ಒಕ್ಕಲಿಗರ ಪ್ರಾಬಲ್ಯದ ಜಿಲ್ಲೆಗಳಲ್ಲಿ ಕಾಂಗ್ರೆಸ್ ಸೋತಿದ್ದೇಕೆ?
Team Udayavani, Oct 20, 2018, 6:55 AM IST
ವಿಜಯಪುರ: ಲಿಂಗಾಯಿತ ಪ್ರತ್ಯೇಕ ಧರ್ಮ ವಿಷಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಪ್ಪು ಮಾಡಿದ್ದರಿಂದ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದೆ ಎಂದು ಡಿಕೆಶಿ ಹೇಳಿದ್ದಾರೆ.
ಆದರೆ, ಒಕ್ಕಲಿಗರ ಪ್ರಾಬಲ್ಯದ ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಭಾಗದಲ್ಲಿ ಕೂಡ ಕಾಂಗ್ರೆಸ್ ಸೋತಿದೆ ಎಂಬುದನ್ನು ಶಿವಕುಮಾರ ಮರೆತಿದ್ದಾರೆ ಎಂದು ಲಿಂಗಾಯಿತ ಪ್ರತ್ಯೇಕ ಧರ್ಮ ಹೋರಾಟದ ಮುಂಚೂಣಿ ನಾಯಕ ಹಾಗೂ ಮಾಜಿ ಸಚಿವ ಡಾ.ಎಂ.ಬಿ.ಪಾಟೀಲ ತಿರುಗೇಟು ನೀಡಿದ್ದಾರೆ.
ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಒಕ್ಕಲಿಗರು ಹಾಗೂ ಕೆಂಪೇಗೌಡರ ಕುರಿತು ಲಿಂಗಾಯಿತರು ಅಪಾರ ಪ್ರೀತಿ, ಗೌರವ ಇರಿಸಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ಲಿಂಗಾಯಿತರ ಅಸ್ಮಿತೆಯನ್ನು ಡಿ.ಕೆ.ಶಿವಕುಮಾರ ಪ್ರಶ್ನಿಸುವ ಹಾಗೂ ನಮ್ಮ ಧರ್ಮದ ಹೋರಾಟದ ವಿಷಯದಲ್ಲಿ ಮೂಗು ತೂರಿಸುವ ಕೆಲಸ ಮಾಡಬಾರದು. ಯಾರನ್ನೋ ಓಲೈಸಲು ಇಂಥ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಪ್ರತ್ಯೇಕ ಧರ್ಮ ಮಾನ್ಯತೆ ಪ್ರಸ್ತಾವನೆಯನ್ನು ಕೇಂದ್ರಕ್ಕೆ ರವಾನಿಸಿದ ಸಂದರ್ಭದಲ್ಲಿ ಅವರೂ ಸಚಿವರಾಗಿದ್ದರು. ಹೀಗಾಗಿ, ಸಿದ್ದರಾಮಯ್ಯ ಸರ್ಕಾರ ಲಿಂಗಾಯಿತ ಪ್ರತ್ಯೇಕ ಧರ್ಮ ಮಾನ್ಯತೆ ವಿಷಯದಲ್ಲಿ ಪಕ್ಷಪಾತ ಮಾಡಿಲ್ಲ. ಬಸವ ಅನುಯಾಯಿಗಳ ಭಾವನೆಗೆ ಸ್ಪಂದಿಸಿ ಅವರು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದರಲ್ಲಿ ಅವರು ಯಾವ ತಪ್ಪನ್ನೂ ಮಾಡಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
MUST WATCH
ಹೊಸ ಸೇರ್ಪಡೆ
KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್ನಿಂದ ಅಲ್ಲ: ಪ್ರಭಾಕರ ಕೋರೆ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ