ಭೂಸನೂರ ಪರ ಸಚಿವ ಸಿ.ಸಿ. ಪಾಟೀಲ ಪ್ರಚಾರ
Team Udayavani, Oct 16, 2021, 11:42 AM IST
ಗೋಲಗೇರಿ: ಹೊನ್ನಳ್ಳಿ, ಗೋಲಗೇರಿ, ಸಾಸಾಬಾಳ, ಬ್ರಹ್ಮದೇವನಮಡು ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಭರ್ಜರಿ ಪ್ರಚಾರ ಮಾಡಿದರು.
ಗೋಲಗೇರಿಯಲ್ಲಿ ಮಾತನಾಡಿದ ಸಚಿವರು, ರಮೇಶ ಭೂಸನೂರಗೆ ಮತ ನೀಡಿದರೆ ಸಿಂದಗಿ ಕ್ಷೇತ್ರ ಸಂಪೂರ್ಣ ಅಭಿವೃದ್ಧಿಯಾಗುತ್ತದೆ. ರಾಜ್ಯದಲ್ಲಿ ಬೊಮ್ಮಾಯಿ ಮತ್ತು ಕೇಂದ್ರದಲ್ಲಿ ಮೋದಿಯವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ ಎಂದರು.
ಅಭ್ಯರ್ಥಿ ರಮೇಶ ಭೂಸನೂರ ಮಾತನಾಡಿ, ನಾನು ಸಿಂದಗಿ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕನಾಗಿದ್ದೇನೆ. ಹಲವಾರು ಜನ ಪರ ಕೆಲಸಗಳನ್ನು ಹಾಗೂ ಸರ್ಕಾರದ ಸೌಲಭ್ಯಗಳನ್ನು ಕ್ಷೇತ್ರಕ್ಕೆ ಒದಗಿಸಿದ್ದೇನೆ. ಬಡವರಿಗೆ, ದೀನ-ದಲಿತರಿಗೆ ಬೆಂಬಲ ನೀಡುವ ಪಕ್ಷವೇ ನಮ್ಮ ಬಿಜೆಪಿ ಎಂದರು.
ಈ ವೇಳೆ ವಿವಿಧ ಪಕ್ಷದ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು. ಸಂತೋಷ ಪಾಟೀಲ ಡಂಬಳ, ಶರಣಪ್ಪ ಕಣಮೇಶ್ವರ, ಸಿದ್ದು ಪಾಟೀಲ, ಶ್ರೀಕಾಂತ ಸೋಮಜಾಳ ಮಾತನಾಡಿದರು. ಪ್ರಭುಗೌಡ ಪಾಟೀಲ (ಡಂಬಳ,) ಶಿವಣ್ಣ ಮಾರಲಭಾವಿ, ಭೀಮರಾಯ ಸುಣಗಾರ, ಶಿಲ್ಪಾ ಕುದರಗೊಂಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…