ತವರಿಗೆ ಆಗಮಿಸಿದ ವೀರಯೋಧ ಕಾಶಿರಾಯ ಪಾರ್ಥಿವ ಶರೀರ: ಪಂಚಭೂತಗಳಲ್ಲಿ ಲೀನ
Team Udayavani, Jul 4, 2021, 1:41 PM IST
ವಿಜಯಪುರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ವಿರುದ್ದದ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಬಸವನಾಡಿನ ವೀರಯೋಧ ಕಾಶಿರಾಯ ಪಾರ್ಥೀವ ಶರೀರ ಭಾನುವಾರ ತವರಿಗೆ ಆಗಮಿಸಿತು.
ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಕಾಶೀರಾಯ ಬೊಮ್ಮನಹಳ್ಳಿ ಅವರ ಪಾರ್ಥಿವ ಶರೀರ ಬೆ.11ಕ್ಕೆ ಸ್ವಗ್ರಾಮಕ್ಕೆ ಆಗಮಿಸಿದಾಗ ಕುಟುಂಬ ಸದಸ್ಯರ ದುಃಖದ ಕಟ್ಟೆ ಒಡೆದು, ಆಕ್ರಂದ ಮುಗಿಲು ಮುಟ್ಟಿತ್ತು.
ಗ್ರಾಮಸ್ಥರು ಪರಾಕ್ರಮಿ ವೀರಪುತ್ರನ ಶರೀರವನ್ನು ದೇಶಭಕ್ತಿಯ ಘೋಷಣೆಗಳೊಂದಿಗೆ ಸ್ವಾಗತಿಸಿದರು. ಹುತಾತ್ಮ ವೀರಯೋಧನ ಕಳೇಬರವನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಿ, ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿರುವ ಸರಕಾರಿ ಪ್ರಾಥಮಿಕ ಶಾಲೆಗೆ ತರಲಾಯಿತು.
ರಾಜ್ಯ ಸರಕಾರದ ಪರವಾಗಿ ಪೊಲೀಸರು, ಸೇನೆಯ ಪರವಾಗಿ ಕಳೇಬರದೊಂದಿಗೆ ಬಂದಿದ್ದ ಸೇನೆಯ ಜವಾನರು ಗೌರವ ಸಲ್ಲಿಸಿದರು.
ಇದನ್ನೂ ಓದಿ:ಕೋವಿಡ್ ಸೋಂಕನ್ನು ಹೊರದೇಶದಿಂದ ತಂದಿದ್ದು ನರೇಂದ್ರ ಮೋದಿ: ಧ್ರುವನಾರಾಯಣ್
ನಂತರ ನಡೆದ ಸಾರ್ವಜನಿಕರ ದರ್ಶನ ಕಾರ್ಯಕ್ರಮದಲ್ಲಿ ಯರನಾಳ ಮಠದ ಗುರುಸಂಗನಬಸವ ಶ್ರೀಗಳು, ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಸಹಾಯಕ ಆಯುಕ್ತ ಬಲರಾಮ ಲಮಾಣಿ, ಡಿಎಸ್ಪಿ ಅನಿಲಕುಮಾರ ಕೋಳೂರು, ತಹಶಿಲ್ದಾರರ ಎಂ.ಎನ್. ಬಳಿಗಾರ ಸೇರಿದಂತೆ ಜಿಲ್ಲೆಯ ಗಣ್ಯರು ಹುತಾತ್ಮ ವೀರಯೋಧನಿಗೆ ಅಂತಿಮ ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ