ಪುರಸಭೆ ಗದ್ದುಗೆ ಗುದ್ದಾಟಕ್ಕೆ ತಿರುವು
ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿ ಮಾಡಿದ ಜೆಡಿಎಸ್-ಪಕ್ಷೇತರ ಸದಸ್ಯರು
Team Udayavani, Oct 28, 2020, 4:17 PM IST
ಮುದ್ದೇಬಿಹಾಳ: ತೀವ್ರ ಕುತೂಹಲ ಮೂಡಿಸಿದ್ದ ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯು ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಸದಸ್ಯರ ತಂಡ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರನ್ನು ಸೋಮವಾರ ಸಂಜೆ ಭೇಟಿ ಮಾಡಿದ ನಂತರ ತಿರುವು ಪಡೆದುಕೊಂಡಂತಾಗಿದೆ.
ಪುರಸಭೆಗೆ 23 ಸದಸ್ಯರಿದ್ದಾರೆ. ಬಿಜೆಪಿ, ಕಾಂಗ್ರೆಸ್ ತಲಾ 8, ಜೆಡಿಎಸ್ 2, ಪಕ್ಷೇತರರು 5 ಸ್ಥಾನ ಗಳಿಸಿದ್ದಾರೆ. ಐವರು ಪಕ್ಷೇತರ ಸದಸ್ಯರು ಪಟ್ಟಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಪರಿಗಣಿಸಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿಯವರನ್ನು ಬೆಂಬಲಿಸುತ್ತಾರೆ. ಹೀಗಾಗಿ ಪುರಸಭೆ ಆಡಳಿತಾ ಧಿಕಾರ ಬಿಜೆಪಿಗೆ ದೊರಕುತ್ತದೆ ಎನ್ನುವ ಮಾತು ಮೊದಲೆಲ್ಲ ಕೇಳಿ ಬರುತ್ತಿತ್ತು. ಆದರೆ ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಸದಸ್ಯರ ಒಗ್ಗಟ್ಟು ಪ್ರದರ್ಶನ ಬಿಜೆಪಿ ವಲಯದಲ್ಲಿ ನಿರಾಸೆ ಮೂಡಿಸಿದಂತಾಗಿದೆ.
ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ಹೊರ ಬಿದ್ದ ಮೂರು ದಿನಗಳ ನಂತರದಿಂದ ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಸದಸ್ಯರು ಒಟ್ಟಾಗಿಅಜ್ಞಾತ ಸ್ಥಳದಲ್ಲಿದ್ದರು. ಈಗ ಚುನಾವಣೆಗೆ ಎರಡುದಿನ ಇರುವಂತೆಯೇ ಸೋಮವಾರ ರಾತ್ರಿ ಎಲ್ಲರೂಡಿಕೆಶಿ ಭೇಟಿ ಮಾಡಿ ಒಗ್ಗಟ್ಟು ಪ್ರದರ್ಶಿಸಿದ ಫೋಟೊ ಬಹಿರಂಗಗೊಂಡು ಪುರಸಭೆ ಆಡಳಿತ ಗಾದಿಗೆ ಸ್ಪಷ್ಟತೆ ನೀಡಿದಂತಾಗಿದೆ.
ಏತನ್ಮಧ್ಯೆ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಜೆಡಿಎಸ್ ಸದಸ್ಯೆ ಪ್ರತಿಭಾ ಅಂಗಡಗೇರಿ ಅವರು ಡಿಕೆಶಿ ಸಮ್ಮುಖ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಹೀಗಾಗಿ ಕಾಂಗ್ರೆಸ್, ಪಕ್ಷೇತರ ಸದಸ್ಯರು ಇವರನ್ನೇಬೆಂಬಲಿಸಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದ್ದು ಇದಕ್ಕೆ ಸ್ಪಷ್ಟತೆ ಅ. 28ರ ಮಧ್ಯಾಹ್ನದ ನಂತರ ದೊರಕಲಿದೆ.
ಮೀಸಲಾತಿಯ ಲಾಭ: ಈ ಪುರಸಭೆಗೆ 31-8-2018ರಂದು ಚುನಾವಣೆ ನಡೆದು 3-9-2018ರಂದು ಮತ ಎಣಿಕೆ ನಂತರ ಫಲಿತಾಂಶ ಘೋಷಣೆ ಆಗಿತ್ತು. ಆಗ ಯಾವ ಪಕ್ಷಕ್ಕೂ ಬಹುಮತ ಲಭಿಸದೆ ಅತಂತ್ರ ಸ್ಥಿತಿ ನಿರ್ಮಾಣಗೊಂಡಿತ್ತು. ಬಿಜೆಪಿ, ಜೆಡಿಎಸ್, ಪಕ್ಷೇತರರ ಬಳಿ ಇರದ, ಕಾಂಗ್ರೆಸ್ ಬಳಿ ಮಾತ್ರ ಇದ್ದ ಮಹಿಳಾ ಎಸ್ಸಿ ಮೀಸಲಾತಿಗೆ ಅಧ್ಯಕ್ಷ ಸ್ಥಾನ ದೊರಕುವಂತೆ ಆಗಿನ ಸಮ್ಮಿಶ್ರ ಸರ್ಕಾರ ಆದೇಶ ಹೊರಡಿಸಿತ್ತು.
ಆಗ ಕಾಂಗ್ರೆಸ್ ಗೆಲುವಿನ ನಗೆ ಬೀರಿತ್ತು. ಇದೇ ಅ. 9ರಂದು ಬಿಜೆಪಿ ಸರ್ಕಾರ ಹೊಸ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿದಾಗ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಯಿತು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹಾಗೂ ಪಕ್ಷೇತರರಲ್ಲಿ ಈ ಮೀಸಲಾತಿಯಆಕಾಂಕ್ಷಿಗಳು ಇದ್ದರು. ಅಂತಿಮವಾಗಿ ಕಾಂಗ್ರೆಸ್, ಜೆಡಿಎಸ್, ಪಕ್ಷೇತರರು ಒಗ್ಗಟ್ಟು ಪ್ರದರ್ಶಿಸಿ ಮತ್ತೇ ಕಾಂಗ್ರೆಸ್ಗೆ ಅ ಧಿಕಾರ ಹಿಡಿಯುವ ಯೋಗ ಒಲಿದಂತಾಗಿದೆ.
-ಡಿ.ಬಿ. ವಡವಡಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ