ಬಡವರ ಮನೆಗೆ ತಲುಪಲಿದೆ ಆಹಾರ ಕಿಟ್‌

20 ಸಾವಿರ ಬಡ ಕುಟುಂಬಕ್ಕೆ ಅಗತ್ಯ ವಸ್ತು ಪೂರೈಕೆ ಶಾಸಕ ನಡಹಳ್ಳಿ ಸ್ವಂತ ಖರ್ಚಿನಲ್ಲಿ ಸೇವೆ

Team Udayavani, Apr 16, 2020, 7:06 PM IST

16-April-22

ಮುದ್ದೇಬಿಹಾಳ: ಬಡವರಿಗೆ ವಿತರಿಸಲು ಸಂಗ್ರಹಿಸುತ್ತಿರುವ ಸಾಮಗ್ರಿಯನ್ನು ಶಾಸಕ ನಡಹಳ್ಳಿಅವರ ಆಪ್ತರು ಪರಿಶೀಲಿಸಿದರು.

ಮುದ್ದೇಬಿಹಾಳ: ಕೊರೊನಾ ಸಂಕಷ್ಟ ಕಾಲದಲ್ಲಿ ಲಾಕ್‌ಡೌನ್‌ನಿಂದಾಗಿ ಕೆಲಸ ಇಲ್ಲದೆ, ಊಟಕ್ಕೂ ಪರದಾಡುತ್ತಿರುವ ಮುದ್ದೇಬಿಹಾಳ, ತಾಳಿಕೋಟೆ, ನಾಲತವಾಡ ಪಟ್ಟಣಗಳ 20 ಸಾವಿರ ಬಡ ಕುಟುಂಬಗಳಿಗೆ ಒಂದು ಕೋಟಿ ರೂ. ವೆಚ್ಚದಲ್ಲಿ ದಿನಸಿ ಕಿಟ್‌ ವಿತರಣೆಗೆ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಭರದ ಸಿದ್ಧತೆ ನಡೆಸಿದ್ದು, ಜನಪ್ರತಿನಿಧಿಗಳಿಗೆ ಮಾದರಿ ಎನ್ನಿಸಿಕೊಂಡಿದೆ.

ಲಾಕ್‌ಡೌನ್‌ ಪ್ರಾರಂಭಗೊಂಡ ಮೇಲೆ ಗೋವಾದಲ್ಲಿನ ನಿರಾಶ್ರಿತ ಕನ್ನಡಿಗರ, ದಿನನಿತ್ಯ ದುಡಿದೇ ಬದುಕು ಸಾಗಿಸುವ ಸ್ಥಳೀಯ ಕಾರ್ಮಿಕರ ಸಂಕಷ್ಟ ಮನವರಿಕೆ ಮಾಡಿಕೊಂಡಿರುವ ಶಾಸಕರು, ಅವಕಾಶ ಸಿಕ್ಕಾಗಲೆಲ್ಲ ನೆರವು ನೀಡಿ ಸಂಕಷ್ಟದಲ್ಲಿ ಭಾಗಿಯಾಗುತ್ತಿದ್ದರು. ಲಾಕ್‌ಡೌನ್‌ನಿಂದಾಗಿ ಅನೇಕ ಬಡಹೆಣ್ಣುಮಕ್ಕಳು ಶಾಸಕರ ಮನೆಗೆ ಬಂದು ನಮಗೆ ಕೆಲಸ ಇಲ್ಲ, ಸರ್ಕಾರ ಅಕ್ಕಿ, ಗೋಧಿ ಮಾತ್ರ ಕೊಟ್ಟಿದೆ. ಅಡುಗೆ ಮಾಡಿಕೊಂಡು ತಿನ್ನಲು ಸಾಧ್ಯವಾಗದಷ್ಟು ಬಡತನ ಇದೆ ಎಂದು ಗೋಳು ತೋಡಿಕೊಂಡಿದ್ದರು. ಹೀಗಾಗಿ ದಿನಬಳಕೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಹಂಚಲು ನಿರ್ಧರಿಸಿ ಕಾರ್ಯರೂಪಕ್ಕೆ ತರುತ್ತಿದ್ದಾರೆ.

ಈಗಾಗಲೇ ಮತಕ್ಷೇತ್ರದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು, ಅವರೊಂದಿಗೆ ಆಸ್ಪತ್ರೆಗೆ ಬರುವ ಅವರ ಬಂಧುಗಳಿಗೆ ಉಚಿತ ಅನ್ನದಾಸೋಹ ಕಾರ್ಯ ನಡೆಸಿಕೊಡುತ್ತಿರುವ ಶಾಸಕರು, ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಆಹಾರ ಕಿಟ್‌ ವಿತರಣೆಗೆ ಮುಂದಾಗಿರುವುದು ಈ ಭಾಗದಲ್ಲಿ ಜನರ ಮೆಚ್ಚುಗೆಗೆ ಕಾರಣವಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳ ಸಹಕಾರದೊಂದಿಗೆ ತಮ್ಮ ಅಭಿಮಾನಿ ಬಳಗದ, ಬಿಜೆಪಿ ಕಾರ್ಯಕರ್ತರ ವಾರ್ಡ್‌ವಾರು ತಂಡ ರಚಿಸಿ ಬಿಪಿಎಲ್‌, ಅಂತ್ಯೋದಯ ಕಾರ್ಡ್‌ ಹೊಂದಿರುವ ಅಥವಾ ಆಯಾ ವಾರ್ಡ್‌ನಲ್ಲಿರುವ ನಿಜವಾದ ಬಡವರಿಗೆ ಮಾತ್ರ ವಿತರಿಸಲಿದ್ದಾರೆ.

ಬಡತನದ ಕಷ್ಟ ಎಂಥದ್ದು ಎನ್ನುವುದು ಅರಿತಿರುವೆ. ಇರುವುದನ್ನು ಹಂಚಿಕೊಂಡು ತಿಂದಾಗಲೇ ತೃಪ್ತಿ. ನನ್ನ ಕುಟುಂಬದ ಸಲಹೆ ಮೇರೆಗೆ ಈ ಕಾರ್ಯಕ್ಕೆ ಮುಂದಾಗಿದ್ದೇನೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೇ ಪ್ರೇರಣೆ. ನಿಜವಾದ ಅರ್ಹರು ಪ್ರಯೋಜನ ಪಡೆದುಕೊಳ್ಳಬೇಕು.
ಎ.ಎಸ್‌.ಪಾಟೀಲ ನಡಹಳ್ಳಿ,
ಶಾಸಕರು

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.