ನರೇಗಾ ಪರಿಣಾಮಕಾರಿಗೆ ಪಣ

ಇನ್ಮುಂದೆ ಗ್ರಾಪಂಗಳಿಗೆ ಭೇಟಿ ನೀಡಿ ಪರಿಶೀಲನೆ: ಶಾಸಕ ನಡಹಳ್ಳಿ

Team Udayavani, Jun 12, 2020, 12:36 PM IST

12-June-25

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುದ್ದೇಬಿಹಾಳ: ನಿತ್ಯ ಒಂದೊಂದು ಜಿಲ್ಲಾ ಪಂಚಾಯಿತಿ ಕ್ಷೇತ್ರದಂತೆ ತಾಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲ 5 ಜಿಪಂ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಉದ್ಯೋಗ ಖಾತ್ರಿ ಯೋಜನೆಯಡಿ ಭೂರಹಿತ ಕೃಷಿ ಕೂಲಿಕಾರ್ಮಿಕರು ಮತ್ತು ವಲಸೆ ಕಾರ್ಮಿಕರ ನೋಂದಣಿ ಕಾರ್ಯದ ಪ್ರಗತಿ ಪರಿಶೀಲಿಸುವೆ ಎಂದು ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಹೇಳಿದರು.

ಗುರುವಾರ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜೂನ್‌ 12ರಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚಾರ ಆರಂಭಿಸಿ ಪರಿಶೀಲನಾ ಕಾರ್ಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದೇನೆ. ಹೀಗಾಗಿ ಆಯಾ ಗ್ರಾಪಂ ಪಿಡಿಒಗಳು, ತಾಲೂಕು ಪಂಚಾಯಿತಿ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜೂ. 12ರಂದು ಯರಝರಿ, 13ರಂದು ರಕ್ಕಸಗಿ, 14ರಂದು ಹಿರೇಮುರಾಳ, 15ರಂದು ಕೊಣ್ಣೂರ ಹಾಗೂ 16ರಂದು ಬಸರಕೋಡ ಜಿಪಂ ಕ್ಷೇತ್ರ ವ್ಯಾಪ್ತಿಯ ಗ್ರಾಪಂಗಳಿಗೆ ಭೇಟಿ ನೀಡುತ್ತೇನೆ. ಸಂಬಂಧಿಸಿದ ಅಧಿಕಾರಿಗಳು ನನ್ನ ಜತೆಯಲ್ಲಿ ಬರಲಿದ್ದಾರೆ. ಆಯಾ ಗ್ರಾಪಂ ವ್ಯಾಪ್ತಿಯ ಕಾರ್ಮಿಕರನ್ನು ಗ್ರಾಪಂನ ಪಿಡಿಒಗಳೇ ಗ್ರಾಪಂ ಕಚೇರಿಗೆ ಕರೆತರತಕ್ಕದ್ದು. ಸ್ಥಳದಲ್ಲೇ ಉದ್ಯೋಗ ಖಾತ್ರಿ ನೋಂದಣಿ, ಜಾಬ್‌ ಕಾರ್ಡ್‌ ಸೇರಿ ಅಗತ್ಯ ಚಟುವಟಿಕೆ ನಡೆಸಬೇಕು. ಇದೇ ಸಂದರ್ಭ ಸಂಬಂಧಿಸಿದ ಗ್ರಾಮಲೆಕ್ಕಾಧಿಕಾರಿಗಳು, ಕಂದಾಯ ಇಲಾಖೆಯ ಸರ್ಕಲ್‌ಗ‌ಳು ಸ್ಥಳದಲ್ಲಿದ್ದು, ಅರ್ಹರಿಗೆ ಪಡಿತರ ಕಾರ್ಡ್‌, ಸಾಮಾಜಿಕ ಭದ್ರತಾ ಯೋಜನೆ ಅಡಿ ವಿವಿಧ ಮಾಸಾಶನ ಸೇರಿ ಸರ್ಕಾರದ ಸೌಲಭ್ಯ ಒದಗಿಸಲು ಕ್ರಮ ಕೈಕೊಳ್ಳಬೇಕು ಎಂದು ತಿಳಿಸಿದರು.

ಸದ್ಯ ಮಳೆ ಪ್ರಾರಂಭವಾಗಿದೆ. ಪರಿಶೀಲನೆ ನಡೆಸುವ ಸಮಯ ಮಳೆ ಬರುವ ವಾತಾವರಣ ಕಂಡುಬಂದಲ್ಲಿ ಪಂಚಾಯಿತಿ ಕೇಂದ್ರಸ್ಥಾನದವರನ್ನು ಮಾತ್ರ ಕರೆಸಿ ಸೌಲಭ್ಯ ವಿತರಿಸಬೇಕು. ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ಜನರನ್ನು ಕರೆಸುವ ಅಗತ್ಯ ಇಲ್ಲ. ಮಳೆ ನಿಂತ ಮೇಲೆ ಅವರನ್ನೂ ಪಂಚಾಯಿತಿಗೆ ಕರೆಸಿಕೊಂಡು ಸೌಲಭ್ಯ ಒದಗಿಸಿಕೊಡಬೇಕು. ಒಟ್ಟಾರೆ ಆಯಾ ಸಂದರ್ಭದ ಪರಿಸ್ಥಿತಿಗನುಸಾರ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಕುರಿತು ಮಾತನಾಡಿದ ತಾಪಂ ಕಾರ್ಯನಿರ್ವಾಹಕ ಅ ಧಿಕಾರಿ ಶಶಿಕಾಂತ ಶಿವಪುರೆ, ಭೂರಹಿತ ಕೃಷಿ ಕಾರ್ಮಿಕರ ಸಮೀಕ್ಷೆ ನಡೆಸಿದ ವೇಳೆ ಅಂದಾಜು 5000 ಕುಟುಂಬಗಳ ವರದಿ ಸಿಕ್ಕಿದ್ದು, ಅವರು ಹಾಗೂ ವಲಸೆ ಕಾರ್ಮಿಕರು ಸೇರಿ ಒಟ್ಟಾರೆ ಅಂದಾಜು 12000ವರೆಗೆ ಕಾರ್ಮಿಕರು ಲಭ್ಯವಿದ್ದಾರೆ. ಇವರೆಲ್ಲರಿಗೂ ಉದ್ಯೋಗ ಖಾತ್ರಿ ಅಡಿ ಉದ್ಯೋಗ ದೊರಕಿಸಿಕೊಡಲು ಕ್ರಮ ಕೈಕೊಳ್ಳಲಾಗುತ್ತದೆ. ಜೂ.15 ಮತ್ತು 16ರಂದು ರಾಜ್ಯತಂಡ, ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯವರ ತಂಡ ಈ ತಾಲೂಕಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಲಿದ್ದು, ಆ ಎರಡು ದಿನಗಳಂದು ಶಾಸಕರ ಪರಿಶೀಲನೆಗೆ ತೊಡಕಾಗಬಹುದಾಗಿದೆ. ಒಂದು ವೇಳೆ ರಾಜ್ಯ ತಂಡ ಬಂದಲ್ಲಿ ಆ ಎರಡು ದಿನಗಳ ಶಾಸಕರ ಪರಿಶೀಲನಾ ಕಾರ್ಯಕ್ರಮವನ್ನು ನಂತರದ ದಿನಗಳಿಗೆ ಹೊಂದಾಣಿಕೆ ಮಾಡಿಕೊಳ್ಳಬಹುದಾಗಿದೆ ಎಂದರು.

ತಹಸೀಲ್ದಾರ್‌ ಜಿ.ಎಸ್‌.ಮಳಗಿ ಈ ಸಂದರ್ಭ ಹಾಜರಿದ್ದು ಎಲ್ಲ ಗ್ರಾಮಲೆಕ್ಕಿಗರಿಗೆ, ಕಂದಾಯ ಇಲಾಖೆ ಸರ್ಕಲ್‌ಗ‌ಳಿಗೆ, ನಾಡಕಚೇರಿ ಉಪ ತಹಸೀಲ್ದಾರ್‌ ಗಳಿಗೆ ಶಾಸಕರ ಪರಿಶೀಲನಾ ಸಭೆಗೆ ಕಡ್ಡಾಯವಾಗಿ ಹಾಜರಿರಬೇಕು ಮತ್ತು ಸರ್ಕಾರದ ಸೌಲಭ್ಯ ಒದಗಿಸಲು ಕ್ರಮ ಕೈಕೊಳ್ಳಬೇಕು ಎಂದು ನಿರ್ದೇಶನ ನೀಡುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.