ಮನುಸ್ಮೃತಿ ಕೃತಿಗೆ ಬೆಂಕಿ ಹಚ್ಚಿ ಆಕ್ರೋಶ
Team Udayavani, Aug 14, 2018, 11:18 AM IST
ವಿಜಯಪುರ: ದೆಹಲಿಯಲ್ಲಿ ಭಾರತೀಯ ಸಂವಿಧಾನ ಸುಟ್ಟು ಹಾಕಿದ ಕೃತ್ಯ ಖಂಡಿಸಿ ನಗರದಲ್ಲಿ ಸಂವಿಧಾನ ಉಳಿವಿಗಾಗಿ ಕರ್ನಾಟಕ ಸಂಘಟನೆ ಕಾರ್ಯಕರ್ತರು ಮನುಸ್ಮೃತಿ ಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಸೋಮವಾರ ನಗರದ ಡಾ| ಬಿ.ಆರ್. ಅಂಬೇಡ್ಕರ್ ವೃತ್ತದ ಎದುರು ಪ್ರತಿಭಟನೆಗೆ ಮುಂದಾದ ಸಂವಿಧಾನ ಉಳಿವಿಗಾಗಿ ಸಂಘಟನೆ ಕಾರ್ಯಕರ್ತರು ಭಾರತದ ಸಂವಿಧಾನವನ್ನೇ ಸಾರ್ವಜನಿಕವಾಗಿ ಸುಟ್ಟು ಹಾಕಿದವರನ್ನು ಕೂಡಲೇ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ಮನುಸ್ಮೃತಿಯನ್ನು ಹರಿದು ಹಾಕಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡ ಜಿತೇಂದ್ರ ಕಾಂಬಳೆ, ಭಾರತೀಯರ ಪಾಲಿಗೆ ಸರ್ವಸ್ವವಾಗಿರುವ ಸಂವಿಧಾನವೇ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರ ಗ್ರಂಥ. ಸಂವಿಧಾನವನ್ನೇ ಸುಟ್ಟು ಹಾಕುವ ಮಟ್ಟಕ್ಕೆ ದೇಶದ್ರೋಹದ ಕೃತ್ಯ ಎಸಗಿ ಅಪಮಾನ ಮಾಡಿದವರನ್ನು ಕೂಡಲೇ ಬಂಧಿಸಿ ಶಿಕ್ಷೆ ನೀಡಬೇಕು. ಭಾರತೀಯರ ಸ್ವಾಭಿಮಾನ, ಘನತೆ ಬದುಕನ್ನು ಎತ್ತಿ ಹಿಡಿಯುವ ಸಂವಿಧಾನವನ್ನೇ ಸುಡುತ್ತಿರುವ ಪ್ರಕರಣ ನಡೆದಿರುವದು ನಿಜಕ್ಕೂ ದುರದೃಷ್ಟಕರ. ಈ ರೀತಿ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದರು.
ಪ್ರಭುಗೌಡ ಪಾಟೀಲ ಮಾತನಾಡಿ, ದೇಶದ ಸಂವಿಧಾನನ್ನೇ ಸುಡುವ ಮಟ್ಟಕ್ಕೆ ಇಳಿದಿರುವ ಕೃತ್ಯ ಅಕ್ಷಮ್ಯ ಅಪರಾಧ.
ಭಾರತದಲ್ಲಿದ್ದುಕೊಂಡು ಭಾರತದ ಸಂವಿಧಾನಕ್ಕೆ, ಸಂವಿಧಾನದ ಮೂಲಕ ದತ್ತವಾಗಿರುವ ಕಾನೂನುಗಳನ್ನೇ ಉಲ್ಲಂಘಿಸಿ ಸಂವಿಧಾನಕ್ಕೆ ಅಪಮಾನ ಮಾಡುವ ಕೃತ್ಯ ಗಂಭೀರ ಸ್ವರೂಪದ್ದಾಗಿದೆ. ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು. ವಿವಿಧ ದಲಿತ ಸಂಘಟನೆಗಳ ಪ್ರಮುಖರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…