ಮಾಸಿಕ ನೈರ್ಮಲ್ಯ ದಿನಾಚರಣೆ


Team Udayavani, Jun 4, 2022, 5:15 PM IST

19plastic

ಮುದ್ದೇಬಿಹಾಳ: ಪ್ಲಾಸ್ಟಿಕ್‌ ಇಂದು ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದ್ದರೂ ಪರಿಸರಕ್ಕೆ ಹಾನಿಕಾರವಾಗಿದ್ದು ಸಾಧ್ಯವಾದಷ್ಟು ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡೋಣ ಎಂದು ಕಿರುತೆರೆಯ ಹಾಸ್ಯ ಕಲಾವಿದ, ಶಿಕ್ಷಕ ಗೋಪಾಲ ಹೂಗಾರ ಹೇಳಿದರು.

ಪಟ್ಟಣದ ಸಂತ ಕನಕದಾಸ ಶಾಲೆಯಲ್ಲಿ ಪುರಸಭೆಯಿಂದ ಹಮ್ಮಿಕೊಂಡಿದ್ದ ಮಾಸಿಕ ನೈರ್ಮಲ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಡಿಮೆ ವೆಚ್ಚದಲ್ಲಿ ತಯಾರಿಕೆಗೊಂಡು ಕೈಗೆಟಕುವ ದರದಲ್ಲಿ ಪ್ಲಾಸ್ಟಿಕ್‌ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಸುಲಭವಾಗಿ ದೊರೆಯುತ್ತಿರುವುದರಿಂದ ನಾವೆಲ್ಲ ಇವುಗಳಿಗೆ ಮಾರು ಹೋಗುತ್ತಿದ್ದೇವೆ. ಆದರೆ ಪ್ಲಾಸ್ಟಿಕ್‌ನಿಂದ ಉಂಟಾಗುವ ಮಾಲಿನ್ಯದಲ್ಲಿ ಏಷ್ಯಾ ಖಂಡ ಅಗ್ರಸ್ಥಾನದಲ್ಲಿದ್ದು ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶಕ್ಕೆ ಈ ಪ್ಲಾಸ್ಟಿಕ್‌ ತ್ಯಾಜ್ಯ ಬಹುದೊಡ್ಡ ಪಿಡುಗಾಗಿದೆ ಅನ್ನೋದನ್ನು ಅರಿತುಕೊಂಡು ನಾವೆಲ್ಲ ಮುನ್ನಡೆಯಬೇಕು ಎಂದರು.

ಮುಖ್ಯಾಧ್ಯಾಪಕ ಎಂ.ಎನ್‌. ಯರಝರಿ ಮಾತನಾಡಿ, ಪ್ಲಾಸ್ಟಿಕ್‌ ತ್ಯಾಜ್ಯ ಪರಿಸರ, ಮನುಷ್ಯ, ಪ್ರಾಣಿಗಳು, ಸಸ್ಯಗಳ ಮೇಲೆ ದುಷ್ಪರಿಣಾಮವನ್ನು ಬೀರುತ್ತಿದೆ. ಪ್ಲಾಸ್ಟಿಕ್‌ ನಿಂದ ತಯಾರಿಸಿದ ಅನೇಕ ಉತ್ಪನ್ನಗಳು ಮಾನವನ ಆರೋಗ್ಯ ಮತ್ತು ಪರಿಸರಕ್ಕೆ ಅಪಾಯವನ್ನುಂಟು ಮಾಡುತ್ತಿವೆ. ಆದ್ದರಿಂದ ಮಕ್ಕಳು ಇದರ ಬಗ್ಗೆ ಜಾಗƒತಿ ವಹಿಸಿ ನಿಮ್ಮ ಮನೆಯ ಸುತ್ತ ಮುತ್ತ ಇರುವ ಜನರಿಗೆ ಪ್ಲಾಸ್ಟಿಕ್‌ ಬಳಕೆಯ ಅಪಾಯದ ಅರಿವನ್ನುಂಟು ಮಾಡಬೇಕು. ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಹೇಳಿದರು.

ಶಿಕ್ಷಕರಾದ ಎಸ್‌.ಆರ್‌. ಕುರಿ ಮಾತನಾಡಿದರು. ಪುರಸಭೆ ಆರೋಗ್ಯ ವಿಭಾಗದ ಸಿಬ್ಬಂದಿ ಜಾವೇದ ನಾಯ್ಕೋಡಿ, ಮಹಾಂತೇಶ ಕಟ್ಟಿಮನಿ, ಬಸವರಾಜ ಬಾಗಲಕೋಟ, ಉಮೇಶ ದೇವೂರ, ಬಿ.ಎಸ್‌.ಪಣೇದಕಟ್ಟಿ, ಎಂ.ಸಿ.ಕಬಾಡೆ, ಪೌರಕಾರ್ಮಿಕರು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ಪ್ಲಾಸ್ಟಿಕ್‌ ಬಳಕೆಯ ವಿರುದ್ಧ ಜಾಗೃತಿ ಮೂಡಿಸುವ ಭಿತ್ರಿಚಿತ್ರ ಪ್ರದರ್ಶಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.