ಮುಫತ್‌ ಗೈರಾಣ ಪ್ರದೇಶ ಅರಣ್ಯ ಇಲಾಖೆಗೆ ವಾಪಸ್‌

ಖಾಸಗಿ ವ್ಯಕ್ತಿಗಳ ಪಾಲಾಗಿದ್ದ ಕುಂಟೋಜಿ ಗ್ರಾಮ ವ್ಯಾಪ್ತಿಯ 34 ಎಕರೆ

Team Udayavani, May 31, 2020, 2:36 PM IST

31-May-24

ಮುದ್ದೇಬಿಹಾಳ : ಕುಂಟೋಜಿ ಗ್ರಾಮವ್ಯಾಪ್ತಿಯ 34 ಎಕರೆ ಮುಫತ್‌ ಗೈರಾಣ ಪ್ರದೇಶದ ಕುರಿತು ಉಪ ವಲಯ ಅರಣ್ಯಾಧಿಕಾರಿ ಜತೆಗೆ ಹಸಿರುಬಳಗದ ಸದಸ್ಯರು ಚರ್ಚಿಸಿದರು

ಮುದ್ದೇಬಿಹಾಳ: ಹಲವು ವರ್ಷಗಳಿಂದ ಖಾಸಗಿ ವ್ಯಕ್ತಿಗಳ ಪಾಲಾಗಿದ್ದ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮ ವ್ಯಾಪ್ತಿಯ 34 ಎಕರೆ ಮುಫತ್‌ ಗೈರಾಣ ಪ್ರದೇಶವನ್ನು ತಹಶೀಲ್ದಾರ್‌ ನೆರವಿನಿಂದ ಅರಣ್ಯ ಇಲಾಖೆ ವಾಪಸ್‌ ತನ್ನ ವಶಕ್ಕೆ ಪಡೆದುಕೊಂಡು, ಅಲ್ಲಿ 3800 ಗಿಡಗಳನ್ನು ಬೆಳೆಸಿ ಮಾದರಿ ನೆಡುತೋಪು ನಿರ್ಮಿಸಲು ಮುಂದಾಗಿರುವ ಪ್ರಸಂಗ ಬೆಳಕಿಗೆ ಬಂದಿದೆ.

ಶನಿವಾರ ಇಲ್ಲಿನ ಹಸಿರು ತೋರಣ ಗೆಳೆಯರ ಬಳಗದ ಪದಾಧಿಕಾರಿಗಳ ನಿಯೋಗ ಉಪ ವಲಯ ಅರಣ್ಯಾಧಿಕಾರಿ ಸುಭಾಷಚಂದ್ರ ಅವರ ಜತೆ ಆ ಪ್ರದೇಶಕ್ಕೆ ಭೇಟಿ ನೀಡಿ, ಎಲ್ಲೆಲ್ಲಿ ಗಿಡ ಬೆಳೆಸಬೇಕು ಎನ್ನುವ ಕುರಿತು ಚರ್ಚಿಸಿದ ವೇಳೆ ಈ ಪ್ರದೇಶ ವಶಪಡಿಸಿಕೊಂಡ ಯಶೋಗಾಥೆ ಹೇಳಿದರು.

ಈ ಪ್ರದೇಶವು ಕುಂಟೋಜಿಗೆ ಹೊಂದಿಕೊಂಡಿರುವ ಗುಡಿಹಾಳ ಗ್ರಾಮದ ಸೀಮೆಗೆ ಹತ್ತಿಕೊಂಡಿತ್ತು. ಇದರಲ್ಲಿ ಕೆಲವೊಂದಿಷ್ಟು ಎಕರೆ ಜಮೀನು ಖಾಸಗಿಯವರಿಂದ ಒತ್ತುವರಿ ಆಗಿತ್ತು. ಈ ಅತಿಕ್ರಮ ಗಮನಿಸಿದ್ದ ಕುಂಟೋಜಿ ಗ್ರಾಮ ಪಂಚಾಯಿತಿ ಪಿಡಿಒ ಪಿ.ಎಸ್‌ .ನಾಯ್ಕೋಡಿ ಅವರು ತಹಶೀಲ್ದಾರ್‌ ಹಾಗೂ ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಖಾಸಗಿಯವರ ಅಡ್ಡಿ ಆತಂಕದ ನಡುವೆಯೂ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿ ಪ್ರಸ್ತುತ ಅಂದಾಜು 4 ಕೋಟಿ ರೂ ಮಾರುಕಟ್ಟೆ ಬೆಲೆ ಬಾಳುವ ಈ ಪ್ರದೇಶವನ್ನು ವಶಪಡಿಸಿಕೊಂಡಿದ್ದರು. ಅರಣ್ಯ ಇಲಾಖೆಯವರು 25 ದಿನಗಳವರೆಗೆ ಶ್ರಮಿಸಿ ಈ ಪ್ರದೇಶದಲ್ಲಿ ಬೆಳೆದಿದ್ದ ಮುಳ್ಳುಕಂಟಿಗಳನ್ನು ತೆಗೆದು ಸ್ವಚ್ಛಗೊಳಿಸಿ ಹಳ್ಳಕೊಳ್ಳ ಸಮತಟ್ಟುಗೊಳಿಸಿದ್ದರು. ಅಲ್ಲಿ ಈಗ 3800 ಗಿಡಗಳನ್ನು ನೆಟ್ಟು ನೆಡು ತೋಪು ಮಾಡುವ ವಿಚಾರ ಇರುವುದನ್ನು ಸುಭಾಷಚಂದ್ರ ಅವರು ಚರ್ಚೆಯ ವೇಳೆ ಬಹಿರಂಗಪಡಿಸಿದರು. ಈ ಪ್ರದೇಶ ವಶಪಡಿಸಿಕೊಂಡು ಅಲ್ಲಿ ಅರಣ್ಯ ಬೆಳೆಸಲು ಸಹಕರಿಸಿದ ವಿಜಯಪುರ ಜಿಲ್ಲಾ ಡಿಸಿಎಫ್‌ ಸರೀನಾ ಸಿಕ್ಕಲಗಾರ, ಎಸಿಎಫ್‌ ಬಿ.ಪಿ.ಚವ್ಹಾಣ, ವಲಯ ಅರಣ್ಯಾಧಿಕಾರಿ ಡಿ.ಐ.ಬಿರಾದಾರ ಮತ್ತು ತಹಶೀಲ್ದಾರ್‌ ಜಿ.ಎಸ್‌.ಮಳಗಿ ಅವರ ಸಹಕಾರವನ್ನು ಇದೇ ವೇಳೆ ಸ್ಮರಿಸಲಾಯಿತು.

ಬಳಗದ ಅಧ್ಯಕ್ಷ ಅಶೋಕ ರೇವಡಿ, ಪದಾಧಿಕಾರಿಗಳಾದ ಎಲ್‌. ಎಂ.ಚಲವಾದಿ, ರಾಜಶೇಖರ ಕಲ್ಯಾಣಮಠ, ಮಹಾಬಲೇಶ್ವರ ಗಡೇದ, ನಾಗಭೂಷಣ ನಾವದಗಿ ವಕೀಲರು, ಜೇಸಿ ಸಂಸ್ಥೆ ಅಧ್ಯಕ್ಷ ರವಿ ಗೂಳಿ, ಬಿ.ಎಸ್‌.ಮೇಟಿ, ವರ್ತಕರ ಸಂಘದ ಅಧ್ಯಕ್ಷ ವಾಸುದೇವ ಶಾಸ್ತ್ರಿ, ಡಾ| ವೀರೇಶ ಇಟಗಿ, ಅಮರೇಶ ಗೂಳಿ, ಎಂ.ಎಸ್‌.ಬಾಗೇವಾಡಿ, ಸುರೇಶ ಕಲಾಲ, ರವಿ ತಡಸದ, ಬಿ.ಎಚ್‌.ಬಳಬಟ್ಟಿ, ಕಿರಣ ಕಡಿ, ಬಿಆರ್‌ಸಿ ಸಂಗಮೇಶ ನವಲಿ, ಅರಣ್ಯ ಇಲಾಖೆಯ ಯಲ್ಲಪ್ಪ ಹಿರೇಕುರುಬರ, ಮಲ್ಲಪ್ಪ ಇಂಗಳಗೇರಿ ಮುಂತಾದವರು ಇದ್ದರು.

ಪ್ರತಿ ಹಳ್ಳಿಯಲ್ಲಿ ಮುಫತ್‌ ಗೈರಾಣು ಪ್ರದೇಶ ಇದೆ. ಸರ್ಕಾರದ ವಿವಿಧ ಕೆಲಸಗಳಿಗೆ ಇದನ್ನು ಮೀಸಲಿಡಲಾಗಿದೆ. ಈ ಪ್ರದೇಶವನ್ನು ಮರಳಿ ವಶಕ್ಕೆ ಪಡೆದು ಅಲ್ಲಿ ಅರಣ್ಯ ಬೆಳೆಸುವ ಕೆಲಸ ನಡೆಯಬೇಕು. ತಹಸೀಲ್ದಾರ್‌, ಅರಣ್ಯಾಧಿ ಕಾರಿಗಳು ಜಂಟಿಯಾಗಿ ಈ ಅಭಿಯಾನ ಹಮ್ಮಿಕೊಂಡಲ್ಲಿ ಪರಿಸರ ಪ್ರೇಮಿಗಳು ಸಹಕಾರ ನೀಡುತ್ತಾರೆ.
ಅಶೋಕ ರೇವಡಿ,
ಅಧ್ಯಕ್ಷ, ಹಸಿರು ತೋರಣ ಗೆಳೆಯರ ಬಳಗ

ಈಗ ವಶಪಡಿಸಿಕೊಂಡಿರುವ ಪ್ರದೇಶದಲ್ಲಿ ಈಗಾಗಲೇ ತಗ್ಗು ತೆಗೆಯಲಾಗಿದ್ದು, ಮಳೆ ಪ್ರಾರಂಭಗೊಂಡ ಕೂಡಲೇ 3800 ಗಿಡ ನೆಟ್ಟು ನೆಡುತೋಪು ನಿರ್ಮಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇದೊಂದು ಮಾದರಿ ಅರಣ್ಯ ಪ್ರದೇಶವಾಗಲಿದೆ.
ಸುಭಾಷಚಂದ್ರ ಬಿ.ಕೆ.,
ಉಪ ವಲಯ ಅರಣ್ಯಾಧಿಕಾರಿ

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.