Muddebihal: ಬರಗಾಲದ ಹೊಡೆತ; ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆ
Team Udayavani, Nov 1, 2023, 8:05 PM IST
ಮುದ್ದೇಬಿಹಾಳ: ಬರಗಾಲದ ಹೊಡೆತಕ್ಕೆ ಬೆಳೆಹಾನಿ ಅನುಭವಿಸಿ ಸಾಲ ತೀರಿಸುವುದು ಹೇಗೆನ್ನುವ ಚಿಂತೆಯಲ್ಲಿ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಅಡವಿ ಸೋಮನಾಳ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದ್ದು ಬುಧವಾರ ಈ ಕುರಿತು ಪ್ರಕರಣ ದಾಖಲಾಗಿದೆ. ಮೃತನನ್ನು ಸಿದ್ದಪ್ಪ ಬೀರಪ್ಪ ಪೂಜಾರಿ (44) ಎಂದು ಗುರುತಿಸಲಾಗಿದೆ.
ಜಮೀನ ಸಾಗುವಳಿಗಾಗಿ ಅಡವಿ ಸೋಮನಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಬ್ಯಾಂಕಿನಲ್ಲಿ 55,000 ರೂ. ಬೆಳೆ ಸಾಲ ಹಾಗೂ ಊರಲ್ಲಿ ಕೈಗಡ 1 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಸರಿಯಾಗಿ ಮಳೆಯಾಗದೇ ಬೆಳೆ ಬರದೇ ಇದ್ದುದರಿಂದ ಮಾಡಿದ ಸಾಲವನ್ನ ಹೇಗೆ ತೀರಿಸುವುದು ಎಂದು ನೊಂದು ಮನೆಯಲ್ಲೇ ತೊಗರಿಗೆ ಸಿಂಪಡಿಸಲು ತಂದಿಟ್ಟಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಪತ್ನಿ ನಾಗಮ್ಮ ಪೂಜಾರಿ ಗ್ರಾಮ ವ್ಯಾಪ್ತಿ ಹೊಂದಿರುವ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಸ್ವಾಭಾವಿಕ ಸಾವು ಅಡಿ ಪ್ರಕರಣ ದಾಖಲಿಸಿಕೊಂಡಿರುವ ತಾಳಿಕೋಟೆ ಪೊಲೀಸರು ಕಾನೂನು ಕ್ರಮ ಕೈಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ