತಣ್ಣವರ,ನಾಗರಾಜ ತಂಗಡಗಿ, ಲಕ್ಷ್ಮಣ ಲಮಾಣಿ ಇದ್ದರು.

ಶೌಚಾಲಯ ಸ್ವಚ್ಛಗೊಳಿಸಿದ ಅಧ್ಯಕ್ಷೆ :

ಮುದ್ದೇಬಿಹಾಳ: ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ  ಅವರ ಕಾಳಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿರುವ ಶೌಚಾಲಯಗಳನ್ನು ಶುಕ್ರವಾರ ಖುದ್ದು ತಾವೇ ಸ್ವತ್ಛಗೊಳಿಸಿ ಜನತೆಯಲ್ಲಿ ಸ್ವಚ್ಛತೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ.

ಕಾಳಗಿ ಆಸ್ಪತ್ರೆಯಲ್ಲಿ ರಾತ್ರಿ ವಾಸ್ತವ್ಯ ಮಾಡಿದ್ದ ಅವರು ಬೆಳಗ್ಗೆ ಜಿಪಂ, ತಾಪಂ, ಕಾಳಗಿ ಗ್ರಾಪಂ ಸಂಯುಕ್ತವಾಗಿ ಆಯೋಜಿಸಿದ್ದ ಮಹಾತ್ಮ ಗಾಂಧಿ  ಜಯಂತಿ ನಿಮಿತ್ತ ಸ್ವತ್ಛ ಭಾರತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ವೇಳೆ ಕಸಬರಿಗೆ, ಬ್ರಶ್‌, ಶೌಚಾಲಯ ತೊಳೆಯುವಸಾಧನಗಳನ್ನು ಹಿಡಿದು ಶೌಚಾಲಯ ಸ್ವತ್ಛತೆಗೆ ಮುಂದಾದಾಗ ಅಲ್ಲಿದ್ದ ಇತರೆ ಜನ ಪ್ರತಿನಿ ಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಅವರನ್ನು ಅನುಕರಿಸಿದರು. ಇದಕ್ಕೂ ಮುನ್ನ ಸರ್ಕಾರಿ ಆಸ್ಪತ್ರೆಯೂ ಸೇರಿ ಗ್ರಾಮದ ವಿವಿಧೆಡೆ ಯುವಕರ ತಂಡ ಸ್ವಚ್ಛತಾ ಕಾರ್ಯ ನಡೆಸಿತು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುಜಾತಾ, ನಾವು ನಮ್ಮ ಮನೆ ಸುತ್ತಲಿನ ವಾತಾವರಣ ಸ್ವಚ್ಛಗೊಳಿಸಬೇಕು. ಅಂದಾಗ ಮಾತ್ರ ಗಾಂ ಧೀಜಿ ಕನಸು ನನಸಾಗಲು ಸಾಧ್ಯ ಎಂದರು. ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕೋವಿಡ್ ಹಿನ್ನೆಲೆ ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ನಿಯಂತ್ರಣ ಕ್ರಮ ಕೈಗೊಳ್ಳಲಾಗಿದೆ. ಸ್ವಚ್ಛತೆ ಪಾಲಿಸಲು ಪಿಡಿಒಗಳಿಗೂ ಸೂಚನೆ ಕೊಡಲಾಗುತ್ತಿದೆ. ನಿರ್ಲಕ್ಷ್ಯ ತೋರುವ ಹಾಗೂ ಆರೋಪಗಳು ಕೇಳಿ ಬಂದ ಪಿಡಿಒಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.