
ಮುದ್ದೇಬಿಹಾಳ: ಘನ ವಾಹನದ ಚಕ್ರ ಹರಿದು ಬೈಕ್ ಸವಾರನ ದಾರುಣ ಸಾವು
Team Udayavani, Dec 2, 2022, 9:37 PM IST

ಮುದ್ದೇಬಿಹಾಳ: ಅಪರಿಚಿತ ಘನ ವಾಹನ ಹರಿದು ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಮುಖ್ಯ ರಸ್ತೆ ಮೇಲೆ ಶುಕ್ರವಾರ ರಾತ್ರಿ 8 ಗಂಟೆ ಸುಮಾರು ಬೆಳಕಿಗೆ ಬಂದಿದೆ.
ತಂಗಡಗಿ ಕ್ರಾಸನಿಂದ ಅಂದಾಜು 5-6 ಕಿಮಿ ಅಂತರದಲ್ಲಿ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು ಬಾಗಲಕೋಟ ಜಿಲ್ಲೆ ಕಿರಸೂರ ಗ್ರಾಮದ ಸಂಗಪ್ಪ ಭೀಮಶೆಪ್ಪ ಈರಗಾರ (35) ಎಂದು ಗುರುತಿಸಲಾಗಿದೆ. ಈತ ಸಮೀಪದ ಡಾಬಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.
ಭಾರೀ ವಾಹನದ ಚಕ್ರಗಳು ಹೊಟ್ಟೆಯ ಮೇಲೆಯ ಹರಿದ ಪರಿಣಾಮ ಕರುಳು ದೇಹದಿಂದ ಹೊರಬಂದಿರುವುದು ಅಪಘಾತದ ತೀವ್ರತೆ ತೋರಿಸುತ್ತದೆ. ಇದೇ ರಸ್ತೆಯ ಸ್ವಲ್ಪ ದೂರದಲ್ಲಿ ಸಕ್ಕರೆ ಕಾರ್ಖಾನೆ ಇದೆ. ಅಲ್ಲಿಗೆ ಕಬ್ಬು ಸಾಗಿಸುವ ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ಸಂಚರಿಸುತ್ತವೆ. ಈ ಪೈಕಿ ಯಾವುದಾದರೂ ವಾಹನ ಹರಿದಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತ ಪಡಿಸಿದ್ದಾರೆ.
ತಾನೇ ಚಲಾಯಿಸುತ್ತಿದ್ದ ಬೈಕ್ ಪಕ್ಕದಲ್ಲೇಬಿದ್ದಿದ್ದು. ಮುದ್ದೇಬಿಹಾಳ ಪಿಎಸೈ ಆರೀಫ ಮುಷಾಪುರಿ ಅವರು ಸಿಬಂದಿ ಸಮೇತ ಸ್ಥಳಕ್ಕೆ ಧಾವಿಸಿದ್ದು ಆಂಬುಲೆನ್ಸ್ ತರಿಸಿ ಶವವನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸಿ, ತಕ್ಷಣದ ಕಾನೂನು ಕ್ರಮ ಕೈಕೊಂಡಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಸಂಪೂರ್ಣ ಕತ್ತಲೆ ಆವರಿಸಿದ್ದು ತನಿಖೆಗೆ ಅಡ್ಡಿಯಾಗಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಡಚಣದಲ್ಲಿ ಕೆ.ಆರ್.ಪಿ ಪಕ್ಷದ ರ್ಯಾಲಿ: ಪಕ್ಷ ಸೇರ್ಪಡೆ ಕಾರ್ಯಕ್ರಮ

ಅಪ್ರಾಪ್ತನಿಂದ ಶಿವಾಜಿ ಮಹಾರಾಜರಿಗೆ ಅಪಮಾನ: ವಿಚಾರಣೆ ನಡೆಸುತ್ತಿರುವ ಪೊಲೀಸರು

ಕೌಟುಂಬಿಕ ಕಲಹ: ಮೂರು ಮಕ್ಕಳನ್ನು ನೀರಿನ ಸಂಪ್ ಗೆ ಎಸೆದು ತಾಯಿ ಆತ್ಮಹತ್ಯೆ

ಕಾಂಗ್ರೆಸ್ ಪಕ್ಷವು ದೇಶದಾದ್ಯಂತ ಜನಮನದಿಂದ ದೂರವಾಗಿದೆ: ವಿಜಯೇಂದ್ರ

ಬಿಎಸ್ ವೈ ವಿರುದ್ಧ ಮಾತನಾಡಲ್ಲ ಎಂದಿರುವ ಯತ್ನಾಳ್ ನಡೆ ಒಳ್ಳೆಯದು: ವಿಜಯೇಂದ್ರ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಶವ ಪತ್ತೆ

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

Union Budget 2023: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ