ಮೃತರ ಕುಟುಂಬಕ್ಕೆ ವೈಯುಕ್ತಿಕ ಪರಿಹಾರ ವಿತರಿಸಿದ ನಡಹಳ್ಳಿ
Team Udayavani, Oct 31, 2021, 3:36 PM IST
ಮುದ್ದೇಬಿಹಾಳ: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಇಬ್ಬರು ವ್ಯಕ್ತಿಗಳ ಕುಟುಂಬಕ್ಕೆ ನೀಡಿದ್ದ ವಾಗ್ದಾನದಂತೆ ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ, ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ ನಡಹಳ್ಳಿಯವರು ರವಿವಾರ ತಲಾ 50000 ರೂ ಅರ್ಥಿಕ ನೆರವನ್ನು ವಿತರಿಸಿದರು.
ಚವನಭಾವಿ ಗ್ರಾಮದ ಮೃತರ ಕುಟುಂಬಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಅವರು ನೆರವನ್ನು ನಗದು ರೂಪದಲ್ಲಿ ಹಸ್ತಾಂತರಿಸಿದರು.
ಮೃತ ಶಿವಪ್ಪ ಪೂಜಾರಿಯ ಪತ್ನಿ ಮುದಕವ್ವ, 3 ವರ್ಷದ ಮಗಳು ಅಶ್ವಿನಿ, ಇನ್ನೋರ್ವ ಮೃತ ಸಂಗಪ್ಪ ಪೂಜಾರಿ ಅವರ ಪತ್ನಿ, ಮೂವರು ಮಕ್ಕಳು ಹಾಗೂ ಕುಟುಂಬದ ಇತರೆ ಸದಸ್ಯರನ್ನು ಮಾತನಾಡಿಸಿ ಅವರ ದು:ಖದಲ್ಲಿ ತಾವು ಭಾಗಿಯಾಗಿದ್ದಾಗಿ ತಿಳಿಸಿದರು.
ಇದನ್ನೂ ಓದಿ: ಕಲ್ಲೇಶ್ವರ ದೇವಸ್ಥಾನದ ಗೋಪುರದ ಸ್ಥೂಪ ಧ್ವಂಸ: ನಿಧಿ ಆಸೆಗೆ ಕೃತ್ಯ ಶಂಕೆ
ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ, ಬಿಜೆಪಿ ಧುರೀಣರಾದ ಬಸವರಾಜ ಗುಳಬಾಳ, ಲಕ್ಷ್ಮಣ ಬಿಜ್ಜೂರ, ಗ್ರಾಮಸ್ಥರಾದ ಬಸಲಿಂಗಪ್ಪ ನಾಲತವಾಡ, ರೇವಣಪ್ಪ ಹಂಚಿನಾಳ,ದ್ಯಾಮಣ್ಣ ಗುರಿಕಾರ,ಲಕ್ಷ್ಮಣ ಬಿರಾದಾರ, ಸಿದ್ದಪ್ಪ ಬಿರಾದಾರ, ಭರಮಣ್ಣ ಹಂಚಿನಾಳ, ರಾಯಪ್ಪ ಮದರಿ, ಗ್ರಾಪಂ ಸದಸ್ಯ ಆಂಜನೇಯ ಪವಾರ, ಯಮನಪ್ಪ ಚಲವಾದಿ, ಮದು ಪಾಟೀಲ, ಅಂಬ್ರೇಶ ನಾಲತವಾಡ, ಬಸನಗೌಡ ಪಾಟೀಲ ಮುಂತಾದವರು ಇದ್ದರು.
ಅ.27 ರಂದು ದುರ್ಘಟನೆ
ಅ.27ರಂದು ಮುದ್ದೇಬಿಹಾಳ ತಾಲೂಕಿನ ಜೈನಾಪೂರ ಕ್ರಾಸ್ ಬಳಿ ಬೈಕ್ ಮತ್ತು ಶಾಲಾ ಬಸ್ ನಡುವೆ ರಸ್ತೆ ಅಪಘಾತ ಸಂಭವಿಸಿ ಬೈಕನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಇಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆಗೆ ತಂದಾಗ ಶಾಸಕ ನಡಹಳ್ಳಿಯವರು ಆಸ್ಪತ್ರೆಗೆ ಭೆಟಿ ನೀಡಿ ಸಾಂತ್ವನ ಹೇಳಿ ಇಬ್ಬರ ಕುಟುಂಬಕ್ಕೂ ನೆರವಾಗುವ ವಾಗ್ದಾನ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ