ಸರೂರ: ಜಗದ್ಗುರು ರೇವಣಸಿದ್ದೇಶ್ವರ ಜಾತ್ರೋತ್ಸವಕ್ಕೆ ಚಾಲನೆ


Team Udayavani, Feb 24, 2020, 1:37 PM IST

24-February-15

ಮುದ್ದೇಬಿಹಾಳ: ಹಾಲುಮತ ಸಮಾಜದ ಮೂಲ ಗುರು ಪೀಠ ಇರುವ ಮುದ್ದೇಬಿಹಾಳ ತಾಲೂಕಿನ ಸರೂರ ಗ್ರಾಮದ ಜಗದ್ಗುರು ರೇವಣಸಿದ್ದೇಶ್ವರ (ಏಳುಗುಡಿ) ಜಾತ್ರಾ ಮಹೋತ್ಸವಕ್ಕೆ ಶನಿವಾರ ಚಾಲನೆ ದೊರಕಿದ್ದು ಫೆ. 25ರವರೆಗೆ ವಿವಿಧ ಧಾರ್ಮಿಕ, ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿವೆ.

ಸಿದ್ದಯ್ಯ ಗುರುವಿನ ಇವರ ನೇತೃತ್ವದಲ್ಲಿ, ಕಾಡಯ್ಯ ಗುರುವಿನ ಅಧ್ಯಕ್ಷತೆಯಲ್ಲಿ, ಮೂಲ ಮಠದ ಗುರುವರ್ಯರ ಉಪಸ್ಥಿತಿಯಲ್ಲಿ ಸಕಲ ಕಾರ್ಯಗಳು ನೆರವೇರಲಿವೆ. ಜಾತ್ರೆ ಪ್ರಾರಂಭೋತ್ಸವದ ಮೊದಲ ದಿನ ಶನಿವಾರ ಮದ್ಯಾಹ್ನ ರೇವಣಸಿದ್ದೇಶ್ವರ ಪಲ್ಲಕ್ಕಿ ಉತ್ಸವವನ್ನು ನಾರಾಯಣಪುರ ಜಲಾಶಯದ ಹತ್ತಿರ ಛಾಯಾಭಗವತಿ ಬಳಿ ಇರುವ ಕೃಷ್ಣಾ ನದಿಗೆ ಗಂಗಸ್ಥಳಕ್ಕೆ ಕರೆದೊಯ್ಯಲಾಗಿತ್ತು. ರಾತ್ರಿ ಸುಪ್ರಸಿದ್ದ ಭಜನಾ ಮಂಡಳಿಗಳಿಂದ ಬೆಳಗಿನವರೆಗೆ ಶಿವಭಜನೆ ನೆರವೇರಿದವು.

ರವಿವಾರ ಬೆಳಗ್ಗೆ ಸಕಲ ವಾದ್ಯ ವೈಭವಗಳೊಂದಿಗೆ ತೆಲಗಿ ಗ್ರಾಮದ ಕರಡಿ ಮಜಲಿನ ಸಮೇತ ಗ್ರಾಮದಲ್ಲಿರುವ ರೇವಣಸಿದ್ದೇಶ್ವರರ ಗುಡಿಯಿಂದ ಏಳು ಗುಡಿಯವರೆಗೆ ಕಳಸಗಳ ಮೆರವಣಿಗೆ ಡೊಳ್ಳು ವಾದ್ಯ ತಂಡದ ಸಮ್ಮುಖ ನಡೆದು ನಂತರ ಕಳಸವನ್ನು ಶಿಖರಕ್ಕೇರಿಸಲಾಯಿತು. ಸಂಜೆ ಸಕಲ ವಾದ್ಯ ವೈಭವಗಳೊಂದಿಗೆ ರೇವಣ ಸಿದ್ದೇಶ್ವರ ಪಲ್ಲಕ್ಕಿ ಉತ್ಸವ, ಚಿತ್ತಾರದ ಮದ್ದು ಸುಡುವಿಕೆ ನೆರವೇರಿದವು.

ಮಧ್ಯರಾತ್ರಿ 1ಕ್ಕೆ ಶಿವವಾಣಿ (ಹೇಳಿಕೆಗಳು) ಹೊರಬೀಳಲಿದೆ. 24ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸುಪ್ರಸಿದ್ದ ಡೊಳ್ಳಿನ ಪದಗಳು, ರಾತ್ರಿ 10ಕ್ಕೆ ಗುರು ವೀರೇಶ್ವರ ನಾಟ್ಯಸಂಘ ನಾಲತವಾಡ ಇವರಿಂದ ಹಾಸ್ಯ ಪ್ರಧಾನ ನಾಟಕ ಪ್ರದರ್ಶನ ಇರುತ್ತದೆ. ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಉದ್ಘಾಟಿಸಲಿದ್ದು ಎಂ.ಎಸ್‌. ಪಾಟೀಲ ಅಧ್ಯಕ್ಷತೆ ವಹಿಸುವರು. ಹಲವು ಗಣ್ಯರು ಅತಿಥಿಗಳಾಗಿ ಆಗಮಿಸುವರು. 25ರಂದು ಬೆಳಗ್ಗೆ 10ಕ್ಕೆ ದಿಂಡಿನ ರೇಸು ಸ್ಪರ್ಧೆ ಇರುತ್ತದೆ.

ಶಿವವಾಣಿ: ಶನಿವಾರ ರೇವಣಸಿದ್ದೇಶ್ವರ ಪಲ್ಲಕ್ಕಿ ಉತ್ಸವವನ್ನು ನಾರಾಯಣಪುರ ಜಲಾಶಯದ ಬಳಿ ಇರುವ ಛಾಯಾ ಭಗವತಿ ದೇವಸ್ಥಾನ ಬಳಿ ಕೃಷ್ಣಾ ನದಿಗೆ ಗಂಗಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಅಲ್ಲಿ ಮಧ್ಯರಾತ್ರಿ ಹಾಲುಮತ ಗುರುಪೀಠದ ಗುರುವರ್ಯರಾದ ಸಹದೇವಯ್ಯ ಶರಣಯ್ಯ ಗುರುವಿನ್‌, ಸಿದ್ದಯ್ಯ ಕಾಡಯ್ಯ ಗುರುವಿನ್‌ ಅವರಿಂದ ಶಂಖನಾದದ ನಂತರ ಶಿವವಾಣಿ (ಹೇಳಿಕೆ) ಹೊರ ಬಂದವು. ಭಕ್ತರೊಬ್ಬರು ಸುತ್ತ ಮುಂಗಾರು ಮಳಿ ದಯಮಾಡಬೇಕ್ರಿ ಶಿವಾ ಎಂದು ಬೇಡಿಕೊಂಡರು.

ಕೆಲಹೊತ್ತು ಆವೇಶ ಮೈದುಂಬಿಸಿಕೊಂಡ ಗುರುವರ್ಯರು ಎಲೇ.. ತುರ್ತು ರೋಹಿಣಿ, ಮೃಗಶಿರ ಮಸ್ತು. ಮುಂಗಾರು ಕೂರಿಗ್ಗೆ ವರವುಳ್ಳ ಬಸವಣ್ಣನ ಕೊಳ್ಳ ಕಟ್ಟೇನಿ, ಅರವುಳ್ಳ ಭಕ್ತನಿಗೆ ಉಡಿ ಕಟ್ಟೇನಿ. ಆರಾದ್ರಿ, ಪುನರ್ವಸು, ಪುಷ್ಯ, ಆಶ್ಲೇಷಾ, ಮಗಿಗೆ ಸಕಲ ಸದ್ಭಕ್ತರಿಗೆ ತೃಪ್ತಿ ಆಯ್ತು. ಮುಂಗಾರು ಒಂಭತ್ತಣೆ ಅಂತಾನಲೇ.. ಎಲೈ… ತುರ್ತು ಮುಂಗಾರಿ ಮಳಿ ಸಾಗ ಮಾಡೀನಿ. ಪುಷ್ಯ ಪುನರ್ವಸು ಹಿಡಕೊಂಡು ಮುಂದಿನ ಮಳೆಗಳು ಸಾಯೋ ಜೀವ ಉಳಿಸ್ತಾವ ನೋಡು. ಮುಂಗಾರ್ಯಾಗ ಮುತ್ತಿನ ರಾಶಿಲೇ ಎಂದಿದ್ದು ಭಕ್ತರ ಸಂತಸಕ್ಕೆ ಕಾರಣವಾಯಿತು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.