ಮುದ್ದೇಬಿಹಾಳ: ರಸ್ತೆ ಅಪಘಾತದಲ್ಲಿ ಮಾಜಿ ಯೋಧ ಸಾವು
Team Udayavani, Aug 2, 2017, 3:03 PM IST
ಮುದ್ದೇಬಿಹಾಳ: ಎರಡು ದ್ವಿಚಕ್ರವಾಹಗಳ ನಡುವೆ ಸಂಭವಿಸಿದ ಮುಖಾಮುಖೀ ಡಿಕ್ಕಿಯಲ್ಲಿ ಒಂದು ಬೈಕ್ನಲ್ಲಿ ಬರುತ್ತಿದ್ದ ಮಾಜಿ ಯೋಧನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಇನ್ನೊಂದು ಬೈಕ್ನಲ್ಲಿ ಬರುತ್ತಿದ್ದ ಇಬ್ಬರು ಯುವತಿಯರು ಹಾಗೂ ವ್ಯಕ್ತಿಯೊಬ್ಬನ
ಸ್ಥಿತಿ ಚಿಂತಾಜನಕವಾಗಿದೆ.
ಬಳವಾಟ ಗ್ರಾಮದ ಚಂದ್ರಶೇಖರ ಕೊಂಡಗೂಳಿ (45) ಮೃತ ಯೋಧ. ವನಹಳ್ಳಿ ಗ್ರಾಮದ ಬಸವರಾಜ ಹೊಸಮನಿ, ಗಿರಿಜಾ ಹೊಸಮನಿ ಮತ್ತು ಯಲ್ಲಮ್ಮ ಮೇಟಿ ಗಂಭೀರ ಗಾಯಗೊಂಡವರು. ಮೂವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ಳಿದುಬಂದಿದೆ.
ಢವಳಗಿ ಗ್ರಾಮದಿಂಂದ ಮುದ್ದೇಬಿಹಾಳ ಪಟ್ಟಣ ಕಡೆಗೆ ಚಂದ್ರಶೇಖರ ಆಗಮಿಸುತ್ತಿದ್ದರು. ಅದೇ ರಸ್ತೆಯಲ್ಲಿ ಮುದ್ದೇಬಿಹಾಳದಿಂದ ಢವಳಗಿ ಕಡೆಗೆ ಬಸವರಾಜ ಇಬ್ಬರು ಯುವತಿಯರ ಜೊತೆಗೆ ಬೈಕ್ನಲ್ಲಿ ಬರುತ್ತಿದ್ದನು. ನಂತರ ಬಸರಕೋಡ ಕ್ರಾಸ್ ಹತ್ತಿರ ಬರುತ್ತಿದ್ದಂತೆ ಎರಡೂ ಬೈಕ್
ಗಳ ನಡುವೆ ಮುಖಾಮುಖೀ ಡಿಕ್ಕಿ ಸಂಭವಿಸಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.
ಮಾನವೀಯತೆ: ಘಟನೆ ವೇಳೆ ಇದೇ ಮಾರ್ಗದಲ್ಲಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಆಗಮಿಸುತ್ತಿದ್ದರು.ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಸರ್ಕಾರಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯ ಡಾ| ಸಂಗಮೇಶ ಪಟ್ಟಣದ ಜೊತೆ ಚರ್ಚಿಸಿದರು. ಗಾಯಾಳು ಯುವತಿಯರ ಬಳಿ
ತೆರಳಿ ಎದೆಗುಂದದಂತೆ ಧೈರ್ಯ ತುಂಬಿದರು. ಬಾಗಲಕೋಟೆ ಜಿಲ್ಲೆಯ ಕೆರೂಡಿ ಆಸ್ಪತ್ರೆ ವೈದ್ಯರಿಗೆ ದೂರವಾಣಿ ಮೂಲಕ ಮಾತನಾಡಿದ ಶಾಸಕ ನಡಹಳ್ಳಿ ಬಸವರಾಜ ಹಾಗೂ ಇಬ್ಬರು ಮಹಿಳೆಯರಿಗೆ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಚಿಕಿತ್ಸೆಗೆ ತಗಲುವ ಎಲ್ಲ ವೆಚ್ಚವನ್ನು ನೀಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!