ಕೋವಿಡ್ ಹೋರಾಟದ ಸೈನಿಕರಿಗೆ ಸನ್ಮಾನ

ಸೌಹಾರ್ದತೆಯ ಪಾಠ ಕಲಿಸಿದ ಮಹಾಮಾರಿ  ಕೂಡಿ ಬಾಳುವ ಸಂದೇಶ ಮರೆಯದಿರಿ: ಸ್ವಾಮೀಜಿ

Team Udayavani, May 25, 2020, 6:12 PM IST

25-May-18

ಮುದ್ದೇಬಿಹಾಳ: ಕುಂಟೋಜಿ ಹಿರೇಮಠದಲ್ಲಿ ಆಶಾ ಕಾರ್ಯಕರ್ತೆಯರನ್ನು ಚನ್ನವೀರ ಸ್ವಾಮೀಜಿ ಹಾಗೂ ಇಟಗಿ ಗುರುಶಾಂತಲಿಂಗ ಶಿವಾಚಾರ್ಯರು ಸನ್ಮಾನಿಸಿದರು.

ಮುದ್ದೇಬಿಹಾಳ: ಕೋವಿಡ್ ಸಮಾಜದಲ್ಲಿನ ಎಲ್ಲರಿಗೂ ಸೌಹಾರ್ದತೆಯ ಪಾಠ ಕಲಿಸಿದೆ. ಕೂಡಿಬಾಳುವ ಸಂದೇಶ ನೀಡಿದೆ. ಕೋವಿಡ್ ವಾರಿಯರ್‌ಗಳು ಜೀವದ ಹಂಗು ತೊರೆದು ಮಾಡಿರುವ ಕೆಲಸ ಸದಾ ಸ್ಮರಣೀಯ ಎಂದು ಕುಂಟೋಜಿ ಸಂಸ್ಥಾನ ಹಿರೇಮಠದ ಚನ್ನವೀರ ಸ್ವಾಮೀಜಿ ಹೇಳಿದ್ದಾರೆ.

ಕುಂಟೋಜಿಯ ಶ್ರೀಮಠದಲ್ಲಿ ರವಿವಾರ ಸಂಜೆ ಶ್ರೀಮಠದಿಂದ ಹಮ್ಮಿಕೊಂಡಿದ್ದ ಕೋವಿಡ್ ವಾರಿಯರ್‌ ಗಳಿಗೆ ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ಸೋಮವಾರ ರಂಜಾನ್‌ ಹಬ್ಬವಿದೆ. ಕೋವಿಡ್ ಕರಾಳತೆ ಹಬ್ಬದ ಕಳೆ ಕಡಿಮೆ ಮಾಡಿದ್ದು, ಗ್ರಾಮೀಣ ಭಾಗದಲ್ಲಿ ಹಿಂದೂ ಮುಸ್ಲಿಂರು ಸಹೋದರರಂತೆ ಬಾಂಧವ್ಯದಿಂದ ಹಬ್ಬ ಆಚರಿಸುವ ಸಂಪ್ರದಾಯ ಕೈಬಿಡುವುದಿಲ್ಲ. ಇಂಥ ಸಂದರ್ಭ ಕೋವಿಡ್ ವಾರಿಯರ್‌ಗಳಾಗಿ ಕೆಲಸ ಮಾಡಿರುವ ಆಶಾ ಕಾರ್ಯಕರ್ತೆಯರನ್ನು, ಕೋವಿಡ್ ಸಂಕಷ್ಟದಲ್ಲಿ ಬಡವರ ನೆರವಿಗೆ ಧಾವಿಸುತ್ತಿರುವ ಜನಪ್ರತಿನಿಧಿಗಳನ್ನು, ಸಂಘ ಸಂಸ್ಥೆಗಳ ಅಧ್ಯಕ್ಷರನ್ನು ಗೌರವಿಸುವುದು ನಮ್ಮ ಮಠಕ್ಕೆ ಹೆಮ್ಮೆಯ ಸಂಗತಿ. ಇದು ಸಮಾಜಕ್ಕೆ ಮಾದರಿ ಕಾರ್ಯ ಎಂದರು.

ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಸಿದ್ದು ಹೆಬ್ಟಾಳ ಮಾತನಾಡಿ, ಕೊರೊನಾ ಸಮಾಜಕ್ಕೆ ಸಾಕಷ್ಟು ಪಾಠ ಕಲಿಸಿದೆ. ಈ ಸಾಂಕ್ರಾಮಿಕ ರೋಗ ನಿಯಂತ್ರಣದಲ್ಲಿ ಆಶಾ ಕಾರ್ಯಕರ್ತೆಯರ ಜತೆಗೆ ಹಲವರ ಪಾತ್ರ ಮಹತ್ವದ್ದಾಗಿದೆ. ಅನೇಕ ದಾನಿಗಳು ಬಡವರ ಸಂಕಷ್ಟಕ್ಕೆ ನೆರವಾಗಿರುವುದು ಸತ್ಸಂಪ್ರದಾಯ ಎನ್ನಿಸಿಕೊಂಡಿದೆ ಎಂದರು.

ಇದೇ ವೇಳೆ ಸ್ಥಳೀಯ ಆಶಾ ಕಾರ್ಯಕರ್ತೆಯರಾದ ಶಾರದಾ ಹಿರೇಮಠ, ಯಲ್ಲವ್ವ ಹೊಸಮನಿ, ಯಲ್ಲವ್ವ ತಳವಾರ, ರೇಣುಕಾ ತಾಮ್ರಳ್ಳಿ, ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಕರ್ನಾಟಕ ಸೌಹಾರ್ದ ಬ್ಯಾಂಕ್‌ ಅಧ್ಯಕ್ಷ ಸತೀಶ ಓಸ್ವಾಲ್‌, ಸಿದ್ದರಾಮ ಮತ್ತು ಭಾಗ್ಯಜ್ಯೋತಿ ಅವರನ್ನು ಶ್ರೀಮಠದ ವತಿಯಿಂದ ಚನ್ನವೀರ ಸ್ವಾಮೀಜಿ, ಇಟಗಿ ಭೂ ಕೈಲಾಸ ಮೇಲಗದ್ದುಗೆ ಮಠದ ಗುರುಶಾಂತಲಿಂಗ ಶಿವಾಚಾರ್ಯರು ಸನ್ಮಾನಿಸಿ ಶುಭ ಕೋರಿದರು.

ಪ್ರವಚನಕಾರರಾದ ಸಂಗಯ್ಯಶಾಸ್ತ್ರಿಗಳು ಆಲೂರ, ಷಡಕ್ಷರಿಶಾಸ್ತ್ರಿಗಳು ಯರಗಲ್‌, ಗಣ್ಯರಾದ ಎಸ್‌. ಎಂ.ಪಾಟೀಲ, ಕೆ.ಜಿ.ಬಿರಾದಾರ, ನಯಿಮಪಾಷಾ ಇನಾಮದಾರ, ಉಸ್ಮಾನ ಇನಾಮದಾರ, ಸೋಮಣ್ಣ ಹೊಸಮನಿ, ಮಹಾಂತೇಶ ಬೂದಿಹಾಳಮಠ, ಬಸಯ್ಯ ನಂದಿಕೇಶ್ವರಮಠ, ಮಲ್ಲು ಪಲ್ಲೇದ, ಸಂಗು ಒಣರೊಟ್ಟಿ, ಪ್ರಕಾಶ ಹೂಗಾರ, ಸಂಗು ಹೂಗಾರ, ಲಿಂಗರಾಜ ಉಣ್ಣೀಭಾವಿ, ಸಂಗಮೇಶ ಗುತ್ತೇದಾರ, ಸೋಮು ಗಸ್ತಿಗಾರ, ಪ್ರಾಂಶುಪಾಲ ಡಾ| ಎನ್‌.ಬಿ.ಹೊಸಮನಿ, ಮಲ್ಲಿಕಾರ್ಜುನ ಬಾಗೇವಾಡಿ, ಶಿವಬಸ್ಸು ಸಜ್ಜನ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.