3 ವರ್ಷಗಳಿಂದ ಮುಂಗಾರು ಮಳೆ ವಿಫಲ; ತಾಲೂಕಿನಲ್ಲಿ ಸತತ ಬರಗಾಲ; ಸಂಕಷ್ಟದಲ್ಲಿ ರೈತರು


Team Udayavani, Jan 20, 2024, 4:00 PM IST

11indi

ಇಂಡಿ: ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ಪ್ರದೇಶವೆಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಇಂಡಿ ತಾಲೂಕಿನಲ್ಲಿ ಸತತವಾಗಿ ಮೂರು ವರ್ಷಗಳ ಕಾಲ ಮುಂಗಾರು ಮಳೆ ಸಂಪೂರ್ಣ ವಿಫಲವಾಗಿ, ತಾಲೂಕು ಸತತ ಬರಗಾಲಕ್ಕೆ ತುತ್ತಾಗುತ್ತಿದೆ. ಈ ಬಾರಿಯೂ ಮತ್ತೆ ಬರಗಾಲ ಆವರಿಸಿದ್ದು ಸಂಕಷ್ಟದಲ್ಲಿ ರೈತರು ಕಾಲ ನೂಕುವಂತಾಗಿದೆ.

ಗ್ರಾಮೀಣ ಭಾಗದಲ್ಲಿ ಕೆರೆಗಳು, ತೆರೆದ ಬಾವಿಗಳು, ಕೊಳವೆ ಬಾವಿಗಳು, ಹಳ್ಳಗಳು ಬತ್ತಿ ಹೋಗಿದ್ದು ರೈತರನ್ನು ಆತಂಕಕ್ಕೆ ಈಡು ಮಾಡಿವೆ.

ಸತತ ಬರಗಾಲ ಹಾಗೂ ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆ ಆಗಿರುವುದರಿಂದ ತಾಲೂಕಿನಲ್ಲಿ ನಿಂಬೆ ಬೆಳೆಗಾರರು, ದಾಳಿಂಬೆ, ದ್ರಾಕ್ಷಿ ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ.

ಸಣ್ಣ ಮತ್ತು ಅತಿ ಸಣ್ಣ ರೈತರು ತಮ್ಮ ಬದುಕು ಸಾಗಿಸಲು ನಿಂಬೆ ಬೆಳೆಯನ್ನೇ ಅವಲಂಬಿಸಿದ್ದಾರೆ. ತಾಲೂಕಿನಾದ್ಯಂತ ಸುಮಾರ 7 ಸಾವಿರ ಹೆಕ್ಟೇರ್ ಪ್ರದೇಶ. ಈ ಬಾರಿ ನಿಂಬೆ ಬೆಳೆಯ ನಾಶವಾಗಿದೆ. ನಿಂಬೆ ಬೆಳೆಗಾರರು ಟ್ಯಾಂಕರ್ ಮೊರೆ ಹೋಗಿದ್ದು, ಟ್ಯಾಂಕರ್‌ಗಳಿಗೆ ಸುಮಾರು 1200-2000 ವರೆಗೆ ಹಣ ಪಾವತಿಸಿ ಗಿಡಗಳಿಗೆ ನೀರು ಉಣಿಸುತ್ತಿದ್ದಾರೆ. ಶೇಕಡ 80 ರಷ್ಟು ಗಿಡಗಳು ಒಣಗಿದ್ದು ಹತ್ತಾರು ವರ್ಷಗಳಿಂದ ಕಷ್ಟಪಟ್ಟು ಬೆಳೆಸಿದ್ದ ನಿಂಬೆ ಗಿಡಗಳು ಕೆಲವೆಡೆ ಸಂಪೂರ್ಣವಾಗಿ ಒಣಗಿ ಹೋಗಿವೆ.

ಸಾಲ ಮಾಡಿ ಟ್ಯಾಂಕರ್ ನೀರು ಪೂರೈಸಿದರೂ ಗಿಡಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸರ್ಕಾರ ನಿಂಬೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ತಕ್ಷಣ ಎಲ್ಲಾ ಬೆಳೆಗಾರರಿಗೂ ಯೋಗ್ಯವಾದ ಪರಿಹಾರ ನೀಡಬೇಕು ಎಂಬುದು ರೈತರ ಆಗ್ರಹವಾಗಿದೆ.

ತಾಲೂಕಿನಲ್ಲಿ 4635 ಹೆಕ್ಟರ್ ನಿಂಬೆ, 3306 ಹೆಕ್ಟರ್ ದ್ರಾಕ್ಷಿ,2683 ಹೆಕ್ಟರ್ ದಾಳಿಂಬೆ, 227 ಹೆಕ್ಟರ್ ಬಾರಿಕಾಯಿ, 18 ಹೆಕ್ಟರ್ ಚಿಕ್ಕು, 86 ಹೆಕ್ಟರ್ ಸೀತಾಫಲ, 469 ಹೆಕ್ಟರ್ ಬಾಳೆ, ತರಕಾರಿ ಬಿತ್ತನೆಯಾಗಿದೆ. ಇದರಲ್ಲಿ ಶೇಕಡ 60ರಷ್ಟು ತೋಟಗಾರಿಕೆ ಬೆಳೆಗಳು ನಾಶವಾಗಿವೆ. – ಎಚ್.ಎಚ್.ಪಾಟೀಲ. ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ

ಬೆಳೆಗಳಿಗೆ ಜೀವಕ್ಕೆ ಆಸರೆಯಾಗಬಹುದಾದ ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಗಳಿಗೂ ಸಹ ಅಲ್ಪ-ಸ್ವಲ್ಪ ನೀರು ಬಿಡುವುದರಿಂದ ಕೆಲ ಗ್ರಾಮಗಳಿಗೆ ಅನುಕೂಲವಾಗಿದೆ. ಆದರೆ ಇನ್ನೂ ಕೆಲ ಗ್ರಾಮಗಳಲ್ಲಿ ಜನ ಜಾನುವಾರುಗಳ ಸ್ಥಿತಿ ದೇವರೇ ಬಲ್ಲ ಎಂಬಂತಾಗಿದೆ. – ಮಲ್ಲಿಕಾರ್ಜುನ ಹೊಸಮನಿ. ಆಳೂರ ಗ್ರಾಮದ ರೈತ

ನೀರಿನ ಕೊರತೆಯಿಂದಾಗಿ ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಲಾಯಿತು. ಆದರೆ ಕಳೆದ ಆರು ತಿಂಗಳಲ್ಲಿ ಮಳೆಯಾಗದ ಕಾರಣ ಕೊಳವೆ ಬಾವಿಗಳು ಬತ್ತಿದ್ದು ನೀರಿಗಾಗಿ ಪರಿತಪಿಸುವಂತಾಗಿದೆ. ಸರಕಾರ ರೈತರ ಸಹಾಯಕ್ಕೆ ಬರಬೇಕು. –ಶಂಕರ ಜಮಾದಾರ, ಹಿರೇರೂಗಿ ರೈತ.

ಎರಡು ಬೋರವೆಲ್ಲ ಕೊರೆಸಿದರೂ ನೀರು ಸಿಗಲಿಲ್ಲ. ಗಿಡಗಳಿಗಾಗಿ ಎರಡು ಲಕ್ಷ ರೂಪಾಯಿ ಖರ್ಚು ಮಾಡಿದ್ದು, ಟ್ಯಾಂಕರ್ ಮೂಲಕ ನೀರುಣಿಸಿದರೂ ಗಿಡಗಳು ಒಣಗಿ ಹೋಗುತ್ತಿವೆ, ನಮ್ಮ ಗೋಳು ಯಾರಿಗೆ ಹೇಳಬೇಕು? – ಹೂವಣ್ಣ ಗಡೆಪ್ಪ ಬೇವನೂರ. ಆಳೂರ ರೈತ.

– ಯಲಗೊಂಡ ಬೇವನೂರ

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.