ಸಚಿವ ಪಾಟೀಲ ಸೇರಿ 14 ಜನರಿಗೆಸೇವಾಲಾಲ್ ರತ್ನ ಪ್ರದಾನ
Team Udayavani, Jan 29, 2018, 2:31 PM IST
ವಿಜಯಪುರ : ನೀರಾವರಿ ಕ್ಷೇತ್ರ ಸಾಧನೆಗಾಗಿ ಜಲ ಸಂಪನ್ಮೂಲ ಸಚಿವ ಡಾ| ಎಂ.ಬಿ. ಪಾಟೀಲ ಅವರಿಗೆ ಕರ್ನಾಟಕ ಬಂಜಾರಾ ರಕ್ಷಣಾ ವೇದಿಕೆ ಶ್ರೀಸಂತ ಸೇವಾಲಾಲ್ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿತು.
ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಇಂದುಮತಿ ಲಮಾಣಿ, ಕಾನೂನು ಕ್ಷೇತ್ರದಲ್ಲಿ ಗಣೇಶ ರಾಠೊಡ, ಬಂಜಾರಾ ಸಾಹಿತ್ಯ ಮತ್ತು ಸಂಶೋಧನೆಯಲ್ಲಿ ಹರಿಲಾಲ್ ಪವಾರ, ಬಂಜಾರಾ ಸಮಾಜ ಸೇವೆಯಲ್ಲಿ ಕಿಸನ ಭಾವು ರಾಠೊಡ, ಕ್ರೀಡೆಯಲ್ಲಿ ರಾಜು ಪವಾರ, ವೈದ್ಯಕೀಯ ಕ್ಷೇತ್ರದಲ್ಲಿ ಡಾ| ಬಾಬುರಾಜೇಂದ್ರ ನಾಯಕ, ಸಂಗೀತ ಕ್ಷೇತ್ರದಲ್ಲಿ ಗೋವಿಂದ ಮಹಾರಾಜ, ಕ್ರೀಡೆಯಲ್ಲಿ ಸಂಜು ಲಮಾಣಿ, ಪತ್ರಿಕೋದ್ಯಮದಲ್ಲಿ ಈರಣ್ಣ ಹಡಪದ, ಭರತನಾಟ್ಯದಲ್ಲಿ ಅಂಬಿಕಾ ಸನ್ನದಿ, ಸಂಗೀತ ಕ್ಷೇತ್ರದಲ್ಲಿ ಬಸನಗೌಡ ಬಿರಾದಾರ ಹಾಗೂ ಸೋಮಶೇಖರ ರಾಠೊಡ, ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಡಾ| ಭುವನೇಶ್ವರಿ ಮಲ್ಲಿಕಾರ್ಜುನಮಠ (ಮೇಲಿನಮಠ) ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಚಿವ ಡಾ| ಎಂ.ಬಿ. ಪಾಟೀಲ, ಬಂಜಾರಾ ಸಮಾಜ ಸಾಂಸ್ಕೃತಿಕವಾಗಿ ಅತ್ಯಂತ ಶ್ರೀಮಂತವಾಗಿದೆ. ಬಂಜಾರಾ ಸಮಾಜದ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ತಾಂಡಾ ಅಭಿವೃದ್ಧಿ ನಿಗಮದಿಂದ ಹಲವಾರು ಯೋಜನೆಗಳನ್ನು ರೂಪಿಸಿದೆ. ನನಗೆ ಸಂತ ಸೇವಾಲಾಲ್ರ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿ ನೀಡಿರುವುದು ಸಂತೋಷ ತಂದಿದೆ, ಇದು ನನ್ನ ಜವಾಬ್ದಾರಿ ಸಹ ಹೆಚ್ಚಿಸಿದ್ದು ಈ ಪ್ರಶಸ್ತಿ ನನಗೆ ರಕ್ಷಾ ಕವಚ
ಇದ್ದಂತೆ ಎಂದರು.
ಸೋಮದೇವರಹಟ್ಟಿಯ ಜಗನು ಮಹಾರಾಜ, ಕೆಸರಾಳ ತಾಂಡಾದ ಧನಸಿಂಗ್ ಮಹಾರಾಜ, ಕೆಸರಟ್ಟಿಯ ಸೋಮಲಿಂಗ ಸ್ವಾಮೀಜಿ, ತೊರವಿ ತಾಂಡಾದ ಗೋಪಾಲ ಮಹಾರಾಜ, ಭೀಮಸಿಂಗ್ ಮಹಾರಾಜ, ಪ್ರಕಾಶ ಮಹಾರಾಜ, ಕುಮಾರ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ರಾಜು ಪವಾರ ಅದ್ಯಕ್ಷತೆ ವಹಿಸಿದ್ದರು. ನಗರ ಶಾಸಕ ಡಾಎಂ.ಎಸ್.ಬಾಗವಾನ ಮಾತನಾಡಿದರು. ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಮೇಲ್ಮನೆ ಮಾಜಿ ಸದಸ್ಯ ಪ್ರಕಾಶ ರಾಠೊಡ, ಜೆಡಿಎಸ್ ಮುಖಂಡ ದೇವಾನಂದ ಚವ್ಹಾಣ ಮುಖ್ಯ ಅತಿಥಿಯಾಗಿದ್ದರು.
ಹೊನ್ನುಟಗಿ ಗ್ರಾಪಂ ಉಪಾಧ್ಯಕ್ಷ ರಮೇಶ ಚವ್ಹಾಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಚವ್ಹಾಣ, ಜಿಲ್ಲಾ ಕಾರ್ಯಾಧ್ಯಕ್ಷ ನೀಲಕಂಠ ಚವ್ಹಾಣ, ಕುಮಾರ ರಾಠೊಡ, ಸಂಜು ನಾಯಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ