ಸೋಂಕು ಹರಡದಂತೆ ಮುಂಜಾಗ್ರತೆ ವಹಿಸಿ
ಗೋವಾದಿಂದ 196 ವಲಸೆ ಕಾರ್ಮಿಕರ ಆಗಮನ ಎಲ್ಲರಿಗೂ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ
Team Udayavani, May 16, 2020, 4:37 PM IST
ಮುದ್ದೇಬಿಹಾಳ: ಗೋವಾ ರಾಜ್ಯದಿಂದ ಬಂದವರು ತಮ್ಮ ಮನೆಗಳಲ್ಲಿ, ಮಹಾರಾಷ್ಟ್ರ ಸೇರಿದಂತೆ ಕೋವಿಡ್ ಸೋಂಕಿನ ಹೈ ರಿಸ್ಕ್ ರಾಜ್ಯಗಳಿಂದ ಬಂದವರು ತಾಲೂಕಾಡಳಿತ ಗುರುತಿಸಿದ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರೆಂಟೈನ್ಗೊಳಗಾಗಿ ಸೋಂಕು ಹರಡದಂತೆ ಮುಂಜಾಗ್ರೆತೆ ವಹಿಸಬೇಕು ಎಂದು ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಮನವಿ ಮಾಡಿದರು.
ನಗರದ ಬಸ್ ನಿಲ್ದಾಣಕ್ಕೆ ಬುಧವಾರ ಗೋವಾದಿಂದ 7 ಬಸ್ಗಳಲ್ಲಿ ಆಗಮಿಸಿದ 196 ವಲಸೆ ಕಾರ್ಮಿಕರನ್ನು ಸ್ವಾಗತಿಸಿಕೊಂಡು ಅವರಿಗೆ ಮತ್ತು ಅವರನ್ನು ಕರೆ ತಂದ ಬಸ್
ಗಳ ಚಾಲಕ-ನಿರ್ವಾಹಕರಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಿ ಅವರು ಮಾತನಾಡಿದರು. ಯಾರೊಬ್ಬರೂ ನಿಯಮ ಉಲ್ಲಂಘಿಸಬಾರದು. ಕ್ವಾರೆಂಟೈನ್ ಮಾಡಲು ಬರುವ ಸರ್ಕಾರಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಬಾರದು. ಸಾಂಸ್ಥಿಕ ಕ್ವಾರೆಂಟೈನ್ ಗೊಳಗಾದವರಿಗೆ ಸರ್ಕಾರವೇ ಊಟ, ನೀರು ಸಹಿತ ಎಲ್ಲ ಸೌಲಭ್ಯ ಒದಗಿಸಲು ವ್ಯವಸ್ಥೆ ಮಾಡಿದೆ ಎಂದರು.
ಕ್ವಾರೆಂಟೈನ್ ನಿಯಮ ಉಲ್ಲಂಘಿಸುವವರಿಗೆ ಶಿಕ್ಷೆ ವಿಧಿಸಲು ಅವಕಾಶ ಇದೆ. ಸೋಂಕಿನ ಹೈ ರಿಸ್ಕ್ ರಾಜ್ಯಗಳಿಂದ ಕಾರ್ಮಿಕರನ್ನು ಕರೆತರುವ ಬಸ್ ಗಳ ಚಾಲಕರು-ನಿರ್ವಾಹಕರು ಕಡ್ಡಾಯವಾಗಿ ಆರೋಗ್ಯ ತಪಾಸಣೆಗೆ ಒಳಗಾಗಬೇಕು. ಮನೆಗೆ ಹೋದಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು. ಬಿಜೆಪಿ ತಾಲೂಕು ಅಧ್ಯಕ್ಷ ಡಾ| ಪರಶುರಾಮ ಪವಾರ, ತಾಳಿಕೋಟೆ ಪುರಸಭೆ ಸದಸ್ಯ ವಾಸು ಹೆಬಸೂರ ಸೇರಿದಂತೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು