ಎಲೆಮಚ್ಚೆ ರೋಗ; ಬೆಲೆ ಕಳೆದುಕೊಂಡ ಉಳ್ಳಾಗಡ್ಡಿ

ಬಸವನಬಾಗೇವಾಡಿ ಹಾಗೂ ಕೂಡಗಿ ಭಾಗದಲ್ಲೂ ಈರುಳ್ಳಿ ಮಾರುಕಟ್ಟೆ ನಡೆಯುತ್ತದೆ.

Team Udayavani, Sep 21, 2021, 6:13 PM IST

ಎಲೆಮಚ್ಚೆ ರೋಗ; ಬೆಲೆ ಕಳೆದುಕೊಂಡ ಉಳ್ಳಾಗಡ್ಡಿ

ವಿಜಯಪುರ: ಕಳೆದ ನಾಲ್ಕು ತಿಂಗಳಿಂದ ಮಾರುಕಟ್ಟೆಯಲ್ಲಿ ಸಾಮಾನ್ಯ ಬೆಲೆ ಹೊಂದಿದ್ದ ಈರುಳ್ಳಿ ಪ್ರಕೃತಿ ವೈಪರಿತ್ಯದ ಪರಿಣಾಮ ಇದೀಗ ಏಕಾಏಕಿ ಬೆಲೆ ಕುಸಿಯುವಂತೆ ಮಾಡಿದೆ. ಅತಿವೃಷ್ಟಿ ಹಾಗೂ ವಾತಾವರಣ ಬದಲಾವಣೆಯ ಕಾರಣದಿಂದ ತಿರುಗುಣಿ, ಎಲೆಮಚ್ಚೆ ರೋಗಕ್ಕೆ ಸಿಲುಕಿದ್ದು, ಗಾತ್ರದ ಬೆಳವಣಿಗೆಯಲ್ಲಿ ಕುಂಠಿತವಾಗಿದೆ. ವಿಜ್ಞಾನಿಗಳು ಕೂಡ ಅಧ್ಯಯನ ನಡೆಸಿದ್ದು, ಪರಿಹಾರ ಸೂಚಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಸಾಮಾನ್ಯವಾಗಿ 20-24 ಸಾವಿರ ಹೆಕ್ಟೇರ್‌ ಪ್ರದೇಶದ ವರೆಗೆ ಈರುಳ್ಳಿ ಬೆಳೆಯಲಾಗುತ್ತದೆ. ಈ ಬಾರಿ 33 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಈರುಳ್ಳಿ ಬೆಳೆಯಲಾಗಿದೆ. ಇಂಡಿ, ಸಿಂದಗಿ, ಮುದ್ದೇಬಿಹಾಳ, ವಿಜಯಪುರ ತಾಲೂಕಿನಲ್ಲಿ ಹೆಚ್ಚಿನ ಈರುಳ್ಳಿ ಬೆಳೆಯಲಾಗುತ್ತದೆ.

ಆದರೆ ಬಸವನಬಾಗೇವಾಡಿ, ಕೊಲ್ಹಾರ, ನಿಡಗುಂದಿ ಭಾಗದ ಹಳ್ಳಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾಗೂ ಗುಣಮಟ್ಟದಲ್ಲಿ ಬೆಳೆಯುವ ಈರುಳ್ಳಿ ಹೆಚ್ಚು ಗರಿಷ್ಟ ಗುಣಮಟ್ಟ ಹೊಂದಿದೆ. ಪರಿಣಾಮ ಜಿಲ್ಲೆಯಿಂದ ಸಗಟು ವ್ಯಾಪಾರಿಗಳ ಮೂಲಕ ತೆಲಂಗಾಣ, ಸೀಮಾಂಧ್ರ, ಕೇಳರ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಗೆ ವಿಜಯಪುರ ಜಿಲ್ಲೆಯ ರವಾನೆ ಆಗುತ್ತದೆ. ಆದರೆ ಅತಿವೃಷ್ಟಿ, ವಾತಾವರಣದಲ್ಲಿ ಕಂಡುಬಂದ ದಿಢೀರ ಬದಲಾವಣೆಯಿಂದಾಗಿ ಗಾತ್ರ ಹಾಗೂ ಗುಣಮಟ್ಟದಲ್ಲಿ ಕುಸಿತವಾಗಿರುವ ಈರುಳ್ಳಿಯನ್ನು ಇದೀಗ ಮಾರುಕಟ್ಟೆಯಲ್ಲಿ ಕೇಳುವವರೇ ಇಲ್ಲವಾಗಿದೆ.

ಜಿಲ್ಲೆಯಲ್ಲಿ ವಿಜಯಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ರವಿವಾರ ಹಾಗೂ ಬುಧವಾರ ಎರಡು ದಿನ ಈರುಳ್ಳಿ ಮಾರುಕಟ್ಟೆ ನಡೆಯುತ್ತದೆ. ಕಳೆದ ಮೇ ತಿಂಗಳಿಂದ ಆಗಸ್ಟವರೆಗೆ ವಿಜಯಪುರ ಮಾರುಕಟ್ಟೆಗೆ 36,625 ಕ್ವಿಂಟಲ್‌ ಈರುಳ್ಳಿ ಆವಕವಾಗಿದೆ. ಈ ಅವ ಕಯಲ್ಲಿ ಗುಣಮಟ್ಟಕ್ಕೆ ತಕ್ಕಂತೆ 200-2000 ರೂ. ಬೆಲೆ ಸಿಕ್ಕಿದೆ.

ಬಸವನ ಬಾಗೇವಾಡಿ ಹಾಗೂ ಕೂಡಗಿ ಭಾಗದಲ್ಲೂ ಈರುಳ್ಳಿ ಮಾರುಕಟ್ಟೆ ನಡೆಯುತ್ತದೆ. ಆದರೆ ಈಚೆಗೆ ಪ್ರಕೃತಿ ವಿಕೋಪದಿಂದಾಗಿ ಈರುಳ್ಳಿ ಗುಣಮಟ್ಟ ಕಳೆದುಕೊಂಡಿದ್ದು, ಮಾರುಕಟ್ಟೆಯಲ್ಲಿ ಬೆಲೆಯೇ ಇಲ್ಲವಾಗಿದೆ. ಇದರಿಂದಾಗಿ ಜಿಲ್ಲೆಯ ರೈತರು ವಿಜಯಪುರ ಮಾರುಕಟ್ಟೆ ಹೊರತಾಗಿ ಹೊರಗಿನ ಮಾರುಕಟ್ಟೆಗೆ ಕೊಂಡೊಯ್ದ ಈರುಳ್ಳಿಗೆ ಸಾಗಾಣಿಕೆ ವೆಚ್ಚವೂ ಸಿಗದಂತೆ ಬೆಲೆ ಕುಸಿತ ಅನುಭವಿಸಿದ್ದಾರೆ.

ಈ ಮಧ್ಯೆ ಜಿಲ್ಲೆಯ ಈರುಳ್ಳಿ ಬೆಳೆಯಲ್ಲಿ ಕಾಣಿಸಿಕೊಂಡ ರೋಗದ ಕುರಿತು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ರೋಗತಜ್ಞರಾದ ರಮೇಶ ರಾಠೊಡ, ಕೀಟತಜ್ಞರಾದ ಸತ್ಯನಾರಾಯಣ ನೇತೃತ್ವದಲ್ಲಿ ಸೆ. 17ರಂದು ತಳೆವಾಡ, ಬಳೂತಿ ಕೊಲ್ಹಾರ ಭಾಗದ ರೈತರ ಈರುಳ್ಳಿ ತೋಟಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದಾರೆ. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಸ್‌.ಎಂ. ಬರಗಿಮಠ, ಎಸ್‌ಎಡಿಎಚ್‌ಒ ಸಿ.ಬಿ. ಪಾಟೀಲ, ಪ್ರಗತಿಪರ ರೈತರಾದ ನಂದಬಸಪ್ಪ ಚೌಧರಿ, ಯಶವಂತ ದಳವಾಯಿ, ಪುಂಡಲೀಕ ಛಬ್ಬಿ ಅವರ ಜೊತೆ ಭೇಟಿ ನೀಡಿ, ರೈತರೊಂದಿಗೆ ಚರ್ಚಿಸಿ, ಈ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತೂ ಸಲಹೆ ನೀಡಿದ್ದಾರೆ.

ಜಿಲ್ಲೆಯ ಈರುಳ್ಳಿಗೆ ಹೊರ ರಾಜ್ಯದಲ್ಲಿ ಭಾರಿ ಬೇಡಿಕೆ ಇದೆ. ಆದರೆ ಈ ಬಾರಿ ಗಾತ್ರ, ಗುಣಮಟ್ಟದಲ್ಲಿ ಕುಸಿತದಿಂದಾಗಿ ಸಹಜವಾಗಿ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಕುಸಿತವಾಗಿದೆ. ಖರೀದಿಸಿದ ಈರುಳ್ಳಿ ಕೂಡ ಕೊಳೆಯುತ್ತಿದ್ದು, ನಮಗೂ ನಷ್ಟವಾಗುತ್ತಿದೆ.
ಗುರು ಶಿರೋಳಕರ, ಈರುಳ್ಳಿ ಸಗಟು
ವ್ಯಾಪಾರಿ, ಎಪಿಎಂಸಿ, ವಿಜಯಪುರ

ರೈತರು ಈರುಳ್ಳಿ ರೋಗದ ಕುರಿತು ನಮ್ಮ ಗಮನಕ್ಕೆ ತರುತ್ತಲೇ ವಿಜ್ಞಾನಿಗಳನ್ನು ಕರೆಸಿ ಅಧ್ಯಯನ ಮಾಡಿಸಿದ್ದೇವೆ. ಅಲ್ಲದೇ ಪ್ರಕೃತಿ ವೈಪರಿತ್ಯದಿಂದಾಗಿ ಕಂಡುಬಂದಿರುವ ಈ ರೋಗದ ಕುರಿತು ರೈತರು ಕೈಗೊಳ್ಳಬೇಕಾದ ಸಲಹೆಗಳನ್ನೂ ನೀಡಿದ್ದೇವೆ.
ಎಸ್‌.ಎಂ.ಬರಗೀಮಠ
ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ

ಜಿ.ಎಸ್‌. ಕಮತರ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.