ಶಿಕ್ಷಣ ಕ್ಷೇತ್ರಕ್ಕೆ ಲಿಂಗಾಯತ ಮಠಗಳ ಕೊಡುಗೆ ಅಪಾರ


Team Udayavani, Dec 6, 2017, 2:21 PM IST

Tweet-1.jpg

ತಾಂಬಾ: ಕರ್ನಾಟಕದಲ್ಲಿ ಲಿಂಗಾಯತ ಮಠಗಳು ಶಿಕ್ಷಣರಂಗ ಬೆಳೆಸಲು ಸಾಕಷ್ಟು ಶ್ರಮಿಸುತ್ತಿವೆ. ಅದರಂತೆ ಬಿಎಲ್‌ಡಿಇ ಶಿಕ್ಷಣ ಸಂಸ್ಥೆ ಹೆಮ್ಮರವಾಗಿ ಬೆಳೆಯಲು ಬಂಥನಾಳದ ಶ್ರೀ ಸಂಗನಬಸವ ಮಹಾಶಿವಯೋಗಿಗಳು
ವಚನಪಿತಾಮಹ ಫ.ಗು. ಹಳಕಟ್ಟಿ ಹಾಗೂ ಬಿ.ಎಂ. ಪಾಟೀಲರ ಸೇವೆ ಅನನ್ಯವಾಗಿದೆ. ಇಂತಹ ಮಹಾನ್‌ ಚೇತನರಿಂದ ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಗಳು ಹೆಸರುವಾಸಿಯಾಗಿವೆ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಂ. ಬಿ. ಪಾಟೀಲ ಹೇಳಿದರು.

ಗ್ರಾಮದ ಶ್ರೀ ವೃಷಭಲಿಂಗೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಮಾತೋಶ್ರೀ ಮುರುಗೆವ್ವ ಷಣ್ಮುಖಪ್ಪ ಗುಡ್ಡೋಡಗಿ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ನೆರವೇರಿಸಿ ಅವರು ಮಾತನಾಡಿದರು,. ಉತ್ತರ ಕರ್ನಾಟಕದಲ್ಲಿ ಮಠಾಧಿಧೀಶರು ಶಿಕ್ಷಣ ರಂಗ ಮುಂದೆ ಬರಲು ಶ್ರಮಿಸಿದ್ದಾರೆ. ಗ್ರಾಮಿಣ ಭಾಗದ ಸಂಸ್ಥೆಗಳನ್ನು ಬೆಳೆಸಲು ದಾನಿಗಳ ನೀಡಿದ ಸಹಾಯದಿಂದ ಶೈಕ್ಷಣಿಕ ಪ್ರಗತಿ ಹೊಂದಲು ಗುಡ್ಡೋಡಗಿಯಂತ ದಾನಿಗಳ ಅವಶ್ಯವಿದೆ ಎಂದರು.

ಜಿಲ್ಲೆಯಲ್ಲಿ ಅನುಷ್ಠಾನವಾಗುತ್ತಿರುವ ಯೋಜನೆಗಳು ಸೇರಿದಂತೆ 15ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಭದ್ರ ಬುನಾದಿ ಹಾಕಿದೆ. 203 ಕೆರೆಗಳನ್ನು ತುಂಬಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಮುಳವಾಡ
ಏತ ನೀರಾವರಿ, ಚಿಮ್ಮಲಗಿ ಏತ ನೀರಾವರಿ, ಬೂದಿಹಾಳ ಹಾಗೂ ಕೆರಾಪುರ ಏತ ನೀರಾವರಿ, ಚಡಚಣ ಏತ ನೀರಾವರಿ, ನಾಗರಬೆಟ ನೀರಾವರಿ ಹಾಗೂ ರಸ್ತೆ ಸೇತುವೆ ಕಟ್ಟಡ ಇನ್ನಿತರ ಕಾಮಗಾರಿಗಳು ಸೇರಿ ಪ್ರಸಕ್ತ ಸಾಲಿನಲ್ಲಿ ಒಟ್ಟು 13769.70ಕೋಟಿ ರೂ. ಗಳನ್ನು ಜಿಲ್ಲೆಯಲ್ಲಿ ಅನೇಕ ಯೋಜನೆ ಅನುಷ್ಟಾನಗೊಳ್ಳುತ್ತಿವೆ. 

ರಾಜ್ಯದಲ್ಲಿ ಕಳಂಕರಹಿತ ಆಡಳಿತ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರುತ್ತದೆ. ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆಗೆ ಶೀಘ್ರದಲ್ಲಿ ನೀರು ಹರಿಸಲಾಗುವುದು ಎಂದು ಹೇಳಿದರು.

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ಬಂಥನಾಳದ ಸಂಗನಬಸವ ಶಿವಯೋಗಿಗಳು ವಿಜಯಪುರ ಜಿಲ್ಲೆಯಲ್ಲಿ ಜನಿಸದಿದ್ದರೆ ಇಂದು ನಾವು ಕತ್ತಲೆಯಲ್ಲಿ ಇರಬೇಕಾಗುತ್ತಿತ್ತು. 

ವಿಜಯಪುರದಲ್ಲಿ ಬಂಗಾರೆಮ್ಮ ಸಜ್ಜನರಿಂದ 54ಎಕರೆ ಭೂಮಿ ದಾನಪಡೆದು ಬಿಎಲ್‌ಡಿಇ ಸಂಸ್ಥೆ ನಿರ್ಮಿಸಿ ಬೆಳಕು ಚೆಲ್ಲಿದರು. ಮಖ್ಯಮಂತ್ರಿ ಸಿದ್ದರಾಮಯ್ಯನವರು ಎಂದು ಆಗದ ಕೆಲಸ ಮಾಡಿ ರೈತರ ಬಾಳಿಗೆ ಬೆಳಕಾಗಿದ್ದಾರೆ ಎಂದು
ಹೇಳಿದರು. 

ಅಧ್ಯಕ್ಷತೆ ವಹಿಸಿದ್ದ ಸಿಂದಗಿ ಶಾಸಕ ರಮೇಶ ಭೂಸನೂರ ಮಾತನಾಡಿ, ಸಂಗನಬಸವ ಶಿವಯೋಗಿಗಳ ಪ್ರೇರಣೆಯಿಂದ ನನ್ನ ಕ್ಷೇತ್ರದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಹತ್ತು ವರ್ಷದ ನನ್ನ ಆಡಳಿತ ಅವಧಿಯಲ್ಲಿ ತಲಾ 5ಲಕ್ಷ ರೂ.ಗಳಂತೆ ಅನುದಾನ ನೀಡಲಾಗಿದೆ ಎಂದರು. 

ಬೀದರದ ಶಿವಕುಮಾರ ಮಹಾಶಿವಯೋಗಿಗಳು, ಬಂತನಾಳದ ವೃಷಭಲಿಂಗ ಮಹಾಶಿವಯೋಗಿಗಳು
ಮಾತನಾಡಿದರು. ಎಸ್‌ವಿವಿ ಸಂಘದ ಚೇರಮನ್‌ ಜೆ.ಎಸ್‌. ಹತ್ತಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್‌.ಎಸ್‌. ಕಲ್ಲೂರ, ಅಶೋಕ ಕುಲಕರ್ಣಿ, ಡಿ.ಎಸ್‌.ಗುಡ್ಡೋಡಗಿ, ಸಿದ್ದಪ್ಪ ಕೆಂಗನಾಳ ಉಪಸ್ಥಿತರಿದ್ದರು. ಪ್ರೊ| ಎ.ಪಿ. ಕಾಗವಾಡಕರ ಸ್ವಾಗತಿಸಿದರು. ಪಿ.ಬಿ. ಕಾಡಯ್ಯನಮಠ ನಿರೂಪಿಸಿದರು. ಎಸ್‌.ಎಸ್‌. ಕನಾಳ ವಂದಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.