ಕಾನೂನು ಅರಿವು ಅಗತ್ಯ


Team Udayavani, Nov 14, 2021, 3:03 PM IST

16law

ಬಸವನಬಾಗೇವಾಡಿ: ದೇಶದ ಪ್ರತಿಯೊಬ್ಬ ನಾಗರಿಕರಿಗೂ ಕಾನೂನಿನ ಬಗ್ಗೆ ಅರಿವಿರಬೇಕು. ಅಂದಾಗ ಮಾತ್ರ ಸಮಾಜದಲ್ಲಾಗುವ ಅಪರಾಧಗಳನ್ನು ತಡೆಯಲು ಸಾಧ್ಯ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಪ್ರಕಾಶ ಬನಸೋಡೆ ಹೇಳಿದರು.

ಶನಿವಾರ ಪಟ್ಟಣದ ಮಿನಿ ವಿಧಾನಸೌಧ ಕಚೇರಿ ಸಭಾಭವನದಲ್ಲಿ ತಾಲೂಕಾಡಳಿತ, ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ತಾಪಂ ಸಹಯೋಗದಲ್ಲಿ ನಡೆದ ಕಾನೂನು ಅರಿವು ಹಾಗೂ ಸರ್ಕಾರಿ ಯೋಜನೆಗಳ ಅನುಕೂಲತೆಗಳ ಕುರಿತು ಹಮ್ಮಿಕೊಂಡ ಮೆಗಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಕಾನೂನು ನಮ್ಮ ದೇಶದ ಪರಂಪರೆ, ಸಂಸ್ಕೃತಿ ಧರ್ಮದ ಆಧಾರದ ಮೇಲೆ ರಚನೆಯಾಗಿದೆ. ಯಾರು ಕಾನೂನಿನ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ಆದರೆ ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಅವಶ್ಯವಾಗಿದೆ. ದೇಶದಲ್ಲಿ ಅಜ್ಞಾನದ ಕೊರತೆಯಿಂದ ಅಪರಾಧ ಪ್ರಕರಣಗಳು ಸಂಭವಿಸುತ್ತಿವೆ. ಹೀಗಾಗಿ ಹೊಸ ಹೊಸ ಕಾನೂನುಗಳು ಜಾರಿಯಾಗುತ್ತಿವೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು. ಸರ್ಕಾರ 6ರಿಂದ 16 ವರ್ಷದವರೆಗಿನ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದೆ. ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಂಡು ಶಿಕ್ಷಣವಂತರಾಗಬೇಕು ಎಂದರು.

ಸಣ್ಣ ಪುಟ್ಟ ಸಮಸ್ಯೆಗಳಿಗಾಗಿ ಕೋರ್ಟ್ ಗಳಲ್ಲಿ ದಾವೆ ಹೂಡಿ ಕಾನೂನು ಹೋರಾಟ ಮಾಡುವ ಬದಲು ಕಾನೂನು ಸಮಿತಿಯಿಂದ ಪ್ರತಿ ತಿಂಗಳು ನಡೆಯುವ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನ ಮಾಡಿಕೊಳ್ಳಬೇಕು. ರಾಜ್ಯ ಕಾನೂನು ಪ್ರಾಧಿಕಾರದಿಂದ ಕಾನೂನು ಸಲಹಾ ಸಮಿತಿಯನ್ನು ರಚಿಸಲಾಗಿದೆ. ಪ್ರತಿಯೊಬ್ಬರೂ ಉಚಿತವಾಗಿ ಕಾನೂನು ಸಲಹೆ ಹಾಗೂ ಸೇವೆಯನ್ನು ಪಡೆಯಬಹುದಾಗಿದೆ ಎಂದರು.

ಸಿವಿಲ್‌ ನ್ಯಾಯಾಧೀಶ ಸಂದೀಪ ನಾಯಿಕ ಮಾತನಾಡಿ, ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು. ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕು. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕಾನೂನು ಸೇವಾ ಸಮಿತಿಯಿಂದ ಸರ್ಕಾರಿ ಯೋಜನೆಗಳ ಕುರಿತು ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿಯೊಬ್ಬರೂ ಇಂತಹ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ಸರ್ಕಾರದ ಯೋಜನೆ ಲಾಭ ಪಡೆದುಕೊಳ್ಳಬೇಕು ಎಂದರು.

ವಕೀಲ ರವಿ ರಾಠೊಡ ಉಪನ್ಯಾಸ ನೀಡಿದರು. ಇದೇ ಸಂಧರ್ಭದಲ್ಲಿ ಪಿಂಚಣಿ ಮಂಜೂರಾತಿಯಾದ ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಲಾಯಿತು. ಗೇಡ್‌-2 ತಹಶೀಲ್ದಾರ್‌ ಪಿ.ಜೆ.ಪವಾರ, ವಕೀಲರ ಸಂಘದ ಅಧ್ಯಕ್ಷ ಎನ್‌.ಎಸ್‌.ಪಾಟೀಲ, ಜಿ.ಆರ್‌ .ಬೀಳಗಿ, ವಿಜಯ ಕಲ್ಲೂರ, ಸಿಡಿಪಿಒ ಸಂತೋಷ ಮ್ಯಾಗೇರಿ ಇದ್ದರು. ವೀರೇಶ ಗುಡಲಮನಿ ನಿರೂಪಿಸಿದರು.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.