ಗಣೇಶ ಪ್ರತಿಷ್ಠಾಪನೆಗೆ ಭೂಮಿಪೂಜೆ
Team Udayavani, Aug 21, 2017, 12:53 PM IST
ತಾಳಿಕೋಟೆ: ಪಟ್ಟಣದ ತಿಲಕ ರಸ್ತೆಯಲ್ಲಿ ಹಿಂದೂ ಮಹಾಗಣಪತಿ ಮಹಾಮಂಡಳಿಯವರ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗುವ ಸ್ಥಳದಲ್ಲಿ ಭೂಮಿಪೂಜಾ ಕಾರ್ಯಕ್ರಮವನ್ನು ಗುಂಡಕನಾಳ ಹಿರೇಮಠದ ಗುರುಲಿಂಗ ಶಿವಾಚಾರ್ಯರು ಹಾಗೂ ಸಂತೋಷಭಟ್ ಜೋಶಿ ನೆರವೇರಿಸಿದರು. ಈ ವೇಳೆ ಉಭಯ ಶ್ರೀಗಳು ಮಾತನಾಡಿ, ಹಿಂದೂ ಮಹಾಗಣಪತಿ ಮಹಾಮಂಡಳಿ ವತಿಯಿಂದ ಪ್ರತಿಷ್ಠಾಪಿಸಲಾಗುವ ಗಣೇಶ ಮೂರ್ತಿಯ ಸ್ಥಳದಲ್ಲಿ 9 ದಿನದವರೆಗೆ ಜನರಲ್ಲಿ ದೇಶಾಭಿಮಾನ ಹೆಚ್ಚಿವಂತಹ ಅನೇಕ ಕಾರ್ಯಕ್ರಮಗಳು ನಡೆಯಲಿವೆ. ಇಂತಹ ಜಾಗೃತಿ ಕಾರ್ಯಕ್ರಮಗಳೊಂದಿಗೆ ಗಣೇಶ ಉತ್ಸವದ ಅರ್ಥ ತಿಳಿಸುವಂತಹ ಕಾರ್ಯ ಯುವಕ ಮಂಡಳಿಯವರು ಪ್ರತಿ ವರ್ಷ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು. ಹಿಂದೂ ಮಹಾಗಣಪತಿ ಮಹಾ ಮಂಡಳಿಯ ಕಾಶೀನಾಥ ಅರಳಿಚಂಡಿ, ಪ್ರಕಾಶ ಪಾಟೀಲ, ಸಂಗನಗೌಡ ಪಾಟೀಲ, ಕಿರಣ ಬಡಿಗೇರ, ರಾಘವೇಂದ್ರ ವಿಜಾಪುರ, ವಿಶ್ವನಾಥ ಮೈಲೇಶ್ವರ, ಪ್ರತೀಕ ಮಹೇಂದ್ರಕರ, ಸಾಯಿ ಸುಭೇದಾರ, ಅಶ್ವಿನಕುಮಾರ ಬೇದರಕರ, ವಿನಯ ಸ್ಥಾವರಮಠ, ಗುರು ಕಲಾಲ, ಬಾಬು ಅಗಸರ, ಪ್ರಕಾಶ ಕಟ್ಟಿಮನಿ, ಶ್ರೀನಿವಾಸ ಕಟ್ಟಿಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ