ಸರ್ಕಾರಿ ನೌಕರರ ಸಮಸ್ಯೆಗೆ ಸ್ಪಂದಿಸುವ ಕೆಲಸವಾಗಲಿ: ಬಿರಾದಾರ


Team Udayavani, Jan 29, 2022, 5:42 PM IST

21govt

ತಾಳಿಕೋಟೆ: ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ತಾಳಿಕೋಟೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಅಭಿವೃದ್ಧಿ ಅಧಿಕಾರಿ ನಿಂಗಣ್ಣ ದೊಡಮನಿ ಅವರು ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವುದರೊಂದಿಗೆ ಅವರಲ್ಲಿ ಹೊಸ ಚೈತನ್ಯ ತುಂಬುವ ಕೆಲಸ ಮಾಡಲಿ ಎಂದು ಜೆಡಿಎಸ್‌ ಪಕ್ಷದ ತಾಲೂಕು ಕಾರ್ಯಾಧ್ಯಕ್ಷ ಮಡುಸೌಕಾರ ಬಿರಾದಾರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘ ನೂತನ ಅಧ್ಯಕ್ಷ ನಿಂಗಣ್ಣ ದೊಡಮನಿ ಅವರಿಗೆ ಸನ್ಮಾನಿಸಿ ಮಾತನಾಡಿದ ಅವರು, ಈ ಮೊದಲು ಮುದ್ದೇಬಿಹಾಳ ತಾಲೂಕಿನಲ್ಲಿದ್ದ ಸರ್ಕಾರಿ ನೌಕರರ ಸಂಘವು ಈಗ ತಾಳಿಕೋಟೆ ನೂತನ ತಾಲೂಕಾ ಕೇಂದ್ರವಾಗಿ ಬೇರ್ಪಟ್ಟಿದ್ದರಿಂದ ಹೊಸದಾಗಿ ಅಸ್ಥಿತ್ವಕ್ಕೆ ಬಂದಿದ್ದು ಸ್ವಾಗತಾರ್ಹ ಎಂದರು.

ಸಂಘದ ಸದಸ್ಯರ ಅಭಿಪ್ರಾಯದ ಮೇರೆಗೆ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ ಅವರು ನಿಂಗನಗೌಡರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಇದರಿಂದ ಅವರಿಗೆ ಇನ್ನಷ್ಟು ಜವಾಬ್ದಾರಿ ಹೆಚ್ಚಿಸಿದಂತಾಗಿದೆ. ಸರ್ಕಾರಿ ನೌಕರರ ಸಂಘದಲ್ಲಿ ಈಗಾಗಲೇ ಸಾಕಷ್ಟು ಜವಾಬ್ದಾರಿಗಳನ್ನು ನಿರ್ವಹಿಸಿರುವ ಇವರಿಗೆ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವುದರೊಂದಿಗೆ ಅವರಿಗೆ ಶಕ್ತಿ ತುಂಬುವಂತಹ ಕಾರ್ಯ ಮಾಡಲಿದ್ದಾರೆ ಎಂದರು.

ಶಿವು ಕಲಬುರಗಿ (ಬೊಮ್ಮನಹಳ್ಳಿ) ಮಾತನಾಡಿ, ಪಿಡಿಒ ನಿಂಗಣ್ಣ ದೊಡಮನಿ ಅವರು ಸಂಘಟನಾತ್ಮಕ ಶಕ್ತಿ ಮೂಲಕ ಬೆಳೆದು ಬಂದವರಾಗಿದ್ದಾರೆ. ಸಾಮಾನ್ಯವಾಗಿ ಸಮಸ್ಯೆಗಳನ್ನು ನೀಗಿಸುವ ತಾಕತ್ತು ಅವರಲ್ಲಿದೆ. ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಹುದ್ದೆಯಿಂದ ಇನ್ನಷ್ಟು ಹೆಚ್ಚಿನ ಜವಾಬ್ದಾರಿಗಳು ಅವರಿಗೆ ಸಿಗಲಿ ಎಂದು ಆಶಿಸಿದರು.

ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಮಲಕಣ್ಣ ಮಸರಕಲ್ಲ, ಗ್ರಾಪಂ ಸದಸ್ಯ ಯಮನಪ್ಪ ಮಸರಕಲ್ಲ, ಶಿಕ್ಷಕರ ಸಂಘದ ಕಾರ್ಯದರ್ಶಿ ಸುರೇಶ ಬೀರಗೊಂಡ ಮಾತನಾಡಿ, ತಾಲೂಕಿನಲ್ಲಿ ಅಭಿವೃದ್ಧಿ ಅಧಿಕಾರಿಗಳು ಬೆರಳೆಣಿಕೆಯಷ್ಟು ಇದ್ದರೂ ಕೂಡಾ ಎಲ್ಲ ನೌಕರರ ಸಮಸ್ಯೆ ನೀಗಿಸುವ ಸಾಮರ್ಥ್ಯ ನಿಂಗಣ್ಣ ದೊಡಮನಿ ಅವರಲ್ಲಿದೆ. ಈ ಕಾರಣದಿಂದ ಎಲ್ಲ ಶಿಕ್ಷಕಕರು ಅವರನ್ನು ಬೆಂಬಲಿಸಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಅವರಿಗೆ ಸಿಕ್ಕಿರುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಾರೆಂಬ ನಂಬಿಕೆ ಎಲ್ಲ ನೌಕರರಲ್ಲಿದೆ ಎಂದರು.

ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ನಿಂಗಣ್ಣ ದೊಡಮನಿ ಮಾತನಾಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರನ್ನಾಗಿ ತಾಲೂಕಿನ ಎಲ್ಲ ನೌಕರರ ಒಮ್ಮತದಿಂದ ಆಯ್ಕೆಗೊಳಿಸಿದ್ದಾರೆ. ಅವರು ನನ್ನ ಮೇಲಿಟ್ಟ ವಿಶ್ವಾಸಕ್ಕೆ ಪ್ರೀತಿಗೆ ಸದಾ ಋಣಿಯಾಗಿದ್ದೇನೆ. ಸರ್ಕಾರಿ ನೌಕರರ ಸಂಘವನ್ನು ಜಿಲ್ಲೆಯಲ್ಲಿಯೇ ಮಾದರಿ ಸಂಘವನ್ನಾಗಿ ಬೆಳೆಸುವ ಉತ್ಸುಕತೆ ನನ್ನಲ್ಲಿದ್ದು ಅದಕ್ಕೆ ಎಲ್ಲ ನೌಕರರ ಸಹರಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ಮುಖಂಡರುಗಳಾದ ಶಂಭು ಹಂದಿಗನೂರ, ಸಂತೋಷ ಹಜೇರಿ, ಜಾಕೀರ್‌ ಹುಸೇನ್‌, ಶಂಕರಗೌಡ ಪಾಟೀಲ, ರಮೇಶ ವಣಕ್ಯಾಳ (ಅಸ್ಕಿ), ಮಲ್ಲನಗೌಡ ಪಾಟೀಲ, ಬಸನಗೌಡ ಬಿರಾದಾರ, ದಶರಥಗೌಡ ದೊಡಮನಿ, ಶರಣ ಕುಂಬಾರ ಇದ್ದರು. ಶಿವಶರಣ ಅಲ್ಲಾಪುರ ನಿರೂಪಿಸಿದರು.

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.