ಗುರುವಿನಿಂದ ಪಡೆದ ಜಾನ ಎಲ್ಲರಿಗೂ ಹಂಚುವ ಕೆಲಸವಾಗಲಿ


Team Udayavani, Jul 24, 2022, 4:07 PM IST

17teacher

ಬಸವನಬಾಗೇವಾಡಿ: ನಮಗೆ ಜನ್ಮ ನೀಡಿದ ತಾಯಿಯೇ ದೇವರು. ನಮಗೆ ಬದುಕು ಕಟ್ಟಿಕೊಟ್ಟ ದೇವರು ಶಿಕ್ಷಕರ ಋಣ ಎಷ್ಟು ಜನ್ಮವೆತ್ತಿದ್ದರು ತೀರದು ಎಂದು ಬೆಂಗಳೂರಿನ ಕಲಿಕಾ ತರಬೇತಿದಾರ ಡಾ| ನಾ.ಸೋಮೇಶ್ವರ ಹೇಳಿದರು.

ಶನಿವಾರ ಪಟ್ಟಣದ ವಿಜಯಪುರ ರಸ್ತೆಯ ಬಸವ ಭವನದಲ್ಲಿ ಜಿಪಂ ಹಾಗೂ ಶಿಕ್ಷಣ ಮತ್ತು ಸಾಕ್ಷರತಾ, ಕ್ಷೇತ್ರ ಶಿಕ್ಷಣಾಧಿಕಾರಿ ಇಲಾಖೆ, ಚಾಣಕ್ಯ ಕರಿಯರ ಅಕಾಡೆಮಿ ಸಹಯೋಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಕಲಿಕಾ ಕಾರ್ಯಗಾರದ ಕಲಿಕೆ ಗ್ರಹಿಕೆ ವಿಷಯದ ಉಪನ್ಯಾಸಕರಾಗಿ ಅವರು ಮಾತನಾಡಿದರು.

ಗುರುವಿನಿಂದ ಪಡೆದ ಜ್ಞಾನವನ್ನು ಸಾವಿರಾರು ಕೈಗಳಿಗೆ ಹಂಚುವ ಕೆಲಸವಾಗಬೇಕು. ಅವಾಗ ಸಮಾಜದ ಋಣ ಮುಟ್ಟಿಸಿದ್ದಂತಾಗುತ್ತದೆ. ಭಾರತ ಮತ್ತು ಕರ್ನಾಟಕದಲ್ಲಿ ಸಿಗುವ ಕನ್ನಡ ಜಾನಪದ, ಕಲೆ, ಸಂಸ್ಕೃತಿ, ಸಂಪ್ರದಾಯ ಬೇರ ಯಾವ ದೇಶದಲ್ಲಿ ಸಿಗುವುದಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿ ಆಸ್ತಿ, ಸಂಪತ್ತನ್ನು ಗಳಿಸಿ ನಮ್ಮ ಕೈಯಲ್ಲಿ ಎಲ್ಲವೂ ಇದೆ. ದೇಶ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ನೋಡಿ ಕಲಿಯಬೇಕು. ಕೇಳಿ ಕಲಿಯಬೇಕು. ಮಾಡಿ ಕಲಿಯಬೇಕು. ಉತ್ತಮ ಅಭ್ಯಾಸ ರೂಢಿಸಿಕೊಂಡು ಪಾಠವನ್ನು ನೆನಪಿಟ್ಟಿಕೊಳ್ಳಬೇಕಾದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪಾಲಕರು ತಮ್ಮ ಮಕ್ಕಳಿಗೆ ಆಗಾಗ್ಗೆ ವೈದ್ಯಕೀಯ ಪರೀಕ್ಷೆ ಮಾಡಿಸುವ ಮೂಲಕ ಮಕ್ಕಳ ಉತ್ತಮ ಆರೋಗ್ಯಕ್ಕೆ ಗಮನ ಹರಿಸಬೇಕು. ಪಂಚೇಂದ್ರಿಯಗಳು ಆರೋಗ್ಯವಾಗಿದ್ದರೆ ಮಾತ್ರ ನಾವು ಮಾಡುವ ಕಾರ್ಯದಲ್ಲಿ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಶಿವಾನಂದ ಪಾಟೀಲ ಮಾತನಾಡಿ, ಜಗತ್ತು ವೈಜ್ಞಾನಿಕವಾಗಿ ಮುಂದುವರಿದಿದೆ. ಆದರೆ ಮನುಷ್ಯತ್ವವನ್ನು ಮರೆಯುತ್ತಿದ್ದೇವೆ. ಹೀಗೆ ಮುಂದುವರಿದರೆ ಜಗತ್ತಿಗೆ ಆಪತ್ತು ತಪ್ಪಿದ್ದಲ್ಲ. ಆದ್ದರಿಂದ ಪ್ರತಿಯೊಬ್ಬರು ಮನುಷ್ಯತ್ವ ಮರೆಯಬಾರದು. ಪಕ್ಷಿ, ಪ್ರಾಣಿಗಳು ಕೂಡಾ ಪ್ರೀತಿಯಿಂದ ಬದುಕುತ್ತವೆ. ನಾವು ಮನುಷ್ಯರು ಅನ್ನುವುದನ್ನು ಮರೆಯಬಾರದು. ಮರೆತರೆ ಅನಾಹುತಗಳು ಉಂಟಾಗುತ್ತದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು. ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯುವ ಮೂಲಕ ಜಿಲ್ಲೆ ಮತ್ತು ರಾಜ್ಯಕ್ಕೆ ಹೆಸರು ತರುವ ಕೆಲಸವಾಗಬೇಕು, ಅಂದಾಗ ಮಾತ್ರ ಇಂತಹ ಕಾರ್ಯಕ್ರಮಕ್ಕೆ ಅರ್ಥ ಬರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸಹಕಾರಿ ಮಹಾಮಂಡಳಿ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಕರ್ನಾಟಕ ರಾಜ್ಯ ವಿಮಾ ಸಹಕಾರಿ ಸಲಹಾ ಮಂಡಳಿ ಅಧ್ಯಕ್ಷ ಶಿವನಗೌಡ ಬಿರಾದಾರ, ನ್ಯಾಯವಾದಿ ಬಿ.ಕೆ. ಕಲ್ಲೂರ, ನಿವೃತ್ತ ವಿಶೇಷ ಭೂ ಸ್ವಾಧೀನಾಧಿ ಕಾರಿ ಎಂ.ಎನ್‌. ಚೋರಗಸ್ತಿ, ಶಿಕ್ಷಣಾಧಿಕಾರಿ ಮಂಜುನಾಥ ಗುಳೇದಗುಡ್ಡ ಸೇರಿದಂತೆ ಅನೇಕರು ಇದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಂಗಮೇಶ ಪೂಜಾರಿ ಸ್ವಾಗತಿಸಿದರು. ಶಿಕ್ಷಕ ಅಶೋಕ ಹಂಚಲಿ ನಿರೂಪಿಸಿದರು. ಕಾರ್ಯಾಗಾರದಲ್ಲಿ ತಾಲೂಕಿನ ವಿವಿಧ ಪ್ರೌಢಶಾಲೆಗಳಿಂದ 450ಕ್ಕೂ ಹೆಚ್ಚು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.