ಲಕ್ಷಾಂತರ ರೂ.ಮೌಲ್ಯದ ಗಾಂಜಾ ವಶ: ಅಬಕಾರಿ ಅಧಿಕಾರಿಗಳಿಂದ ಓರ್ವನ ಬಂಧನ
Team Udayavani, Sep 3, 2021, 7:57 PM IST
ವಿಜಯಪುರ: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಓರ್ವ ಆರೋಪಿಯನ್ನು ಜಿಲ್ಲೆಯ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಅಮೋಘ ಸಿದ್ದ ಯಮನಪ್ಪ ಲೋಗಾಂವಿ ಬಂಧಿತ ಆರೋಪಿ. ಈತನಿಂದ ಲಕ್ಷಾಂತರ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ಬೆಳಗಾವಿ ಅಬಕಾರಿ ಅಪರಾಧ ವಿಭಾಗದ ಅಪರ ಆಯುಕ್ತ ಡಾ.ವೈ ಮಂಜುನಾಥ ಹಾಗೂ ವಿಜಯಪುರ ಉಪ ಆಯುಕ್ತೆ ಸೈಯೀದ ಅಜ್ಮತ್ ಆಪ್ರೀನ್ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿ ಆಧರಿಸಿ ಉಪ ಅಧೀಕ್ಷಕ ಎಚ್.ಎಸ್. ವಜ್ಜರಮಟ್ಟಿ ಹಾಗೂ ಅಬಕಾರಿ ನಿರೀಕ್ಷಕರು ಜಿಲ್ಲಾ ವಿಚಕ್ಷಣ ಧಳದ ನಿರೀಕ್ಷಕ ಮಹಾದೇವ ಪೂಜಾರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ರತ್ನಾಪೂರ ಕ್ರಾಸ್ ನಲ್ಲಿ ಆರೋಪಿ ಅಮೋಘ ಸಿದ್ದ ಯಮನಪ್ಪ ಲೋಗಾಂವಿ ತನ್ನ ದ್ವೀಚಕ್ರ ವಾಹನದಲ್ಲಿ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾ ಸಾಗಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಆರೋಪಿ ಬಳಿ 1.10 ಲಕ್ಷ ರೂ. ಮೌಲ್ಯದ 4 ಕೆಜಿ ಒಣಗಿದ ಗಾಂಜಾ ಪತ್ತೆಯಾಗಿದ್ದು, ವಶಕ್ಕೆ ಪಡೆದಿದ್ದಾರೆ.
ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಜಯಪುರ ಅಬಕಾರಿ ಪಿಎಸ್ಐ ಪ್ರಕಾಶ ಜಾಧವ, ಪೇದೆಗಳಾದ ಆಶ್ರೀತ್, ಈರಗೊಂಡ ಹಟ್ಟಿ, ಭೀಮಣ್ಣ ಕುಂಬಾರ ಹಾಗೂ ವಾಹನ ಚಾಲಕ ಪರಶುರಾಮ ತೆಲಗಿ ದಾಳಿಯಲ್ಲಿ ಪಾಲ್ಹೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ