ಜಮೀನು ಸಿಗದಿದ್ದರೆ ಸಾಮೂಹಿಕ ಆತ್ಮ ಹತ್ಯೆ ಎಚ್ಚರಿಕೆ


Team Udayavani, Aug 7, 2022, 5:30 PM IST

12-protest

ಮುದ್ದೇಬಿಹಾಳ: ಗಂಗೂರ ಗ್ರಾಮದ ಮಾದಿಗ ಸಮಾಜದ ಕುಟುಂಬವೊಂದಕ್ಕೆ ಶತಮಾನದ ಹಿಂದೆ ನೀಡಿದ್ದ ಮಾರುತೇಶ್ವರ ದೇವಾಲಯದ ಚಾಕರಿ ಜಮೀನನ್ನು ಮಾದಿಗ ಸಮಾಜದ ಸ್ಮಶಾನಕ್ಕಾಗಿ ಬಳಸಲು ನೀಡಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದೊಂದಿಗೆ ವಿವಾದಿತ ಜಮೀನಿನಲ್ಲಿ ಮಾದಿಗ ಕುಟುಂಬದವರು ಶನಿವಾರದಿಂದ ಧರಣಿ ಪ್ರಾರಂಭಿಸಿದ್ದಾರೆ.

ಈ ಕುರಿತು ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಗಿದ್ದು ಈ ಜಮೀನಿಗೋಸ್ಕರ ನಡೆಸಿದ ಗಂಗೂರಿನಿಂದ ಮುದ್ದೇಬಿಹಾಳವರೆಗಿನ ಪಾದಯಾತ್ರೆ ಸೇರಿ ಕೆಲ ಹಂತದ ಹೋರಾಟಗಳನ್ನು ಉಲ್ಲೇಖೀಸಲಾಗಿದೆ. ಆ. 6ರ ಬೆಳಗ್ಗೆ 10:30ರಿಂದ ಆ. 14ರ ಮಧ್ಯರಾತ್ರಿ 12ರವರೆಗೆ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ. ಸೂಕ್ತ ಸ್ಪಂದನೆ ದೊರೆಯದಿದ್ದರೆ ಅಂದೇ ಮಧ್ಯರಾತ್ರಿ ಗ್ರಾಮದ ಮಾದಿಗ ಸಮಾಜದವರಿಂದ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಧರಣಿ ಸತ್ಯಾಗ್ರಹಕ್ಕೆ ಸೂಕ್ತ ಬಂದೋಬಸ್ತ್ ಒದಗಿಸಬೇಕು ಎಂದು ಕೋರಲಾಗಿದೆ. ಇದೇ ವಿಷಯವಾಗಿ ಆ. 10ರಿಂದ 14ರವರೆಗೆ ಗಂಗೂರ ಮತ್ತು ಮುದ್ದೇಬಿಹಾಳದಲ್ಲಿ ಏಕ ಕಾಲಕ್ಕೆ ದಲಿತ ಸಂಘಟನೆಗಳ ಒಕ್ಕೂಟದಿಂದ ಧರಣಿ ಸತ್ಯಾಗ್ರಹ ಆರಂಭಿಸಲಾಗುತ್ತದೆ. ಆ. 11ರಂದು ದಲಿತರ ಜಮೀನು ಖರೀದಿ ಕೊಟ್ಟವರಿಗೆ, ಖರೀದಿಸಿದವರಿಗೆ ಒಂದು ಹನಿ ರಕ್ತ ಸಂಗ್ರಹಿಸಿ ನೀಡಲಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಗಂಗೂರ ಗ್ರಾಮದ ರಿ.ಸ.ನಂ. 11/2, 11/3, 11/4 ಜಮೀನುಗಳನ್ನು ಸ್ಮಶಾನ ಎಂದು ಪರಿಗಣಿಸಬೇಕು. ಜಮೀನು ತೆಗೆದುಕೊಂಡವರಿಂದ ಸರ್ಕಾರ ಖರೀದಿಸಿ ಮರಳಿ ಮಾದಿಗ ಸಮಾಜಕ್ಕೆ ನೀಡಬೇಕು. ಖರೀದಿಸಿದ ವ್ಯಕ್ತಿ ಒಪ್ಪದಿದ್ದರೆ ಭೂಸ್ವಾ ಧೀನ ಮಾಡಿಕೊಂಡು ಮಾದಿಗ ಸಮಾಜಕ್ಕೆ ನೀಡಬೇಕು ಎನ್ನುವ ಹಕ್ಕೊತ್ತಾಯ ಈಡೇರಿಕೆಗೆ ಆಗ್ರಹಿಸಲಾಗಿದೆ.

ಡಿ.ಬಿ.ಮುದೂರ, ಮಂಗಳಪ್ಪ ಮುದೂರ, ಹನುಮಂತ ಮಾದರ, ಯಮನಪ್ಪ ಮಾದರ, ನಿಜವ್ವ ಮಾದರ, ಹುಲಗಪ್ಪ ಮಾದರ, ಬಸವರಾಜ ಮುದೂರ, ಹನುಮವ್ವ ಮಾದರ, ಗಂಗಪ್ಪ ಮಾದರ, ಆನಂದ ಮುದೂರ, ಕಟ್ಟಿಮನಿ ಮತ್ತಿತರರು ಗಂಗೂರಲ್ಲಿ ನಡೆದ ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.