ಮಾಸ್ಕ್ ಧರಿಸಿ ಸಂಚರಿಸಿ: ಡಿವೈಎಸ್ಪಿ
Team Udayavani, May 9, 2020, 4:40 PM IST
ಸಾಂದರ್ಭಿಕ ಚಿತ್ರ
ಮುದ್ದೇಬಿಹಾಳ: ಲಾಕ್ಡೌನ್ ಸಡಿಲಿಕೆ ಆಗಿದ್ದರೂ ಕೆಲ ನಿಯಮ ಜಾರಿಯಲ್ಲಿವೆ. ಸಾರ್ವಜನಿಕರು, ವಾಹನಗಳ ಚಾಲಕರು ಇವುಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಬಸವನಬಾಗೇವಾಡಿ ಪೊಲೀಸ್ ವಲಯದ ಡಿವೈಎಸ್ಪಿ ಈ. ಶಾಂತವೀರ ವಿನಂತಿಸಿದ್ದಾರೆ.
ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನ ಸವಾರರನ್ನು ತಡೆದು ಮಾಸ್ಕ್ ಧರಿಸಿ ಮತ್ತು ಸಂಚಾರ ನಿಯಮ ಪಾಲಿಸುವಂತೆ ತಿಳಿಹೇಳಿದರು. ದ್ವಿಚಕ್ರ ವಾಹನದಲ್ಲಿ ಒಬ್ಬರಿಗೆ, ನಾಲ್ಕು ಚಕ್ರದ ವಾಹನದಲ್ಲಿ ಚಾಲಕ ಸೇರಿ ಮೂವರಿಗೆ ಮಾತ್ರ ಅವಕಾಶವಿದೆ. ಇದನ್ನು ಉಲ್ಲಂಘಿಸಿದಲ್ಲಿ ದಂಡ ಹಾಕುವುದು ಅನಿವಾರ್ಯವಾಗಲಿದೆ. ನಿಯಮ ಪಾಲಿಸಿ ಪೊಲೀಸರ ಜತೆ ಸಹಕರಿಸಿ ಎಂದು ವಿನಂತಿಸಿದರು. ಇದೇ ಕೆಲವರಿಗೆ ಲಾಠಿ ರುಚಿ ತೋರಿಸಿದರು.
ಅಂಬೇಡ್ಕರ್ ವೃತ್ತದಲ್ಲಿ ಬುಲೆಟ್ ಬೈಕ್ ಮೇಲೆ ಆರ್ಮಿ ಎಂದು ಬರೆದುಕೊಂಡಿದ್ದ ವ್ಯಕ್ತಿ ಮಾಸ್ಕ್ ಧರಿಸದೆ ಮತ್ತೂಬ್ಬ ಸವಾರನನ್ನು ಕೂರಿಸಿಕೊಂಡು ಸಂಚರಿಸುತ್ತಿದ್ದ. ಈತನನ್ನು ತಡೆದ ಡಿವೈಎಸ್ಪಿ ಆರ್ಮಿಯಲ್ಲಿರುವ ನೀವೇ ಕಾನೂನು ಉಲ್ಲಂಘಿಸಿದರೆ ಹೇಗೆ. ಮೊದಲು ಮಾಸ್ಕ್ ಧರಿಸಿ ಎಂದು ಬುದ್ದಿವಾದ ಹೇಳಿದರು.
40 ಸಾವಿರ ರೂ. ದಂಡ ವಸೂಲಿ
ಈ ಮಧ್ಯೆ ಸ್ಥಳೀಯ ಪುರಸಭೆ ಅಧಿಕಾರಿಗಳ ತಂಡ ಮುಖ್ಯಾಧಿಕಾರಿ ಗೋಪಾಲ ಕಾಸೆ ನೇತೃತ್ವದಲ್ಲಿ ಪಟ್ಟಣದ ವಿವಿಧೆಡೆ ಸಂಚರಿಸಿ ಲಾಕಡೌನ್ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವ ಕಾರ್ಯ ಮುಂದುವರಿಸಿದೆ. ಮೇ 4ರಿಂದ ಶುಕ್ರವಾರ ಸಂಜೆಯವರೆಗೆ ವಿವಿಧ ಪ್ರಕರಣಗಳಲ್ಲಿ ಒಟ್ಟಾರೆ 40000 ರೂ. ದಂಡ ವಿಧಿಸಿ, ಮೊತ್ತವನ್ನು ಸರ್ಕಾರದ ಖಾತೆಗೆ ಜಮಾ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
MUST WATCH
ಹೊಸ ಸೇರ್ಪಡೆ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…