ಮುದ್ದೇಬಿಹಾಳ: ನಿಶ್ಚಿತಾರ್ಥವಾಗಿದ್ದ ಉಪನ್ಯಾಸಕನ ಶವ ಹೊಲದಲ್ಲಿ ಪತ್ತೆ; ಕೊಲೆ?


Team Udayavani, Dec 25, 2021, 11:28 AM IST

6death

ಮುದ್ದೇಬಿಹಾಳ: ತಾಲೂಕಿನ ನಾಗರಬೆಟ್ಟ ಗ್ರಾಮದಲ್ಲಿರುವ ಖಾಸಗಿ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಕಾಶಿನಾಥ ಶರಭಯ್ಯ ಪುರಾಣಿಕಮಠ (30) ಅವರ ಶವ ರಸ್ತೆ ಪಕ್ಕದ ಹೊಲವೊಂದರಲ್ಲಿ ದೊರಕಿದ್ದು ಇದೊಂದು ವ್ಯವಸ್ಥಿತ, ಪೂರ್ವ ನಿಯೋಜಿತ ಕೊಲೆ ಎನ್ನುವ ಶಂಕೆ ವ್ಯಕ್ತವಾಗಿದೆ.

ನಾಗರಬೆಟ್ಟದಿಂದ ಅಡವಿ ಸೋಮನಾಳ ಮಾರ್ಗವಾಗಿ ತಾಳಿಕೋಟೆಗೆ ಹೋಗುವ ಮುಖ್ಯ ರಸ್ತೆ ಪಕ್ಕದ ಮಲಗಲದಿನ್ನಿ ಕ್ರಾಸ್ ಸಮೀಪ ಈ ದುರ್ಘಟನೆ ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಉಪನ್ಯಾಸಕನ ಮೃತದೇಹ ಒಂದು ಕಡೆ, ಬೈಕ್ ಮತ್ತೊಂದು ಕಡೆ ಬಿದ್ದಿದ್ದು ಮೈಮೇಲೆ ಯಾವುದೇ ಗಂಭೀರ ಗಾಯಗಳು ಇಲ್ಲದಿರುವುದು, ಅಪಘಾತದ ಕುರುಹುಗಳು ಕಂಡು ಬರದಿರುವುದು ವ್ಯವಸ್ಥಿತ ಕೊಲೆ ಶಂಕೆಗೆ ಪುಷ್ಠಿ ನೀಡಿದೆ.

ನಾಗರಬೆಟ್ಟದ ಕಾಲೇಜಿನಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಇವರು ನಿತ್ಯ ಬೆಳಿಗ್ಗೆ ತಾಳಿಕೋಟೆಯಿಂದ ಕಾಲೇಜಿಗೆ, ರಾತ್ರಿ ಕಾಲೇಜಿನಿಂದ ತಾಳಿಕೋಟಿ ತಮ್ಮ ಬೈಕನಲ್ಲಿ ಸಂಚರಿಸುತ್ತಿದ್ದರು. ಶುಕ್ರವಾರ ರಾತ್ರಿ 8.20 ಕ್ಕೆ ಕಾಲೇಜು ಮುಗಿಸಿಕೊಂಡು ಎಂದಿನಂತೆ ಮನೆಗೆ ಹೊರಟಿದ್ದರು.

ಮನೆಗೆ ಬಾರದೇ ಇದ್ದುದು, ಪಾಲಕರ ಕಳವಳಕ್ಕೆ ಕಾರಣವಾಗಿ, ಕಾಲೇಜಿನವರನ್ನು ವಿಚಾರಿಸಿದಾಗ ಅವರು ಊರಿಗೆ ತೆರಳಿದ್ದಾರೆ ಎಂದು ಕಾಲೇಜಿನವರು ಪಾಲಕರಿಗೆ ತಿಳಿಸಿದ್ದಾರೆ. ಗಾಬರಿಗೊಂಡ ಪಾಲಕರು ಎಲ್ಲೆಡೆ ವಿಚಾರಿಸಿದರೂ, ಹುಡುಕಾಡಿದರೂ ಇವರ ಪತ್ತೆ ಆಗಿರಲಿಲ್ಲ. ಬೆಳಗ್ಗೆ ರಸ್ತೆಯಲ್ಲಿ ಸಂಚರಿಸುವವರು ನೀಡಿದ ಮಾಹಿತಿಯಿಂದ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಆಗಮಿಸಿದ ಪಾಲಕರು ಇದೊಂದು ಅನುಮಾನಾಸ್ಪದ ಸಾವು, ವ್ಯವಸ್ಥಿತವಾಗಿ ಸಂಚು ನಡೆಸಿ ಕೊಲೆ ಮಾಡಲಾಗಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ವಾಜಪೇಯಿ ಜನ್ಮದಿನ: ಪ್ರಧಾನಿ ಮೋದಿ ಅವರಿಂದ ಪುಷ್ಪಾಂಜಲಿ

ಕೇವಲ 3-4 ತಿಂಗಳ ಹಿಂದೆ ಯುವತಿಯೊಬ್ಬಳೊಂದಿಗೆ ಕಾಶಿನಾಥಗೆ ನಿಶ್ಚಿತಾರ್ಥ ಆಗಿತ್ತು. 3-4 ದಿನಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡ ಯುವತಿಯ ಕಡೆಯವರೆಂದು ಹೇಳಿಕೊಂಡು ಕಾಲೇಜಿಗೆ ಬಂದಿದ್ದ ಒಂದಿಬ್ಬರು ಅಪರಿಚಿತರು ಯುವತಿಯ ಸಹವಾಸಕ್ಕೆ ಬರದಂತೆ ಎಚ್ಚರಿಕೆ ನೀಡಿ ಹೋಗಿದ್ದರು ಎನ್ನುವ ಮಾತು ಕಾಶಿನಾಥನ ಸ್ನೇಹಿತರಿಂದ ಕೇಳಿ ಬರತೊಡಗಿರುವುದು ಕೊಲೆ ಶಂಕೆಗೆ ಪುಷ್ಟಿ ನೀಡುವಂತಾಗಿದೆ.

ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಕಾನೂನು ಕ್ರಮ ಕೈಕೊಂಡಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.