ಮುದ್ದೇಬಿಹಾಳ: ಗಾಳಿಗೆ ಮರ ಮುರಿದು ಬಿದ್ದು ಕಲಾವಿದರಾಗಿದ್ದ ಶಿಕ್ಷಕ ಮೃತ್ಯು
Team Udayavani, Apr 30, 2023, 10:02 PM IST
ಮುದ್ದೇಬಿಹಾಳ: ಮರ ಮೈಮೇಲೆ ಮುರಿದು ಬಿದ್ದು ಕಲಾವಿದರೂ ಆಗಿದ್ದ ಶಿಕ್ಷಕ ಪ್ರಕಾಶ ವೀರಭದ್ರಪ್ಪ ಛಲವಾದಿ (35) ದುರಂತ ಸಾವನ್ನಪ್ಪಿರುವ ಘಟನೆ ಆಲಮಟ್ಟಿ ಮುಖ್ಯ ರಸ್ತೆಯ ಹುಲ್ಲೂರ ಗ್ರಾಮದ ಹಳ್ಳದ ಹತ್ತಿರ ರವಿವಾರ ಸಂಜೆ ನಡೆದಿದೆ.
ಬಾಗಲಕೋಟೆ ಜಮಖಂಡಿ ತಾಲೂಕು ಚಿಮ್ಮಡ ಗ್ರಾಮದವರಾಗಿದ್ದ ನಿಡಗುಂದಿಯಲ್ಲಿ ಮನೆ ಮಾಡಿ ಕುಟುಂಬ ಸಮೇತ ವಾಸವಿದ್ದ ವೀರಭದ್ರಪ್ಪ ಅವರು ಮುದ್ದೇಬಿಹಾಳ ತಾಲೂಕು ಸಿದ್ದಾಪೂರ ಪಿಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿದ್ದು ಪ್ರಭಾರಿ ಮುಖ್ಯಾಧ್ಯಾಪಕರಾಗಿಯೂ ಜವಾಬ್ಧಾರಿ ನಿರ್ವಹಿಸುತ್ತಿದ್ದರು.
ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ರವಿವಾರ ಬೆಳಗ್ಗೆ ಗ್ರಾಮದಲ್ಲಿ ನಡೆದ ನಮ್ಮ ಮತ ನಮ್ಮ ಹಕ್ಕು ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನ ಮುದ್ದೇಬಿಹಾಳದಲ್ಲಿ ನಡೆದ ಶಿಕ್ಷಕ ದಂಪತಿ ಬಿ.ವಿ.ಕೋರಿ ಮತ್ತು ಸರೋಜಾ ಕಿತ್ತೂರ ದಂಪತಿಯರ ಪುತ್ರಿಯ ಮದುವೆಯಲ್ಲಿ ಭಾಗವಹಿಸಿದ್ದರು. ಸಂಜೆ ಜೋರಾಗಿ ಗಾಳಿ ಬೀಸುತ್ತಿದ್ದರೂ ಲೆಕ್ಕಿಸದೆ ಬೈಕ್ ಮೇಲೆ ನಿಡಗುಂದಿಗೆ ಹೊರಟಾಗ ಜೋರಾದ ಗಾಳಿಗೆ ಬೇವಿನ ಮರ ಮುರಿದು ಇವರ ಮೇಲೆ ಬಿದ್ದಿದೆ. ಅದರ ಕೆಳಗೆ ಸಿಕ್ಕ ಇವರ ಪ್ರಾಣಪಕ್ಷಿ ಸ್ಥಳದಲ್ಲೇ ಹಾರಿಹೋಗಿದೆ.
ಜೋರಾದ ಗಾಳಿ ಮಳೆಯ ಕಾರಣ ಯಾರೂ ಈ ಘಟನೆ ಗಮನಿಸಿದ್ದಿಲ್ಲ. ಇವರ ದುರಂತ ಸಾವು ಇಡೀ ಶಿಕ್ಷಕ ವಲಯದಲ್ಲಿ ಅಪಾರ ಶೋಕದ ಮೂಡಿಸಿದೆ. ಕಲಾವಿದರೂ, ಗಾಯಕರು, ಸಾಹಿತಿ, ಕವಿ ಹೀಗೆ ಬಹುಮುಖ ವ್ಯಕ್ತಿತ್ವ ಹೊಂದಿದ್ದ ಇವರು ಹಲವು ಕಡೆಗಳಲ್ಲಿ ತಂಡದೊಂದಿಗೆ ವೇದಿಕೆ ಪ್ರದರ್ಶನವನ್ನೂ ನೀಡುತ್ತಿದ್ದರು. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ