Vijayapura: ಚುನಾವಣೆಯಲ್ಲಿ ಲಿಂಗಾಯತರನ್ನು ಸೆಳೆಯಲು ವಿಜಯೇಂದ್ರ ಅಸ್ತ್ರ: ಎಂ.ಬಿ.ಪಾಟೀಲ


Team Udayavani, Nov 16, 2023, 12:56 PM IST

Vijayapura: ಚುನಾವಣೆಯಲ್ಲಿ ಲಿಂಗಾಯತರನ್ನು ಸೆಳೆಯಲು ವಿಜಯೇಂದ್ರ ನೇಮಕ: ಎಂ.ಬಿ.ಪಾಟೀಲ

ವಿಜಯುಪುರ : ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಅವರನ್ನು ಕಡೆಗಣಿಸಿ ಹೀನಾಯ ಸೋಲು ಅನುಭವಿಸಿದ ಬಿಜೆಪಿ, ಬುಡಕ್ಕೆ ಬೆಂಕಿ ಬಿದ್ದಿದೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಲಿಂಗಾಯತರನ್ನು ಸೆಳೆಯಲು ಹಾಗೂ ಯಡಿಯೂರಪ್ಪ ಅವರನ್ನು ಬಳಕೆ ಮಾಡಿಕೊಂಡು ಬಿಸಾಡಲು ವಿಜಯೇಂದ್ರ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಗುರುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಮಾತ್ರ ವಿಜಯೇಂದ್ರ ನೇಮಕ ಎಂಬಂತೆ ಬಿಜೆಪಿ ನಾಯಕರೇ ಹೇಳಿದ್ದಾರೆ. ವಿಜಯೇಂದ್ರ ನೇಮಕ ಬಹಳ ವರ್ಷ ಇರಲ್ಲ. ಮೂರು ವರ್ಷಕ್ಕೆ ಮಾತ್ರ ಸೀಮಿತ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಅಂದರೆ ಮುಂದಿನ ವಿಧಾನಸಭೆ ಚುನಾವಣೆಗೆ ವಿಜಯೇಂದ್ರ ಇರಲ್ಲ ಎಂದು ಪರೋಕ್ಷ ಸಂದೇಶ ನೀಡಿದ್ದಾರೆ ಎಂದು ಕುಟುಕಿದರು.

ಈ ಹೇಳಿಕೆಯಿಂದ ಯಡಿಯೂರಪ್ಪ ಅವರನ್ನು ಯಾವಾಗ ಬೇಕಾದರೂ ಬಳಸಿ, ಬಿಸಾಡಬಹುದು ಎಂಬುದೇ ಆಗಿದೆ. ಬಿಜೆಪಿ ನಾಯಕರ ಈ ಹುನ್ನಾರಕ್ಕೆ ಲಿಂಗಾಯತರು ಬಲಿಯಾಗುವುದಿಲ್ಲ ಎಂದರು.

ಯಡಿಯೂರಪ್ಪ ಅವರನ್ನು ಎರಡು ಬಾರಿ ಮುಖ್ಯಮಂತ್ರಿ ಮಾಡಿದರೂ ಗೌರವಯುತವಾಗಿ ನಡೆಸಿಕೊಳ್ಳಲಿಲ್ಲ. ಹೀಗಾಗಿ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತರು ಬಿಜೆಪಿ ಪಕ್ಷದಿಂದ ವಿಮುಖರಾಗಿದ್ದಾರೆ. ಪರಿಣಾಮ ಯಡಿಯೂರಪ್ಪ ಅವರನ್ನು ಬಳಸಿಕೊಂಡು ಲಿಂಗಾಯತರನ್ನು ಸೆಳೆಯುವ ಬಿಜೆಪಿ ಹುನ್ನಾರ ಕೈಗೂಡದು. ಮೋದಿ, ಅಮಿತ್ ಶಾ ಅವರ ಹುನ್ನಾರ ಕೈಗೂಡದು ಎಂದು ಸಚಿವ ಎಂ.ಬಿ.ಪಾಟೀಲ ಕುಟುಕಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ನಾನು ಹೇಳಿದ ಲಿಸ್ಟ್ ಮಾತ್ರ ಆಗಬೇಕು ಎಂದು ಮೈಸೂರಿನಲ್ಲಿ ಹೇಳಿರುವ ವಿಷಯ ನನಗೆ ಗೊತ್ತಿಲ್ಲ. ಆದರೆ ಆರ್ಟಿಫೀಷಿಯಲ್ ಇಂಟಲಿಜೆನ್ಸ್ ಬಳಸಿಕೊಂಡು ಈ ಹಿಂದೆ ಮಹಾರಾಷ್ಟ್ರ ರಾಜ್ಯದಲ್ಲಿ ನನ್ನ ಧ್ವನಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿತ್ತು. ಈ ಕುರಿತು ದೂರು ದಾಖಲಾಗಿ, ಆರೋಪಿಗಳ ಬಂಧನವಾಗಿತ್ತು. ಇದು ಕೂಡ ಅದೇರೀತಿ ಆಗಿರಬಹುದು ಎಂದರು.

ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಂದ ಮಾಜಿ ಸಚಿವರು, ಮಾಜಿ ಶಾಸಕರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗುತ್ತಿದ್ದಾರೆ. ಲೋಕಸಭಾ ಚುನಾವಣೆ ವೇಳೆಗೆ ಎರಡೂ ಪಕ್ಷಗಳಲ್ಲಿ ಎಲ್ಲ ಸ್ವಚ್ಛವಾಗುರುತ್ತದೆ ನೋಡ್ತಾ ಇರಿ. ಇನ್ನೂ ಬಹಳಷ್ಟು ನಾಯಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ. ಸಂಖ್ಯೆಯ ವಿಷಯದಲ್ಲಿ ಎಷ್ಟು ಬೇಕಾದಷ್ಟು ಬರೆದುಕೊಳ್ಳಿ ಎಂದರು.

ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಜಿಲ್ಲಾ ಚುನಾವಣಾ ಉಸ್ತುವಾರಿ ಆಗಿರುವ ಸಚಿವ ಸತೀಶ ಜಾರಕಿಹೊಳಿ ಜಿಲ್ಲೆಗೆ ಭೇಟಿ ನೀಡಿ, ಸಭೆ ನಡೆಸಿದ್ದಾರೆ. ಪಕ್ಷದಲ್ಲಿ ಚರ್ಚಿಸಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಅಂತಿಮ‌ ನಿರ್ಣಯ ಆಗಲಿದೆ ಎಂದರು.

ಜಾತಿಗಣತಿಗೆ ಕೆಲವರು ವಿರೋಧಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಎಂ.ಬಿ.ಪಾಟೀಲ, ಈ ವಿಷಯದಲ್ಲಿ ಪಕ್ಷದ ಮಟ್ಟದಲ್ಲಿ ಆಂತರಿಕವಾಗಿ ಚರ್ಚೆ ಮಾಡುತ್ತೇವೆ ಎಂದರು.

ಇದನ್ನೂ ಓದಿ: Negative review ನೀಡಿದ 7 ವ್ಲಾಗರ್‌ಗಳ ವಿರುದ್ಧ ದೂರು ದಾಖಲಿಸಿದ ʼಬಾಂದ್ರಾʼ ಚಿತ್ರತಂಡ

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.