ಕೊಣ್ಣೂರು ಗ್ರಾಮಸ್ಥರಿಗೆ ಉಚಿತ ಮಾಸ್ಕ್ ವಿತರಣೆ

ಕೊಣ್ಣೂರು ಬಿಜೆಪಿ ಮುಖಂಡ ಶಿವನಗೌಡ ತಾಳಿಕೋಟಿ ಸಮಾಜ ಸೇವೆ ಮನೆಯಲ್ಲೇ ಸಾವಿರಾರು ಮಾಸ್ಕ್ ತಯಾರಿ

Team Udayavani, May 2, 2020, 12:10 PM IST

2-May-06

ಮುದ್ದೇಬಿಹಾಳ: ಶಿವನಗೌಡ ಅವರು ಗ್ರಾಮಸ್ಥರಿಗೆ ಮಾಸ್ಕ್ ವಿತರಿಸಿ ಜಾಗೃತಿ ಮೂಡಿಸಿದರು

ಮುದ್ದೇಬಿಹಾಳ: ಕೊಣ್ಣೂರು ಗ್ರಾಮದ ಬಿಜೆಪಿ ಮುಖಂಡ ಶಿವನಗೌಡ ತಾಳಿಕೋಟಿ ಸ್ವತಃ ತಾವೇ ಹೊಸ ಬಟ್ಟೆಯಿಂದ ಮಾಸ್ಕ್ ಹೊಲಿದು ಗ್ರಾಮೀಣ ಜನತೆಗೆ ಉಚಿತವಾಗಿ ವಿತರಿಸುವ ಜತೆಗೆ ಕೋವಿಡ್ ಸೋಂಕಿನಿಂದ ರಕ್ಷಿಸಿಕೊಳ್ಳಲು ಮತ್ತು ಸಾಮಾಜಿಕ ಅಂತರದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಶಿವನಗೌಡ ತಾಳಿಕೋಟಿ ಅವರು ಈವರೆಗೆ ಸುಮಾರು ಒಂದು ಸಾವಿರಕ್ಕೂ ಅಧಿಕ ಮಾಸ್ಕ್ ತಯಾರಿಸಿ ಗ್ರಾಮೀಣ ಭಾಗದ ವೃದ್ದರು, ಮಹಿಳೆಯರು, ಮಕ್ಕಳಿಗೆ ಹಂಚಿಕೆ ಮಾಡಿದ್ದಾರೆ.

ಮುದ್ದೇಬಿಹಾಳ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಅವರು ಕೋಟ್ಯಂತರ ರೂ. ಖರ್ಚು ಮಾಡಿ ಕಡುಬಡವರಿಗೆ ಆಹಾರ ಸಾಮಗ್ರಿ ಕಿಟ್‌ ಹಂಚಿ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಿದ್ದಾರೆ. ಕೋವಿಡ್ ವಾರಿಯರ್ಸ್‌ಗಳಾಗಿರುವ ಆಶಾ, ಆರೋಗ್ಯ ಕಾರ್ಯಕರ್ತರು, ವೈದ್ಯರು, ಪೊಲೀಸರಿಗೆ ಗುಣಮಟ್ಟದ ಎನ್‌ -95 ಮಾಸ್ಕ್ ವಿತರಿಸುತ್ತಿದ್ದಾರೆ. ಅವರ ಅಭಿಮಾನಿಯಾದ ನಾನು ಅವರಿಂದ ಪ್ರೇರಣೆಗೊಂಡು ಮನೆಯಲ್ಲೇ 3 ಪದರುಗಳ ಮಾಸ್ಕ್ ತಯಾರಿಸಿ ಗ್ರಾಮೀಣ ಜನರಿಗೆ ವಿತರಿಸಿ ಸಮಾಜ ಸೇವೆ ಮಾಡುತ್ತಿರುವುದಾಗಿ ಶಿವನಗೌಡ ತಾಳಿಕೋಟಿ ಹೇಳುತ್ತಾರೆ.

ಮಾಸ್ಕ್ ನೀಡುವುದು ಮಾತ್ರವಲ್ಲದೆ ಅದರ ಬಳಕೆ, ಕೋವಿಡ್ ತಡೆಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ, ಸಾಮಾಜಿಕ ಅಂತರದ ಮಹತ್ವ ತಿಳಿಸುತ್ತಿರುವ ಶಿವನಗೌಡರ ಕಾರ್ಯ ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದು ಕೊಣ್ಣೂರು ಗ್ರಾಮದ ಸಿದ್ದನಗೌಡ ಗೌಡರ, ಸಂಗನಗೌಡ ಕವಡಿಮಟ್ಟಿ, ಚಿದಾನಂದ ಯಾಳವಾರ, ಬಸಪ್ಪ ಗಣಿ, ರಾಮಣ್ಣ ಗಣಿ, ಶಿವಶರಣ ಹಡಪದ, ವಾಲ್ಮೀಕಿ ಸಂಘದ ಯುವಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೊಲಿಗೆ ಕೆಲಸದಲ್ಲಿರುವ ಲಕ್ಷಾಂತರ ಅಸಂಘಟಿತ ಕಾರ್ಮಿಕರು ಕೊರೊನಾ ಲಾಕಡೌನ್‌ನಿಂದ ಸಂಕಷ್ಟದಲ್ಲಿದ್ದಾರೆ. ಇವರಿಗೆ ಸರ್ಕಾರ ಪ್ಯಾಕೇಜ್‌ ಘೋಷಿಸಬೇಕು. ಈ ಪ್ಯಾಕೇಜ್‌ ಪಡೆದುಕೊಳ್ಳಬೇಕಾದರೆ ಪ್ರತಿಯೊಬ್ಬ ಕಾರ್ಮಿಕ 150-200 ಮಾಸ್ಕ್ ತಯಾರಿಸಿ ತಾಲೂಕು ಆಡಳಿತಕ್ಕೆ ಒಪ್ಪಿಸಬೇಕು. ಇಂಥವುಗಳನ್ನು ಆಶಾ ಕಾರ್ಯಕರ್ತೆಯರ ಮೂಲಕ ಪ್ರತಿ ಮನೆಗೆ
ಮುಟ್ಟಿಸಬಹುದು. ಸರ್ಕಾರ ಈ ರೀತಿ ಮಾಡಲು ಮುಂದಾದರೆ ಒಂದೇ ವಾರದಲ್ಲಿ ರಾಜ್ಯದ ಪ್ರತಿಯೊಬ್ಬರಿಗೂ ಮಾಸ್ಕ್ಗಳನ್ನು ಒದಗಿಸಿ ಸೋಂಕಿನಿಂದ ಕಾಪಾಡಬಹುದು.
ಶಿವನಗೌಡ ತಾಳಿಕೋಟೆ,
ಬಿಜೆಪಿ ಧುರೀಣ ಕೊಣ್ಣೂರ

ಡಿ.ಬಿ.ವಡವಡಗಿ

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.