ಮಾರುಕಟ್ಟೆ ಕಾಮಗಾರಿಗಿಂದು ಚಾಲನೆ


Team Udayavani, Jul 12, 2021, 8:24 PM IST

ggggggggggggggggggggggggggg

ವಿಜಯಪುರ: ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಸುಸಜ್ಜಿತ ಮೆಗಾ ಮಾರುಕಟ್ಟೆ ನಿರ್ಮಾಣಕ್ಕೆ ಸೋಮವಾರ ಶಂಕುಸ್ಥಾಪನೆ ನೆರವೇರಲಿದ್ದು, ಪಟ್ಟಣದ ವ್ಯಾಪಾರಿಗಳ ಬಹು ವರ್ಷಗಳ ಕನಸು ನನಸಾಗುವ ಕಾಲ ಕೂಡಿ ಬಂದಿದೆ. ಜು.12ರಂದು 30 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ದೊರೆಯಲಿದೆ.

ಇಂಡಿ ಪಟ್ಟಣದ ವ್ಯಾಪಾರಿಗಳು ಹಾಗೂ ನಾಗರಿಕರ ಬಹು ವರ್ಷಗಳ ಬೇಡಿಕೆಯಾಗಿದ್ದ ಮೆಗಾ ಮಾರುಕಟ್ಟೆ ನಿರ್ಮಾಣಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಒತ್ತಾಸೆ ಕಾರಣದಿಂದ ಯೋಜನೆ ಸಿದ್ಧವಾಗಿ ವರ್ಷಗಳೇ ಕಳೆದಿವೆ. ಕಳೆದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವದಲ್ಲಿದ್ದಾಗಲೇ ಈ ಯೋಜನೆಗೆ ಚಾಲನೆ ನೀಡಬೇಕೆಂಬ ಉದ್ದೇಶ ಹೊಂದಲಾಗಿತ್ತು.

ಯೋಜನೆ ಅನುಷ್ಠಾನದ ಹಂತದಲ್ಲೇ ಚುನಾವಣೆ ಎದುರಾಗಿದ್ದವು. ನಂತರ ಬಂದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಯ ಸಮ್ಮಿಶ್ರ ಸರ್ಕಾರದಲ್ಲಿ ಕಾಮಗಾರಿಗೆ ಚಾಲನೆ ನೀಡಬೇಕೆಂಬ ಚಿಂತನೆ ಇದ್ದರೂ ಕೈಗೂಡಲಿಲ್ಲ. ಕಳೆದ ವರ್ಷ ಕೋವಿಡ್‌ ಕಾರಣದಿಂದ ಯೋಜನೆಗೆ ಚಾಲನೆ ನೀಡಲು ಸಾಧ್ಯವಾಗಿರಲಿಲ್ಲ. ಇಂಡಿ ಪಟ್ಟಣದಲ್ಲಿ ಅತ್ಯಾಧುನಿಕ ಹಾಗೂ ಅತ್ಯಂತ ವ್ಯವಸ್ಥಿತ ರೀತಿಯಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೆಗಾ ಮಾರುಕಟ್ಟೆ ನಿರ್ಮಾಣಕ್ಕೆ ಮೊದಲ ಹಂತದ ಕಾಮಗಾರಿಗೆ 10 ಕೋಟಿ ರೂ. ಹಣದಲ್ಲಿ ಕಾಮಗಾರಿಗೆ ಚಾಲನೆ ಸಿಗಲಿದೆ. ಸದರಿ ಯೋಜನೆ ನಿರ್ಮಾಣಕ್ಕೆ ಕೆಯುಐಡಿಎಫ್‌ಸಿ 21 ಕೋಟಿ ರೂ. ಸಾಲ ನೀಡಲಿದ್ದು, ಇಂಡಿ ಪುರಸಭೆ 9 ಕೋಟಿ ರೂ. ವಂತಿಗೆ ನೀಡಲಿದೆ.

ಮೊದಲ ಹಂತದಲ್ಲಿ ಕೆಯುಐಡಿಎಫ್‌ಸಿ 7 ಕೋಟಿ ರೂ. ಹಾಗೂ ಇಂಡಿ ಪುರಸಭೆ 3 ಕೋಟಿ ರೂ. ಅನುದಾನ ಸೇರಿ 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ದೊರೆಯಲಿದೆ. 1 ಎಕರೆ 6 ಗುಂಟೆ ನಿವೇಶನದಲ್ಲಿ ತಲೆ ಎತ್ತಲಿರುವ ಮೆಗಾ ಮಾರುಕಟ್ಟೆ ವಾಣಿಜ್ಯ ಸಂಕೀರ್ಣದಲ್ಲಿ 245 ಮಳಿಗೆ ನಿರ್ಮಾಣವಾಗಲಿದೆ. ಗ್ರೌಂಡ್‌ ಫ್ಲೋರ್‌ ನಲ್ಲಿ 98 ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಿದ್ದು, ನೆಲ ಮಾಳಿಗೆಯಲ್ಲಿ ಮಹಡಿಯಲ್ಲಿ 104 ಮಳಿಗೆಗಳ ನಿರ್ಮಾಣವಾಗಲಿದೆ.

ಮೊದಲ 112 ಹಾಗೂ ಎರಡನೇ ಮಹಡಿಯಲ್ಲಿ 29 ತಲಾ ಮಳಿಗೆ ನಿರ್ಮಾಣವಾಗಲಿವೆ. ಈ ಮೆಗಾ ಮಾರುಕಟ್ಟೆ ನಿರ್ಮಾಣದಿಂದ ವ್ಯಾಪಾರಿಗಳಿಗೆ ಮಾತ್ರವಲ್ಲ ಗ್ರಾಹಕರಿಗೆ ಅದರಲ್ಲೂ ಗ್ರಾಮೀಣ ಪರಿಸರದಿಂದ ಬರುವ ಜನರಿಗೆ ಒಂದೇ ಸೂರಿನಲ್ಲಿ ತಮ್ಮ ಅಗತ್ಯದ ವಸ್ತುಗಳು ಸಿಗುವ ಕಾರಣ ಸಮಯ, ಶ್ರಮ ಎಲ್ಲವೂ ಅನುಕೂಲವಾಗಲಿದೆ. ಇದರೊಂದಿಗೆ ಮಹಾರಾಷ್ಟ್ರ ರಾಜ್ಯದ ಗಡಿಯಲ್ಲಿರುವ ಕರ್ನಾಟಕ ರಾಜ್ಯದ ಹಾಗೂ ವಿಜಯಪುರ ಜಿಲ್ಲೆಯ ಗಡಿಯಲ್ಲಿರುವ ಕೊನೆಯ ಪಟ್ಟಣದಲ್ಲಿ ಮಹಾನಗರಗಳಂತೆ ಒಂದೇ ಸೂರಿನಲ್ಲಿ ಎಲ್ಲವೂ ದೊರೆಯುವ ವಿಶಿಷ್ಟ ವಾಣಿಜ್ಯ ವಹಿವಾಟಿನ ಮೆಗಾ ಮಾರುಕಟ್ಟೆ ತಲೆ ಎತ್ತಲಿದೆ.

 

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.