Medical negligence: ಮಗು ಸಾವು; ಟೈರ್ ಗೆ ಬೆಂಕಿ ಹಚ್ಚಿ ವೈದ್ಯೆ ವಿರುದ್ಧ ಪ್ರತಿಭಟನೆ
Team Udayavani, Aug 8, 2023, 3:09 PM IST
ಇಂಡಿ (ವಿಜಯಪುರ): ಜ್ವರದ ಕಾರಣಕ್ಕೆ ಇಂಡಿ ಪಟ್ಟಣದ ಖಾಸಗಿ ಅಸ್ಪತ್ರೆಗೆ ಆಗಮಿಸಿದ್ದ ಗರ್ಭಿಣಿಗೆ ಚಿಕಿತ್ಸೆ ನೀಡಿದ್ದು, ಗರ್ಭದಲ್ಲಿ ಮಗು ಮೃತಪಟ್ಟ ಘಟನೆ ನಡೆದಿದೆ. ವಿಷಯ ತಿಳಿದು ಉದ್ರಿಕ್ತರಾದ ಬಂಧುಗಳು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ.
22 ವರ್ಷದ ಕವಿತಾ ಧರ್ಮರಾಜ ದಶವಂತ್ ಎಂಬ ಗರ್ಭಿಣಿ ಜ್ವರದ ಕಾರಣಕ್ಕೆ ಸೋಮವಾರ ಬೆಳಿಗ್ಗೆ ಇಂಡಿ ಪಟ್ಟಣದಲ್ಲಿರುವ ಗಜಾಕೋಶ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ವೈದ್ಯರ ಚಿಕಿತ್ಸೆ ಬಳಿಕ ಮಂಗಳವಾರ ನಸುಕಿನಲ್ಲಿ ಗರ್ಭಿಣಿ ಆರೋಗ್ಯದಲ್ಲಿ ಏರುಪೇರಾಗಿದೆ.
ವಿಷಯ ತಿಳಿದ ಕುಟುಂಬದ ಸದಸ್ಯರು ಆಸ್ಪತ್ರೆಗೆ ಧಾವಿಸಿ, ಚಿಕಿತ್ಸೆ ನೀಡಿದ ವೈದ್ಯ ಡಾ.ಭಾರತಿ ಗಜಾಕೋಶ ಇವರಿಗೆ ಕತೆ ಮಾಡಿ, ತುರ್ತಾಗಿ ರೊಗಿಯ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ಆದರೆ ವೈದ್ಯೆ ಭಾರತಿ ತುರ್ತಾಗಿ ಆಸ್ಪತ್ರೆಗೆ ಆಗಮಿಸಿ ರೋಗಿ ಕವಿತಾ ಇವರ ಆರೋಗ್ಯ ವಿಚಾರಿಸದೇ, ಬೇರೆ ಆಸ್ಪತ್ರೆಗೆ ಕರೆದೊಯ್ಯಿರಿ ಎಂದು ಬೇಜವಾಬ್ದಾರಿ ಉತ್ತರ ನೀಡಿ, ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ಮಾಡಿದ್ದಾರೆ.
ವೈದ್ಯೆ ಭಾರತಿ ಅವರ ಪ್ರತಿಕ್ರಿಯೆಯಿಂದ ಕಂಗಾಲದ ರೋಗಿಯ ಮನೆಯವರು, ಕೂಡಲೇ ವಿಜಯಪುರ ನಗರದ ಡಾ. ಸಾಸನೂರ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.
ಕವಿತಾಳನ್ನು ಪರೀಕ್ಷಿಸಿದ ವೈದ್ಯರು, ರೋಗಿಯ ಗಂಭೀರ ಸ್ಥಿತಿ ಅರಿತು ಕೂಡಲೇ ಗರ್ಭದಲ್ಲಿರುವ ಮಗುವನ್ನು ಶಸ್ತ್ರಚಿಕಿತ್ಸೆ ಮಾಡಿ, ಮಗುವನ್ನು ಹೊರ ತೆಗೆದಿದ್ದಾರೆ. ಆದರೆ ತಾಯಿಯ ಗರ್ಭದಲ್ಲೇ ಒಂದು ಗಂಟೆ ಹಿಂದೆಯೇ ಮಗು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.
ಇದರಿಂದ ರೊಚ್ಚಿಗೆದ್ದ ಕವಿತಾಳ ಸಂಬಂಧಿ ಅಮರೇಶ ದಶವಂತ ನೇತೃತ್ವದಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರು ಇಂಡಿ ಪಟ್ಟಣದ ಡಾ.ಗಜಾಕೋಶ ಆಸ್ಪತ್ರೆಗೆ ತೆರಳಿ ವೈದ್ಯೆ ಭಾರತಿ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಯತ್ನಿಸಿದರೂ ಉದ್ರಿಕ್ತರು ಸಮಾಧಾಗೊಂಡಿಲ್ಲ.
ಆಸ್ಪತ್ರೆಯ ಹೊರಭಾಗದಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ವೈದ್ಯೆಯ ವಿರುದ್ಧ ಘೋಷಣೆ ಕೂಗಲು ಆರಂಭಿಸಿದ್ದಾರೆ. ಈ ಹಂತದಲ್ಲಿ ಸ್ಥಳಕಯಧಾವಿಸಿದ ಇಂಡಿ ತಹಶಿಲ್ದಾರ ನಾಗಯ್ಯ ಹಿರೇಮಠ, ಗ್ರಾಮೀಣ ಪಿಎಸ್ಐ ಸೋಮೇಶ ಗೆಜ್ಜೆ ಪ್ರತಿಭಟನಾಕಾರರ ಮನವೊಲಿಸಲು ನಡೆಸಿದ ಪ್ರಯತ್ಗಲು ವಿಫಲವಾಗಿವೆ. ಹೀಗಾಗಿ ಆಸ್ಪತ್ರೆ ಎದುರು ಪ್ರತಿಭಟನೆ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ