ಢವಳಗಿ ರೈತ ಸಂಪರ್ಕ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ


Team Udayavani, Jun 9, 2022, 5:24 PM IST

19farmers

ಮುದ್ದೇಬಿಹಾಳ: ತಾಲೂಕಿನ ಢವಳಗಿ ಹೋಬಳಿ ವ್ಯಾಪ್ತಿಯ ಕೃಷಿ ಇಲಾಖೆಗೆ ಸೇರಿದ ರೈತ ಸಂಪರ್ಕ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ ಇದ್ದು ರೈತರಿಗೆ ಸೌಲಭ್ಯಗಳು ಸರಿಯಾಗಿ ದೊರಕುತ್ತಿಲ್ಲ. ಜೊತೆಗೆ ನಮ್ಮ ಕೆಲಸ ಕಾರ್ಯಗಳಿಗೆ ವಿನಾಕಾರಣ ಅಲೆದಾಡುವಂತಾಗಿದೆ ಎಂದು ನೊಂದ ರೈತರು ದೂರಿದ್ದಾರೆ.

7 ಗ್ರಾಮ ಪಂಚಾಯಿತಿ, 28 ಹಳ್ಳಿಗಳನ್ನೊಳ ಗೊಂಡಿರುವ ಈ ಕೇಂದ್ರದಲ್ಲಿ ಇರುವ ಬೆರಳೆಣಿಕೆ ಯಷ್ಟು ಸಿಬ್ಬಂದಿ ಮೇಲೆ ಹೆಚ್ಚಿನ ಕೆಲಸದ ಭಾರ ಬಿದ್ದು ಅವರೂ ಹೈರಾಣಾಗುತ್ತಿರುವುದು ಮಾತ್ರವಲ್ಲದೆ ರೈತರಿಗೆ ಸರಿಯಾದ ಸೇವೆ ಕೊಡುವಲ್ಲಿಯೂ ವಿಫಲರಾಗುತ್ತಿದ್ದಾರೆ. ಇದರಿಂದ ರೈತರು ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದ್ದಾರೆ.

ಸದ್ಯ ಇಲ್ಲಿ ನಾಲ್ವರು ಸಿಬ್ಬಂದಿ ಕೊರತೆ ಇದ್ದು ಖಾಸಗಿಯವರನ್ನು ದಿನಗೂಲಿ ಆಧಾರದ ಮೇಲೆ ಬಳಸಿಕೊಂಡು ತಾತ್ಕಾಲಿಕವಾಗಿ ಸಮಸ್ಯೆ ಎದುರಿಸಲು ಇಲಾಖೆ ಮೇಲಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಆದರೆ ಇವರಿಂದಲೂ ನಿರೀಕ್ಷಿತ ಸೇವೆ ಸಾಧ್ಯವಾಗುತ್ತಿಲ್ಲ.

ಈ ವರ್ಷ ಮುಂಗಾರು ಉತ್ತಮವಾಗುವ ಲಕ್ಷಣಗಳು ಕಂಡು ಬಂದಿದ್ದು ಹೋಬಳಿ ವ್ಯಾಪ್ತಿಯಲ್ಲಿ ಹೆಚ್ಚಿನ ರೈತರು ತಮ್ಮ ಹೊಲಗಳಲ್ಲಿ ಮುಂಗಾರು ಬೆಳೆ ಬೆಳೆಯುವ ಸಿದ್ದತೆಯಲ್ಲಿದ್ದಾರೆ. ಆದರೆ ಬೀಜ ಬಿತ್ತನೆಗೆ, ಕೃಷಿ ಉಪಕರಣಗಳಿಗೆ ಕುತ್ತು ಬಂದಿದ್ದು ಇವು ರೈತರಿಗೆ ವಿಳಂಬವಾಗಿ ದೊರಕುತ್ತಿವೆ ಎನ್ನಲಾಗುತ್ತಿದೆ.

ಪ್ರತಿಯೊಂದು ಕೃಷಿ ಕೇಂದ್ರಕ್ಕೆ ಕೃಷಿ ಅಧಿಕಾರಿಗೆ ನೆರವಾಗಲು ಸಹಾಯಕ ಕೃಷಿ ಅಧಿಕಾರಿ, ಕೃಷಿ ಸಹಾಯಕರು ಇರಬೇಕು ಅನ್ನೋ ನಿಯಮ ಇದೆ. ಆದರೆ ಇಲ್ಲಿ ಇಬ್ಬರೇ ಸಿಬ್ಬಂದಿ ಇರುವುದರಿಂದ ಎಲ್ಲ ಹಳ್ಳಿಗಳ ರೈತರನ್ನೂ ತಲುಪಿ ಕೃಷಿ ಸಂಬಂಧಿ ಕೆಲಸ ಮಾಡಲು ಇವರಿಂದ ಆಗುತ್ತಿಲ್ಲ ಎನ್ನುವ ದೂರು ಕೇಳಿ ಬರುತ್ತಿದೆ.

ಮುಂಗಾರು ಬಿತ್ತನೆಗೆ ಕೃಷಿ ಭೂಮಿ ಹದಗೊಳಿಸಿರುವ ರೈತರಿಗೆ ಸರ್ಕಾರದ ಸಬ್ಸಿಡಿ ಬೀಜ, ಗೊಬ್ಬರ ಪಡೆಯುವುದು ದುಸ್ತರವಾಗುತ್ತಿದೆ. ಕೇಂದ್ರಕ್ಕೆ ಬಂದರೂ ಸಿಬ್ಬಂದಿ ಕೊರತೆಯಿಂದ ಸಕಾಲಕ್ಕೆ ಬೀಜ, ಗೊಬ್ಬರ ಸಿಗುತ್ತಿಲ್ಲ. ಸಿಬ್ಬಂದಿ ಕೊರತೆ ಪರಿಣಾಮ ಸರ್ಕಾರದ ಸೌಲಭ್ಯಗಳು, ಯೋಜನೆಗಳು ರೈತರಿಗೆ ಸರಿಯಾಗಿ ತಲುಪುತ್ತಿಲ್ಲ. ಮೇಲಾಗಿ ನಿಗದಿತ ಅವಧಿಯೊಳಗೆ ಎಲ್ಲ ಸೌಲಭ್ಯಗಳನ್ನು ರೈತರಿಗೆ ತಲುಪಿಸುವುದು ಸಾಧ್ಯವಾಗುತ್ತಿಲ್ಲ ಎಂದು ರೈತರು ದೂರುತ್ತಿದ್ದಾರೆ.

ಕಳಪೆ ಮತ್ತು ನಕಲಿ ಬೀಜ, ಗೊಬ್ಬರದ ಬಗ್ಗೆ ಅರಿವು ಮೂಡಿಸಲು, ರೈತರ ಆದಾಯ ದ್ವಿಗುಣಗೊಳಿಸುವ ಬೆಳೆ ಪದ್ಧತಿ ಕುರಿತು ಸಲಹೆ ನೀಡಲು, ಮಣ್ಣಿನ ಗುಣಮಟ್ಟ ಸಂರಕ್ಷಿಸುವ ಜಾಗೃತಿ ಮೂಡಿಸಲು ಸಿಬ್ಬಂದಿ ಕೊರತೆ ಅಡ್ಡಿ ಉಂಟು ಮಾಡಿದೆ. ಈಗಲಾದರೂ ಸಂಬಂಧಿಸಿದವರು ಎಚ್ಚೆತ್ತುಕೊಂಡು ಕೂಡಲೇ ಈ ಕೇಂದ್ರಕ್ಕೆ ಅಗತ್ಯ ಪ್ರಮಾಣದ ಸಿಬ್ಬಂದಿ ಒದಗಿಸಿ ರೈತರಿಗೆ ಸಕಾಲಕ್ಕೆ ನೆರವಾಗಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.