Muddebihal; 45 ಗೋವುಗಳ ರಕ್ಷಣೆ; ಲಾರಿ ವಶ; ಎಫ್ಐಆರ್ ದಾಖಲು
Team Udayavani, Jun 17, 2023, 2:20 PM IST
ಮುದ್ದೇಬಿಹಾಳ: ಕುಷ್ಠಗಿ ಭಾಗದಿಂದ ಕಲಬುರ್ಗಿಯತ್ತ ಲಾರಿಗಳಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಸಂಶಯದ ಮೇಲೆ 45 ಗೋವು(ಆಕಳು) ಲಾರಿ ಸಮೇತ ವಶಪಡಿಸಿಕೊಂಡಿರುವ ಇಲ್ಲಿನ ಪೊಲೀಸರು ಲಾರಿ ಚಾಲಕರು, ಲಾರಿಯಲ್ಲಿದ್ದ ಗೋವು ಸಾಗಾಣಿಕೆದಾರ ಮೇಲೆ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕೃಷ್ಣಾ ನದಿಯ ಸೇತುವೆ ದಾಟಿ ತಂಗಡಗಿ ಗ್ರಾಮದ ಮೂಲಕ ಇವುಗಳನ್ನು ಸಾಗಿಸುತ್ತಿರುವ ಮಾಹಿತಿ ಅರಿತ ವಿಶ್ವ ಹಿಂದು ಪರಿಷತ್, ಭಜರಂಗ ದಳ ಸೇರಿದಂತೆ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ವಾಹನ ತಡೆದು ವಿಚಾರಣೆ ನಡೆಸಿದಾಗ ಇವುಗಳನ್ನು ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಮಾಹಿತಿ ಗೊತ್ತಾಗಿ ಕಾರ್ಯಕರ್ತರ ಆಗ್ರಹದ ಮೇರೆಗೆ ಈ ಪ್ರಕರಣ ದಾಖಲಾಗಿದೆ.
ಗದ್ದಲ ವಾಗ್ವಾದ:
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದನ್ನು ತಿಳಿದ ಒಂದು ಕೋಮಿನ ಹಲವು ಯುವಕರು ಗುಂಪಾಗಿ ಪೊಲೀಸ್ ಠಾಣೆಗೆ ಬಂದು ತಕರಾರು ತೆಗೆದರು. ಪಿಎಸೈ ಅವರು ಎಲ್ಲರಿಗೂ ಬುದ್ದಿವಾದ ಹೇಳಿ, ಕಾನೂನಿನ ತಿಳಿವಳಿಕೆ ನೀಡಿದ ಮೇಲೆ ಅವರೆಲ್ಲ ಗೊಣಗುತ್ತಲೇ ಠಾಣೆಯಿಂದ ನಿರ್ಗಮಿಸಿದರು.
ಮಾನವೀಯತೆ:
ಗೋವುಗಳನ್ನು ತಂಗಡಗಿ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಇಳಿಸಿ ಹಿಂದು ಪರ ಸಂಘಟನೆಗಳ ಮುಖಂಡರು, ಪೊಲೀಸರು ಅವುಗಳಿಗೆ ಮೇವು, ನೀರು ಕೊಟ್ಟು ಮಾನವೀಯತೆ ತೋರಿದರು. ಸಧ್ಯ ಎಲ್ಲ ಗೋವುಗಳನ್ನು ಯಲಗೂರದಲ್ಲಿರುವ ಗೋಶಾಲೆಗೆ ಸಾಗಿಸಲು ವ್ಯವಸ್ಥೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?