ಮಹಾದೇವಿ ತಾಯಿ ರಥೋತ್ಸವ
Team Udayavani, Nov 22, 2018, 12:21 PM IST
ತಾಳಿಕೋಟೆ: ತಾಳಿಕೋಟೆ ಸಮಿಪದ ಗೋಟಖಂಡಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಬುಧವಾರ ಸಾಯಂಕಾಲ ಶ್ರೀಮಹಾದೇವಿ ತಾಯಿ ರಥೋತ್ಸವ ಸುಮಂಗಲೆಯರಿಂದ ಎಳೆಯಲ್ಪಡುವುದರೊಂದಿಗೆ ಜಾತ್ರಾ ಉತ್ಸವ ವಿಜೃಂಭಣೆಯಿಂದ ಜರುಗಿತು.
ರಥೋತ್ಸವ ಅಂಗವಾಗಿ ಏರ್ಪಡಿಸಿದ್ದ 155ನೇ ಮಹಾದೇವಿಯ ಮಹಾಪುರಾಣ ಮಂಗಲಗೊಂಡಿತು. ವಿಶೇಷವೆಂದರೆ ತಾಳಿಕೋಟೆ ಸಮಿಪದ ಗೋಟಖಂಡಿR ಗ್ರಾಮದಲ್ಲಿ ನಿರ್ಮಾಣಗೊಂಡಿದ್ದ ಮಾತೆ ಮಹಾದೇವಿ ತಾಯಿ ಮಂ ದಿರಕ್ಕೆ ವಿವಾಹವಾಗದ ಹೆಣ್ಣು ಮಕ್ಕಳು ಭೇಟಿ ನೀಡಿ ತಮಗೆ ಪತಿ ಭಾಗ್ಯವನ್ನು ಅಪೇಕ್ಷೀಸಿದಲ್ಲಿ ಮದುವೆ ಭಾಗ್ಯ ದೊರತೇ ದೊರೆಯುತ್ತದೆ ಎಂಬುದು ಈ ಭಾಗದಲ್ಲಿನ
ಹಿರಿಯರ ಮಾತು.
ಮುಖ್ಯವಾಗಿ ಈ ಗ್ರಾಮದಲ್ಲಿ ವಾಸಿಸುವ ಪುರುಷರು ಹಾಗೂ ಮಹಿಳೆಯರು ಮಾತೆ ಮಹಾದೇವಿ ತಾಯಿ ಮಂದಿರಕ್ಕೆ ದಿನನಿತ್ಯ ಭೇಟಿ ನೀಡಿ ಮಹಾಪೂಜೆ ಸಲ್ಲಿಸುತ್ತ ತಮ್ಮ ಬೇಕು ಬೇಡಿಕೆ ಈಡೇರಿಸಿಕೊಳ್ಳುತ್ತ ಸಾಗಿದ್ದಾರೆ. ಸಚ್ಚಿದಾನಂದ ಮಠದಲ್ಲಿ ಚಿದಂಬರರಾವ್ ಕುಲಕರ್ಣಿ ಅವರ ಪರವಾಗಿ ಅವರ ಪುತ್ರ ಸುರೇಶರಾವ್ ಕುಲಕರ್ಣಿ ದೇವಿ ಮಹಾಪುರಾಣ ಮುಂದುವರಿಸಿಕೊಂಡು ಬಂದಿದ್ದಾರೆ.
ವಿಶೇಷವೆಂದರೆ ಮಹಾದೇವಿ ತಾಯಿಯ ಪುರಾಣ ಪ್ರತಿ ವರ್ಷ ಮಹಾನವಮಿ ಅಮಾವಾಸ್ಯೆ ಮರುದಿನ ಪ್ರಾರಂಭಗೊಂಡು ದೀಪಾವಳಿ ನಂತರದ ದ್ವಾದಶಿ, ತ್ರಯೋದಶಿಯವರೆಗೆ ಸಾಗುತ್ತ ಬಂದಿದೆ.
ಗೋಟಖಂಡ್ರೀ ಗ್ರಾಮದಲ್ಲಿ ಜನಿಸಿದ ಮಹಿಳೆಯರು ಪತಿಯ ಭಾಗ್ಯ ಅಪೇಕ್ಷಿಸಿ ಮಹಾದೇವಿ ತಾಯಿ ವರ ಪಡೆದು ತಮ್ಮ
ಬೇಡಿಕೆ ಈಡೇರಿಸಿಕೊಂಡು ಸುಖಃ ಸಂಸಾರ ಸಾಗಿಸತೊಡಗಿದ್ದಾರೆ. ಪ್ರತಿ ವರ್ಷ ಈ ವರ ನೀಡಿದ ಮಹಾದೇವಿ ತಾಯಿಯನ್ನು ಮರೆಯದೇ ಆಕೆಯ ರಥೋತ್ಸವ ದಿನದಂದು ಆಗಮಿಸಿ ಎಲ್ಲ ಮುತ್ತೈದೆಯರು ಒಗ್ಗೂಡಿ ಪುರುಷರ ಆಸರೆ ಇಲ್ಲದೇ ರಥವನ್ನು ಎಳೆಯುವುದರೊಂದಿಗೆ ತಮ್ಮ ಭಕ್ತಿ ಸಮರ್ಪಿಸುತ್ತಿದ್ದಾರೆ.
ಮಹಾದೇವಿ ತಾಯಿಯ ನೂತನ ಮಹಾಮೂರ್ತಿಯನ್ನು ಗ್ರಾಮದ ಮಹಾದಾನಿ ಮಡಿವಾಳಮ್ಮ ಅಗಸರ ಎಂಬುವರು 70 ಸಾವಿರ ರೂ. ಖರ್ಚು ಮಾಡಿ ಸ್ವ ಇಚ್ಚೆಯಿಂದ ನಿರ್ಮಿಸಿ ಭಕ್ತಾದಿಗಳಿಗೆ ಭಕ್ತಿ ಸಮರ್ಪಿಸಲು ಅನವು ಮಾಡಿಕೊಟ್ಟಿದ್ದಾರೆ. ಅದರಂತೆ ನೂತನ ರಥ ಕಳೆದ 13 ವರ್ಷಗಳ ಹಿಂದೆಯೇ ಈ ಗ್ರಾಮದಿಂದ ಮುತ್ತೈದೆತನದ ಭಾಗ್ಯವನ್ನು ಪಡೆದುಕೊಂಡ ಹೋದ ಸುಮಂಗಲೆಯರೆಲ್ಲರೂ ತಮ್ಮ ತಮ್ಮ ಪತಿ ಮನೆಯಿಂದಲೇ ದೇಣಿಗೆ ಹಣ ಸಂಗ್ರಹಿಸಿ ಎಲ್ಲರೂ ಒಗ್ಗೂಡಿ 2.75 ಲಕ್ಷ ರೂ. ವೆಚ್ಚ ಭರಿಸಿ ಮಹಾದೇವಿ ತಾಯಿಯ ನೂತನ ರಥ ನಿರ್ಮಿಸಿದ್ದಾರೆ. ಈ ರಥವನ್ನು ಪ್ರತಿ ವರ್ಷ ಸುಮಂಗಲೆಯರೇ ಎಳೆದು ಭಕ್ತಿ ಸಮರ್ಪಿಸಿ ಸುಖಃ ಶಾಂತಿ ನೆಮ್ಮದಿ ಅಪೇಕ್ಷಿಸಿ ವರ ಪಡೆದು ಸಾಗುತ್ತಿದಂತೆ ಈ ಸಲವೂ ಸಹ ಭಕ್ತಿ ಭಾವದಿಂದ ರಥವನ್ನು ಎಳೆದು ಭಕ್ತಿಯನ್ನು ಸಮರ್ಪಿಸಿದರು.
ಈ ರಥವು ಮಹಾದೇವಿ ತಾಯಿ ಮಂದಿರದಿಂದ ಸುಮಾರು 1 ಕಿ.ಮೀ. ಮೀಟರ್ ಅಂತರದಲ್ಲಿರುವ ಬಸವೇಶ್ವರ ಪಾದಗಟ್ಟೆವರೆಗೆ ತಲುಪಿ ಮರಳಿ ಅದೇ ಮಾರ್ಗದಿಂದ ಶ್ರೀದೇವಿಯ ಮಂದಿರಕ್ಕೆ ತಲುಪಿ ನಂತರ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಜಾತ್ರಾ ಮಹೋತ್ಸವದಲ್ಲಿ ಮುಂಬೈ, ಪುಣೆ, ಸೊಲ್ಲಾಪುರ, ಕೊಲ್ಲಾಪುರ, ಹೈದ್ರಾಬಾದ್, ಕಲಬುರಗಿ, ಹುಬ್ಬಳ್ಳಿ-ಧಾರವಾಡ, ವಿಜಯಪುರ ನಗರ, ಪಟ್ಟಣಗಳಿಂದ ಆಗಮಿಸಿದ್ದ ಭಕ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ