ಸಿಂದಗಿ ಅಭಿವೃದ್ಧಿ ನನ್ನ ಕೆಲಸ: ಶಾಸಕ ಮನಗೂಳಿ


Team Udayavani, Nov 26, 2020, 5:58 PM IST

ಸಿಂದಗಿ ಅಭಿವೃದ್ಧಿ ನನ್ನ ಕೆಲಸ: ಶಾಸಕ ಮನಗೂಳಿ

ಸಿಂದಗಿ: ಸಿಂದಗಿ ಪಟ್ಟಣ ಅಭಿವೃದ್ಧಿಮಾಡುವುದು ನನ್ನ ಕೆಲಸ. ಅದರಂತೆ ಸಾಕಷ್ಟು ಅಭಿವೃದ್ಧಿ ಯೋಜನೆ ಅನುಷ್ಠಾನ ಮಾಡುವ ಮೂಲಕ ಅಭಿವೃದ್ಧಿ ಪಡಿಸುತ್ತಿದ್ದೇನೆ ಎಂದು ಶಾಸಕ ಎಂ.ಸಿ. ಮನಗೂಳಿ ಮಾತನಾಡಿದರು. ಪಟ್ಟಣದ ಕನಕದಾಸ ವೃತ್ತದಿಂದ ಮೋರಟಗಿ ನಾಕಾವರೆಗೆ ಡಾಂಬರೀಕರಣ ಮತ್ತು ಸಿಸಿ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಹುದಿನಗಳ ನಾಗರಿಕರ ಬೇಡಿಕೆಈಡೇರಿಸಲು ಕೆಲಸ ಮಾಡುತ್ತಿದ್ದೇನೆ. 52.50 ಕೋಟಿ ರೂ. ಅನುದಾನದಲ್ಲಿ ಕನಕದಾಸ ವೃತ್ತದಿಂದ ಮೋರಟಗಿ ನಾಕಾವರೆಗೆ ಡಾಂಬರೀಕರಣ ಮತ್ತು ಸಿಸಿ ಚರಂಡಿನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಎಲ್ಲರೂ ಕಾಮಗಾರಿಗೆ ಸಹಕರಿಸಬೇಕು ಎಂದರು.

ನನ್ನ ಅಧಿಕಾರವಧಿಯಲ್ಲಿ 1994ರಲ್ಲಿ ಸಚಿವನಿದ್ದ ಸಂದರ್ಭದಲ್ಲಿ ಪಟ್ಟಣದ ಜನತೆಗೆಕುಡಿಯುವ ಪೂರೈಸಲು ಪಟ್ಟಣದಲ್ಲಿ ಕೆರೆ ನಿರ್ಮಿಸಲಾಯಿತು. 8 ಕಿ.ಮೀ. ದೂರದಿಂದ ಪೈಪ್‌ಲೈನ್‌ ಮಾಡಿ ಕೆರೆಗೆನೀರು ತರಲಾಯಿತು. ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ಪರಿಹರಿಸಬೇಕೆಂಬ ಉದ್ದೇಶದಿಂದ ಈಗ 27.10 ಕೋಟಿ ರೂ.ವೆಚ್ಚದಲ್ಲಿ ಪೈಪ್‌ಲೈನ್‌ ಮಾಡಿ ಬಳಗಾನೂರ ಕೆರೆಯಿಂದ ಸಿಂದಗಿಗೆ ನೀರು ತರಲಾಗುವುದು.ಈಗ ಪೈಪ್‌ಲೈನ್‌ ಕಾಮಗಾರಿ ಮುಗಿದಿದ್ದು, ಶೀಘ್ರ ಬಳಗಾನೂರು ಕೆರೆ ನೀರು ಸಿಂದಗಿ ಕೆರೆಗೆ ಹರಿಸಲಾಗುವುದು ಎಂದರು.

ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಆಲಮೇಲ ತಾಲೂಕು ಕೇಂದ್ರವನ್ನಾಗಿ ಮಾಡಲಾಗಿದೆ. ಕಡಣಿಬ್ಯಾರೇಜ್‌ ಕಾಮಗಾರಿ ಮಂಜೂರಾಗಿದೆ. ಪಟ್ಟಣ ಸೇರಿದಂತೆ ಗ್ರಾಮಗಳ ರಸ್ತೆ ಅಭಿವೃದ್ಧಿ ಮಾಡಲಾಗಿದೆ. ಪಟ್ಟಣ ಪುರಸಭೆಯನ್ನು ನಗರಸಭೆಯನ್ನಾಗಿಸುವುದು, ಮಂಜೂರಾದ ತೋಟಗಾರಿಕೆ ಕಾಲೇಜು ಸ್ಥಾಪಿಸುವುದು ನನ್ನ ಮುಂದಿನ ಗುರಿ. ಈ ಮೂಲಕ ಮಾದರಿ ಕ್ಷೇತ್ರ ಮಾಡಲು ಪ್ರಯತ್ನಿಸುವೆ ಎಂದರು.

ನನೆಗುದಿಗೆ ಬಿದ್ದ ಯುಜಿಡಿ ಕಾಮಗಾರಿಗೆ 90.75 ಕೋಟಿ ರೂ. ಅನುದಾನದಲ್ಲಿಸಿಂದಗಿ ಪಟ್ಟಣಕ್ಕೆ ಸಮಗ್ರ ಒಳಚರಂಡಿಕಾಮಗಾರಿ ಮೊದಲ ಹಂತದ ಕಾಮಗಾರಿ ಪ್ರಾರಂಭವಾಗಿದೆ. ಚುನಾವಣೆಯಲ್ಲಿ ನೀಡಿದ ಆಶ್ವಾಸನೆ ಹಂತ ಹಂತವಾಗಿ ಈಡೇರಿಸುತ್ತಿದ್ದೇನೆ ಎಂದು ಹೇಳಿದರು.

ಪುರಸಭೆ ಅಧ್ಯಕ್ಷ ಡಾ| ಶಾಂತವೀರಮನಗೂಳಿ ಮಾತನಾಡಿ, ಶಾಸಕ ಎಂ.ಸಿ.ಮನಗೂಳಿ ಪಟ್ಟಣದ ಅಭಿವೃದ್ಧಿಗೆ ಸಾಕಷ್ಟುಅನುದಾನ ತರುವ ಮೂಲಕ ಪಟ್ಟಣದ ಮುಖ್ಯ ರಸ್ತೆ ಅಭಿವೃದ್ಧಿಪಡಿಸುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರೂ ಕೈಜೋಡಿಸೋಣ ಎಂದರು.

ಸಾರಂಗಮಠ-ಗಚ್ಚಿನಮಠದ ಡಾ| ಪ್ರಭುಸಾರಂಗದೇವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಮಾತನಾಡಿದರು. ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಶಿವಪ್ಪಗೌಡ ಬಿರಾದಾರ, ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ ಮಾತನಾಡಿದರು. ಈ ವೇಳೆ ಜಿಪಂ ಮಾಜಿ ಉಪಾಧ್ಯಕ್ಷಸಿದ್ದು ಪಾಟೀಲ, ಉಮೇಶ ಜೋಗುರ, ಪುರಸಭೆ ಉಪಾಧ್ಯಕ್ಷ ಆಸಿಂ ಆಳಂದ, ಸದಸ್ಯರಾದ ಬಸವರಾಜ ಯರನಾಳ, ರಾಜಣ್ಣ ನಾರಾಯಣಕರ, ಶ್ರೀಶೈಲ ಭೀರಗೊಂಡ, ಬಸವರಾಜ ಸಜ್ಜನ, ಅನೀಲ ಕಡಕೋಳ, ಶರಣಯ್ಯ ಮಠ, ಪ್ರಕಾಶ ಹಿರೇಕುರಬರ, ರಮೇಶ ಹೂಗಾರ, ಕೆಂಚಪ್ಪ ಪೂಜಾರಿ, ಪ್ರಸನ್ನ ಜೇರಟಗಿ ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.