ಸಾಲ ಸೌಲಭ್ಯ ಸದುಪಯೋಗವಾಗಲಿ


Team Udayavani, Jan 4, 2021, 5:51 PM IST

ಸಾಲ ಸೌಲಭ್ಯ ಸದುಪಯೋಗವಾಗಲಿ

ಸಿಂದಗಿ: ದೇಶದ ರೈತರ ಆರ್ಥಿಕ ಜೀವನಅಭಿವೃದ್ಧಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿಸಂಘಗಳ ಪಾತ್ರ ಹಿರಿದಾಗಿದೆ ಎಂದು ವಿಜಯಪುರ ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ ಹೇಳಿದರು.

ಪಟ್ಟಣದ ಆಶೀರ್ವಾದ ಕಲ್ಯಾಣ ಮಂಟಪದಲ್ಲಿವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿ.ವಿಜಯಪುರ ಕೇಂದ್ರ ಕಚೇರಿ ಅಡಿಯಲ್ಲಿ ಜರುಗಿದಸಿಂದಗಿ ತಾಲೂಕಿನ ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯ ನಿರ್ವಾಹಕರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.ದೇಶದ ಬೆನ್ನೆಲುಬು ರೈತ. ದೇಶ ಹಳ್ಳಿಗಳಿಂದಕೂಡಿದ್ದು ಕೃಷಿ ಪ್ರಧಾನ ದೇಶವಾಗಿದೆ. ಗ್ರಾಮೀಣಮಟ್ಟದಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿಸಂಘಗಳು ಜನತೆ ಹಾಗೂ ರೈತಾಪಿ ವರ್ಗದವರದೈನಂದಿನ ಬದುಕಿಗೆ ಹಾಗೂ ಕೃಷಿ ಅಭಿವೃದ್ಧಿಗೆ ಆರ್ಥಿಕ ನೆರವು ನೀಡಿ, ಅಗತ್ಯ ಸೇವೆಗಳನ್ನು ಒದಗಿಸುವುದರೊಂದಿಗೆ ಸಂಜೀವಿನಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಸಹಕಾರ ಸಂಘಗಳವಿಶ್ರಾಂತ ಅಪರ ನಿಬಂಧಕರು ಹಾಗೂವಿಜಯಪುರ ಡಿಸಿಸಿ ಬ್ಯಾಂಕಿನ ವೃತ್ತಿಪರ ನಿರ್ದೇಶಕಎಂ.ಜಿ. ಪಾಟೀಲ ಮಾತನಾಡಿ, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಗಳ ಸಮರ್ಪಕ ಕಾರ್ಯನಿರ್ವಹಣೆಗೆ ಸಹಕಾರ ಸಂಘಗಳ ಕಾಯ್ದೆ, ಕಾನೂನುಗಳ ಪರಿಪಾಲನೆ, ಸಂಘಗಳಿಂದ ಸರಕಾರದ ವಿವಿಧ ಯೋಜನೆಗಳ ಅನುಷ್ಠಾನ,ಸದಸ್ಯರಿಗೆ ಅಗತ್ಯ ವಸ್ತುಗಳ ವಿತರಣೆ ಹಾಗೂ ಇತರೆ ಸೇವಾ ಸೌಲಭ್ಯತೆಗಳು ಸಹಕಾರಿಯಾಗಿವೆ ಎಂದು ಹೇಳಿದರು.

2020-21ನೇ ಸಾಲಿಗೆ ರಾಜ್ಯ ಸರಕಾರಜಾರಿಗೊಳಿಸಿದ ಶೂನ್ಯ ಬಡ್ಡಿ ದರದಲ್ಲಿ ಒಂದುಕುಟುಂಬಕ್ಕೆ ಗರಿಷ್ಠ 3 ಲಕ್ಷ ರೂ.ವರೆಗೆ ಅಲ್ಪಾವಧಿ  ಬೆಳೆ ಸಾಲ ಹಾಗೂ ಕೃಷಿ, ಕೃಷಿ ಸಂಬಂಧಿತ ಚಟುವಟಿಕೆಗಳಿಗಾಗಿ ಕುಟುಂಬ ಒಂದಕ್ಕೆ ರಿಯಾಯಿತಿ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷ ರೂ.ವರೆಗೆ ಮಧ್ಯಮಾವಧಿ, ದೀರ್ಘಾವಧಿ ಯೋಜನೆಗಳ ಬಗ್ಗೆ ಸವಿಸ್ತಾರ ಮಾರ್ಗದರ್ಶನ ನೀಡಿದರು. ರೈತರಿಗೆ ಈ ದಿಶೆಯಲ್ಲಿ ಸೂಕ್ತ ತಿಳಿವಳಿಕೆ ನೀಡುವುದರೊಂದಿಗೆ ಎಲ್ಲ ಯೋಜನೆಗಳನ್ನುಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಿಳಿಸಿದರು.

ವಿಜಯಪುರ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಹನುಮಂತ್ರಾಯಗೌಡ ಬಿರಾದಾರ ಪಾಟೀಲಮಾತನಾಡಿ, ವಿಜಯಪುರ ಡಿಸಿಸಿ ಬ್ಯಾಂಕು ವಿವಿಧ ಉದ್ದೇಶಗಳಿಗಾಗಿ ಒಟ್ಟು 2391 ಕೋಟಿ ರೂ. ಸಾಲನೀಡಿದೆ. ಕೃಷಿಗಾಗಿ 1170 ಕೋಟಿ ರೂ. ಸಾಲನೀಡಿದೆ. ವಿಜಯಪುರ ಜಿಲ್ಲೆಯಲ್ಲಿ ಬದಲಾದ ಕೃಷಿ ಮತ್ತು ಬೆಳೆ ಪದ್ಧತಿಗೆ ಅನುಗುಣವಾಗಿ2020-21ನೇ ಸಾಲಿನಲ್ಲಿ 1100 ಕೋಟಿರೂ. ಕೃಷಿ ಸಾಲ ಹಾಗೂ 900 ಕೋಟಿ ರೂ. ಕೃಷಿಯೇತರ ಸಾಲ ಸೇರಿ ಒಟ್ಟು 2000 ಕೋಟಿರೂ. ಸಾಲ ನೀಡುವ ಯೋಜನೆ ಹೊಂದಿದೆ. ಈ ಯೋಜನೆಯ ಪ್ರಯೋಜನ ಪಡೆಯಬೇಕುಎಂದು ಹೇಳಿದರು.

ವಿಜಯಪುರ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್‌.ಡಿ. ಬಿರಾದಾರ ಮಾತನಾಡಿದರು.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಾಜಿನಿರ್ದೇಶಕ ಶಿವಪ್ಪಗೌಡ ಬಿರಾದಾರ, ಎ.ಎಸ್‌. ನಾಡಗೌಡ, ಡಿಸಿಸಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕಸತೀಶ ಪಾಟೀಲ, ಉಪ ಪ್ರಧಾನ ವ್ಯವಸ್ಥಾಪಕ ಟಿ.ವೈ. ಬರಕಡೆ, ಎಸ್‌.ಜಿ. ಬಡಾನವರ,ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್‌.ಜಿ. ಕುಂಬಾರ, ಎಸ್‌.ಆರ್‌. ನಾಯಕ,ಆರ್‌.ಎಂ. ಬಣಗಾರ, ಡಿಸಿಸಿ ಬ್ಯಾಂಕ್‌ ಹಾಗೂಸಿಂದಗಿ ತಾಲೂಕಿನ ಎಲ್ಲ ಪಿಕೆಪಿಎಸ್‌ಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಭಾಗವಹಿಸಿದ್ದರು.ಪ್ರಧಾನ ವ್ಯವಸ್ಥಾಪಕ ಸತೀಶ ಪಾಟೀಲಸ್ವಾಗತಿಸಿದರು. ಆರ್‌.ಎಂ. ಬಣಗಾರ ನಿರೂಪಿಸಿದರು. ವ್ಯವಸ್ಥಾಪಕ ಎಂ.ಜಿ. ಬಿರಾದಾರ ನಿರೂಪಿಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.