ನೀರಿಗಾಗಿ ಪಪಂ ಕಚೇರಿಗೆ ಬೀಗ


Team Udayavani, Jan 9, 2018, 2:27 PM IST

vija-5.jpg

ನಾಲತವಾಡ: ಕಳೆದ ಒಂದು ತಿಂಗಳಿಂದ ಕುಡಿಯುವ ಹನಿ ನೀರಿಗಾಗಿ ಪರದಾಡುತ್ತೀದ್ದೇವೆ. ಪಟ್ಟಣ ಪಂಚಾಯತ್‌ ಆಡಳಿತ ವರ್ಗ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಪಟ್ಟಣದ 13ನೇ ವಾರ್ಡಿನ ರಡ್ಡೇರ ಪೇಟೆ ನಿವಾಸಿಗಳು ಖಾಲಿ ಕೊಡಗಳನ್ನು ಪ್ರದರ್ಶಿಸಿ ಪಪಂ ಕಚೇರಿ ಸಿಬ್ಬಂದಿಯನ್ನು ಹೊರ ತಳ್ಳಿ ಬೀಗ ಜಡಿದು ಪ್ರತಿಭಟಿಸಿದ ಘಟನೆ ಸೋಮವಾರ ನಡೆಯಿತು.

ರಡ್ಡೇರಪೇಟೆಯಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ರೈತಾಪಿ ಕುಟುಂಬಗಳಿವೆ. ಕಳೆದ ಒಂದು ತಿಂಗಳಿದಲೂ ಪಪಂ ವಾಟರ್‌ವೆುನ್‌ ಈ ವಿಷಯ ಗಮನಕ್ಕೆ ತಂದರೂ ಮಾತಿಗೆ ಬೆಲೆ ನೀಡುತ್ತಿಲ್ಲ, ಉದ್ದೇಶ ಪೂರ್ವಕವಾಗಿ ಟ್ಯಾಂಕ್‌ ನಲ್ಲಿ ನೀರಿಲ್ಲ, ವಿದ್ಯುತ್‌ ಇಲ್ಲ, ಮೋಟಾರ್‌ ಸುಟ್ಟಿದೆ ಎಂದು ಹೇಳುತ್ತಲೇ ಇತರೇ ವಾರ್ಡುಗಳಲ್ಲಿ ನೀರು ಬಿಡುತ್ತಾರೆ.

ನಮ್ಮ ಓಣಿಗೆ ಮಲತಾಯಿ ಧೋರಣೆ ಏಕೆ ಎಂದು ಪಪಂ ಆಡಳಿತ ವಿರುದ್ಧ ಪ್ರತಿಭಟನಾಕಾರರು ಹರಿಹಾಯ್ದರು. ಪಾಳಿ ಮೂಲಕ ನೀರು ಒದಗಿಸಿ ಎಂದು ಅಂಗಲಾಚಿದರೂ ಸಿಬ್ಬಂದಿಗಳು ಕ್ಯಾರೆ ಎನ್ನುತ್ತಿಲ್ಲ. ಈ ವಿಷಯ ಸಿಒ ಅವರ ಗಮನಕ್ಕೆ ಇದ್ದರೂ ಇದುವರೆಗೂ ಸ್ಥಳಕ್ಕೆ ಬಂದು ಯಾರೂ ವಾಸ್ತವ ಅರಿಯುತ್ತಿಲ್ಲ, ಗ್ರಾಪಂ ಇದ್ದ ವೇಳೆ ಸಮರ್ಪಕ ನೀರು ಒದಗಿಸಲಾಗುತ್ತಿದ್ದು ಪಪಂ ಆದ ಮೇಲೆ ನೀರು ಸಿಗದಂತಾಗಿದೆ ಎಂದು ದೂರಿದರು.

ಅಧ್ಯಕ್ಷರ ಭೇಟಿ: ಪ್ರತಿಭಟನಾಕಾರರ ಮನವೊಲಿಸಿ ಜಡಿದ ಬೀಗ ತೆರವುಗೊಳಿಸಿದ ಪಪಂ ಅಧ್ಯಕ್ಷ ಪೃಥ್ವಿರಾಜ್‌ ನಾಡಗೌಡ ಮಾತನಾಡಿ, ನಿಮ್ಮ ವಾರ್ಡಿನಲ್ಲಿ ನೀರಿನ ಟ್ಯಾಂಕ್‌ ನಿರ್ಮಿಸಲಾಗಿದೆ. ಅದಕ್ಕೆ ನೀರು ಹರಿಸಿ ಎಂದು ಸಿಬ್ಬಂದಿಗಳಿಗೆ ಸಾಕಷ್ಟು ಬಾರಿ ತಿಳಿಸಿದ್ದೇನೆ. ಸಿಬ್ಬಂದಿಗಳು ನನಗೆ ತಪ್ಪು ಮಾಹಿತಿ ಕೊಟ್ಟು ಅದಕ್ಕೆ ನೀರು ಹರಿಸುತ್ತಿಲ್ಲ.
ನಿಮ್ಮ ವಾರ್ಡಿಗೆ ನಾನೇ ಖುದ್ದು ಭೇಟಿ ನೀಡಿ ನೀರಿನ ಸಮಸ್ಯೆ ಬಗೆಹರಿಸುತ್ತೇನೆ ಸಹಕರಿಸಿ ಎಂದರು.

ವಾಟರ್‌ವೆುನ್‌ ಸಮ್ಮುಖದಲ್ಲಿ ನೀರಿನ ಸಮಸ್ಯೆಯನ್ನು ಆಲಿಸಿದ ನಾಡಗೌಡ ವಾಸ್ತವ ಮಾಹಿತಿಯನ್ನು ಪಡೆದುಕೊಂಡು ಮುಂದೆ ಈಗಾಗದಂತೆ ನೋಡಿಕೊಳ್ಳಲು ಸಿಬ್ಬಂದಿಗಳಿಗೆ ತಾಕೀತು ಮಾಡಿದರು. ರಾಯಪ್ಪ ಮೆದಿಕನಾಳ, ಮಹಾಂತೇಶ ಹಮಾತಿಗೌಡ್ರ, ಶಾಂತಪ್ಪ ಬೊಮ್ಮರೆಡ್ಡಿ, ಹನುಮಂತ ತೋಟದ, ಬಸಪ್ಪ ಬರಮರೆಡ್ಡಿ, ರಮೇಶ ಸುಳಿಬಾವಿ ಇದ್ದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.