ಪ್ರಧಾನಿ ಶ್ರಮಯೋಗಿ ಯೋಜನೆ ಸದ್ಬಳಕೆಯಾಗಲಿ


Team Udayavani, Mar 6, 2019, 7:28 AM IST

vij-2.jpg

ವಿಜಯಪುರ: ಜಿಲ್ಲಾ ಅಸಂಘಟಿತ ಕೂಲಿ ಕಾರ್ಮಿಕರು, ಬಡತನ ರೇಖೆಗಿಂತ ಕೆಳಗಿರುವ ಕಾರ್ಮಿಕರು ಆರ್ಥಿಕವಾಗಿ ಸಬಲರಾಗಲು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೊಗಿ ಮನ-ಧನ ಯೋಜನೆ ಸಹಕಾರಿಯಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಮಂಗಳವಾರ ನಗರದ ಕಾರ್ಮಿಕ ಸಮುದಾಯ ಭವನದಲ್ಲಿ ಅಸಂಘಟಿತ ಕಾರ್ಮಿಕರ ಪಿಂಚಣಿ ಯೋಜನೆಯ ಸೌಲಭ್ಯ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಬಡತನ ಹೋಗಲಾಡಿಸಲು ಇಂತಹ ಅತ್ಯುತ್ತಮ ಯೋಜನೆಗಳ ಅವಶ್ಯಕತೆ ಇದೆ. ಅರ್ಹ ಅಸಂಘಟಿತ ಬಡ ಕಾರ್ಮಿಕರಿಗೆ ನೇರವಾಗಿ ಸೌಲಭ್ಯ ತಲುಪಲು ಪ್ರಧಾನಿಗಳ ಯೋಜನೆ ಸಹಕಾರಿಯಾಗಿವೆ ಎಂದರು.

ಇದಲ್ಲದೇ ಪ್ರಧಾನ ಮಂತ್ರಿ ಜನಧನ್‌ ಯೋಜನೆ, ಜನ ಔಷಧಿ ಯೋಜನೆ , ಪ್ರಧಾನ ಮಂತ್ರಿ ಕೌಶಲ್ಯ ಅಭಿವೃದ್ಧಿ ಯೋಜನೆ ಇನ್ನೂ ಮುಂತಾದ ಯೋಜನೆಗಳು ಬಡವರ ಹಿತರಕ್ಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಪ್ರಧಾನ ಮಂತ್ರಿಗಳ ಯೋಜನೆಗಳು ಬಡವರ ಪರವಾಗಿದ್ದು ಕೂಲಿಕಾರ್ಮಿಕರು ವಿಕಲಚೇತನರು, ವಿಧವೆಯರು, ಮುಂತಾದ ಅಸಂಘಟಿತರು ಎಲ್ಲರಂತೆ ಉತ್ತಮ ಜೀವನ ನಡೆಸಲು ಸರ್ವೋತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿವೆ.

ಈ ನಿಟ್ಟಿನಲ್ಲಿ ಬಡವರು ಅಧಿಕಾರಿಗಳ ಬಳಿ ಸಹಕಾರಕ್ಕಾಗಿ ಬಂದರೆ ತಾತ್ಸಾರ ಮನೋಭಾವದಿಂದ ನೋಡಿದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಸಹಾಯಕ ಭವಿಷ್ಯನಿಧಿ ಆಯುಕ್ತ ಪಿ.ಗೋಪಾಲಸಿಂಗ್‌ ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ 60 ವರ್ಷದ ನಂತರ ತಿಂಗಳಿಗೆ 3000 ರೂ. ಪಿಂಚಣಿ ನೀಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗೆ ದೇಶಾದ್ಯಂತ ನೋಂದಣಿ ಆರಂಭವಾಗಿದ್ದು, ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌-ಧನ್‌ (ಪಿಎಂಎಸ್‌ವೈಎಂ) ಹೆಸರಿನ ಈ ಯೋಜನೆಗೆ ದೇಶದಲ್ಲೆಡೆ ಇರುವ 3.13 ಲಕ್ಷ ಸರ್ವ ಸೇವಾ ಕೇಂದ್ರಗಳಲ್ಲಿ ಕಾರ್ಮಿಕರು ನೋಂದಣಿ ಮಾಡಿಸಿಕೊಳ್ಳಬಹುದು.

18ರಿಂದ 40 ವರ್ಷದ ನಡುವಿನ ಮನೆಗೆಲಸದವರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟದ ಕೆಲಸದವರು, ಚರ್ಮಕಾರರು, ಇಟ್ಟಿಗೆ-ಗಾರೆ ಕೆಲಸದವರು, ಚರ್ಮಕಾರರು, ಚಿಂದಿ ಆಯುವವರು, ಅಗಸರು, ರಿಕ್ಷಾ ಎಳೆಯುವರು, ಭೂರಹಿತ ಕಾರ್ಮಿಕರು, ಕೃಷಿ ಕಾರ್ಮಿಕರು ಕಟ್ಟಡ ಕಾರ್ಮಿಕರು ಹೀಗೆ ಎಲ್ಲ ಬಗೆಯ ಅಸಂಘಟಿತ ಕಾರ್ಮಿಕರು ಈ ಯೋಜನೆಗೆ ಅರ್ಹರಾಗಿದ್ದಾರೆ. ಕಾರ್ಮಿಕರು ತಮ್ಮ ಆಧಾರ್‌ ಕಾರ್ಡ್‌, ಬ್ಯಾಂಕ್‌ ಉಳಿತಾಯ ಖಾತೆ ಪಾಸ್‌ಬುಕ್‌ ತೆಗೆದುಕೊಂಡು ಸರ್ವ ಸೇವಾ ಕೇಂದ್ರಗಳಿಗೆ ತೆರಳಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದರು.

ಇದೇ ವೇಳೆ ಅರ್ಹ ಕೆಲ ಕಾರ್ಮಿಕರಿಗೆ ಪಿಂಚಣಿ ನೊಂದಣಿ ಕಾರ್ಡ್‌ ವಿತರಿಸಲಾಯಿತು. ಜಗದೇವಿ, ಪ್ರಭುಗೌಡ ಪಾಟೀಲ, ಅಶೋಕ ಬಾಳಿಕಟ್ಟಿ, ಅರುಣಕುಮಾರ, ಶ್ರೀಧರ, ಅಜೇಜಾ ಕುಮಾರ, ವಿಜಯಕುಮಾರ ಸೇರಿದಂತೆ ಇತರರು ಇದ್ದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.