ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ದುರಂತ ಅಂತ್ಯ
Team Udayavani, Oct 27, 2022, 1:18 PM IST
ಮುದ್ದೇಬಿಹಾಳ: ವಿಷದ ಹಾವು ಕಚ್ಚಿ ಚಿಕಿತ್ಸೆ ಫಲಿಸದೆ ನಾಲ್ಕು ತಿಂಗಳ ಗರ್ಭಿಣಿ ಮೃತಪಟ್ಟಿರುವ ದಾರುಣ ಘಟನೆ ಕುಂಟೋಜಿ ಗ್ರಾಮದಲ್ಲಿ ನಡೆದಿದೆ.
ಎರಡು ಮಕ್ಕಳ ತಾಯಿ ನಿರ್ಮಲಾ ಯಲ್ಲಪ್ಪ ಚಲವಾದಿ (25) ಅಕ್ಟೋಬರ್ 25 ರಂದು ನಸುಕಿನ ಜಾವ 3 ಗಂಟೆಗೆ ಮನೆಯಲ್ಲಿ ಮಲಗಿದ ಸಮಯದಲ್ಲಿ ಹಾವು ಕಚ್ಚಿತ್ತು. ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪರ್ತೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತಳಿಗೆ ಪತಿ, 1 ಗಂಡು 1ಹೆಣ್ಣು ಮಕ್ಕಳಿದ್ದಾರೆ. ಮೃತರ ಮನೆಗೆ ಕಂದಾಯ ನಿರೀಕ್ಷಕ ಮತ್ತು ತಲಾಟಿ ಭೇಟಿ ನೀಡಿ ವರದಿ ಸಂಗ್ರಹಿಸಿದ್ದು ಮಾಹಿತಿಯನ್ನು ಮೇಲಾಧಿಕಾರಿಗೆ ಕಳಿಸುವುದಾಗಿ ತಿಳಿಸಿದ್ದಾರೆ.