ಸದ್ಬಳಕೆಯಾಗಲಿ ಸಾಲ ಸೌಲಭ್ಯ


Team Udayavani, Dec 20, 2020, 4:35 PM IST

ಸದ್ಬಳಕೆಯಾಗಲಿ ಸಾಲ ಸೌಲಭ್ಯ

ಸಿಂದಗಿ: ಸಹಕಾರ ಕ್ಷೇತ್ರ ಬೆಳವಣಿಗೆಯಲ್ಲಿ ದೇಶದ ಅಭಿವೃದ್ಧಿ ಅಡಗಿದೆ ಎಂದು ಪುರಸಭೆ ಅಧ್ಯಕ್ಷ ಡಾ|ಶಾಂತವೀರ ಮನಗೂಳಿ ಹೇಳಿದರು.

ಪಟ್ಟಣದ ಗಜಾನನ ವಿವಿಧೋದ್ದೇಶ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಕಾರ್ಯಾಲಯದಲ್ಲಿ ನಡೆದ ಗಜಾನನ ವಿವಿಧೋದ್ದೇಶ ಸೌಹಾರ್ದ ಪತ್ತಿನಸಹಕಾರಿ ನಿಯಮಿತದ 15ನೇ ವಾರ್ಷಿಕ ಸರ್ವಸಾಧಾರಣ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು.

ಒಂದು ಬ್ಯಾಂಕ್‌ ಬೆಳೆಯಬೇಕಾದಲ್ಲಿ ಗ್ರಾಹಕರ ಸಹಕಾರ ಅತ್ಯವಶ್ಯಕ. ಗ್ರಾಹಕರು ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಸದುಪಯೋಗ ಪಡೆದುಕೊಳ್ಳಬೇಕು. ಇಲ್ಲಿ ಸಾಲ ಪಡೆದು ಅದನ್ನು ಸದುಪಯೋಗಮಾಡಿಕೊಂಡು ಜೀವನದಲ್ಲಿ ಆರ್ಥಿಕ ಜೀವನ ಸುಧಾರಿಸಿಕೊಳ್ಳಬೇಕು ಎಂದು ಹೇಳಿದರು.

ಪಟ್ಟಣದ ಗಜಾನನ ವಿವಿಧೋದ್ದೇಶ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತವುಸಹಕಾರಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದೆ. ಪ್ರತಿ ವರ್ಷ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹ ನೀಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು.

ಗಜಾನನ ವಿವಿಧೋದ್ದೇಶ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ ಮಾತನಾಡಿ, 2005ರಲ್ಲಿ 4 ಲಕ್ಷ ರೂ. ಬಂಡವಾಳದೊಂದಿಗೆ ಪ್ರಾರಂಭವಾದ ಈ ಸಂಸ್ಥೆ 15 ವರ್ಷದಲ್ಲಿ ಸಂಸ್ಥೆಯ ಒಟ್ಟು ಬಂಡವಾಳ 14.25 ಕೋಟಿ ರೂ. ಆಗಿದೆ. ಪ್ರಸಕ್ತ ವರ್ಷದಲ್ಲಿ 46.68 ಲಕ್ಷ ರೂ. ಲಾಭದಲ್ಲಿದೆ ಎಂದರು.

ಇದೇ ಸಂದರ್ಭದಲ್ಲಿ 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 80 ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ ಸದಸ್ಯರ ಮಕ್ಕಳಾದ ಅನಿತಾ ಕುಲಕರ್ಣಿ, ಪ್ರೀಯಾ ಪಾಟೀಲ, ಹರ್ಷಿತಾ ಕುಲಕರ್ಣಿ, ಸುಪ್ರಿತಾ ಜೋಶಿ, ಸುಹಾಸ ಮಿರ್ಜಿಕರ ಅವರಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.

ಸಂಸ್ಥೆ ಉಪಾಧ್ಯಕ್ಷ ಎಸ್‌.ಆರ್‌.ಪೋತದಾರ, ನಿರ್ದೇಶಕರಾದ ಡಾ| ಗಿರೀಶ ಕುಲಕರ್ಣಿ, ವಿಜಯಕುಮಾರ ಕುಲಕರ್ಣಿ, ಶರದ ನಾಡಗೌಡ, ಚಿಂತಾಮಣಿ ಕುಲಕರ್ಣಿ, ಆನಂದರಾವ್‌ ಕುಲಕರ್ಣಿ, ವಿವೇಕಾನಂದ (ನಾರಾಯಣ) ಕುಲಕರ್ಣಿ, ಭೀಮಾಶಂಕರ ಕುಲಕರ್ಣಿ,ದಯಾನಂದ ಪತ್ತಾರ, ಎಂ.ಎ. ಸಿಂದಗೇರಿ,ಎಸ್‌.ಎಸ್‌. ಸೋಮಯಾಜಿ, ವಿ.ವೈ. ಮಿರ್ಜಿಕರ, ವ್ಯವಸ್ಥಾಪಕ ಅವಧೂತ ಜೋಶಿ ವೇದಿಕೆಯಲ್ಲಿದ್ದರು.

ಸದಸ್ಯರಾದ ಅಶೋಕ ಕುಲಕರ್ಣಿ, ವಾಸುದೇವ ಪೋತದಾರ, ಎಚ್‌.ಜಿ. ಪೋದ್ದಾರ ಸೇರಿದಂತೆ ಇನ್ನುಳಿದ ಸದಸ್ಯರು,ಬ್ಯಾಂಕ್‌ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಂಗರಾವ್‌ ಖೇಡಗಿಕರ ಸ್ವಾಗತಿಸಿದರು. ಸತೀಶ ಕುಲಕರ್ಣಿ ನಿರೂಪಿಸಿದರು. ಶರದ ನಾಡಗೌಡ ಜೋಶಿ ವಂದಿ ಸಿದರು.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.