ಮನೆ-ಮನೆಗೆ ಪಡಿತರ ಧಾನ್ಯ ತಲುಪಿಸಿ

ಪಡಿತರ ವಿತರಕರ ಸಭೆಯಲ್ಲಿ ಶಾಸಕ ನಡಹಳ್ಳಿ ಸೂಚನೆಅಗತ್ಯ ಸ್ವಯಂ ಸೇವಕರನ್ನು ಒದಗಿಸುವೆ

Team Udayavani, May 3, 2020, 2:37 PM IST

2-May-23

ಮುದ್ದೇಬಿಹಾಳ: ದಾಸೋಹ ನಿಲಯದಲ್ಲಿ ಶಾಸಕ ನಡಹಳ್ಳಿ ಪಡಿತರ ವಿತರಕರ ಸಭೆ ನಡೆಸಿದರು

ಮುದ್ದೇಬಿಹಾಳ: ಕೋವಿಡ್ ಹಾವಳಿ ಮುಗಿಯುವವರೆಗೆ ಎಲ್ಲ ಪಡಿತರ ವಿತರಕರು ಪಡಿತರ ಫಲಾನುಭವಿಗಳ ಮನೆಮೆನೆಗೆ ಪಡಿತರ ಸಾಮಗ್ರಿ ಒಯ್ದು ಕೊಡುವ ಯೋಜನೆ ರೂಪಿಸಿ ಜಾರಿಗೊಳಿಸಬೇಕು. ಇದಕ್ಕೆ ಅಗತ್ಯಬೀಳುವ ಸ್ವಯಂ ಸೇವಕರನ್ನು ತಾವು ಒದಗಿಸುವುದಾಗಿ ಶಾಸಕ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಹೇಳಿದರು.

ಇಲ್ಲಿನ ದಾಸೋಹ ನಿಲಯ ಹೊರಾಂಗಣದಲ್ಲಿ ಶುಕ್ರವಾರ ನಡೆದ ಮುದ್ದೇಬಿಹಾಳ, ತಾಳಿಕೋಟೆ ತಾಲೂಕುಗಳ ಎಲ್ಲ ಪಡಿತರ ವಿತರಕರ ಸಭೆಯಲ್ಲಿ ಅವರು ಮಾತನಾಡಿದರು. ಈಗಿನ ವ್ಯವಸ್ಥೆಯಲ್ಲಿ ಪಡಿತರ ಅಂಗಡಿ ಮುಂದೆ ಶಾಮಿಯಾನ, ಸ್ಯಾನಿಟೈಸರ್‌, ಕುಡಿವ ನೀರು, ಸಾಮಾಜಿಕ ಅಂತರಕ್ಕೆ ವ್ಯವಸ್ಥೆ ಮಾಡಲೇಬೇಕು. ಮನೆಮೆನೆಗೆ ಪಡಿತರ ತಲುಪಿಸುವುದರಿಂದ ಖರ್ಚು ಉಳಿತಾಯವಾಗುವುದರ ಜೊತೆಗೆ ನೀವೂ ಸಹಿತ ಕೊರೊನಾ ಸೈನಿಕರಾಗಿ ಜನರ ಸೇವೆ ಮಾಡಲು ಇದೊಂದು ಉತ್ತಮ ಅವಕಾಶ ಎನ್ನುವುದನ್ನು ಅರಿತುಕೊಂಡು ಪಾಲಿಸಲು ಮುಂದಾಗಬೇಕು ಎಂದರು.

ನಕಾರಾತ್ಮಕ ಚಿಂತನೆಗಳನ್ನು ತೆಗೆದುಹಾಕಿ. ಪಡಿತರ ವಿತರಣೆಯಲ್ಲಿ ರಾಜಕೀಯ ಬೆರೆಸಬೇಡಿ. ಕೊರೊನಾ ಸಂಕಷ್ಟ ಕಾಲದಲ್ಲಿ ಜನರ ಸೇವೆ ದೊರಕಿದ ಸದವಕಾಶ ಎಂದು ತಿಳಿದುಕೊಳ್ಳಿ. ಯಾರಿಂದಲೂ ಹಣ ಪಡೆದುಕೊಳ್ಳಬೇಡಿ. ಇಷ್ಟುದಿನ ಪಡಿತರ ಅಂಗಡಿಕಾರನಾಗಿದ್ದೆ, ಇನ್ನು ಮುಂದೆ ಕೊರೊನಾ ಸೈನಿಕನಾಗಿ ಬಡವರ ಸೇವೆ ಮಾಡುತ್ತೇನೆ ಎಂದು ಪ್ರಮಾಣ ಮಾಡಿ. ಈ ಹೊಸ ವ್ಯವಸ್ಥೆಗೆ ಆಗೋದಿಲ್ಲ ಎನ್ನುವ ಮಾತು ಯಾರಿಂದಲೂ ಬರಬಾರದು. ಬಯೋಮೆಟ್ರಿಕ್‌ಗಿಂತ ಒಟಿಪಿಗೆ ಆದ್ಯತೆ ಕೊಡಿ. ಅತೀ ಅಗತ್ಯವಿದ್ದಲ್ಲಿ ಮಾತ್ರ ಸ್ಯಾನಿಟೈಸರ್‌ ಬಳಕೆ ಮಾಡಿ ಥಂಬ್‌ ಪಡೆದುಕೊಳ್ಳಿ. ಸರ್ಕಾರ ನಿಗದಿಪಡಿಸಿದ ಪ್ರಮಾಣದಷ್ಟೇ ಧಾನ್ಯ ಹಂಚಿಕೆ ಮಾಡಿ. ಆಹಾರಧಾನ್ಯ ಸಂಗ್ರಹಿಸುವ ಗೋದಾಮುಗಳ ಮ್ಯಾನೇಜರುಗಳು ಸ್ಥಳೀಯವಾಗಿ ವಾಸವಿರಬೇಕು ಎಂದು ಕಿವಿಮಾತು ಹೇಳಿದರು.

ಮುದ್ದೇಬಿಹಾಳ ತಹಶೀಲ್ದಾರ್‌ ಜಿ.ಎಸ್‌.ಮಳಗಿ, ತಾಳಿಕೋಟೆ ತಹಶೀಲ್ದಾರ್‌ ಅನಿಲಕುಮಾರ ಢವಳಗಿ ಮಾತನಾಡಿ, ಪಡಿತರ ಹಂಚಿಕೆ ನ್ಯಾಯಸಮ್ಮತವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಟಾಸ್ಕ್  ಫೋರ್ಸ್‌ ರಚಿಸಲಾಗುತ್ತಿದೆ. ಈ ತಂಡದ ಸದಸ್ಯರು ದಿಢೀರ್‌ ಭೇಟಿ ನೀಡಿ ವರದಿ ಸಂಗ್ರಹಿಸುತ್ತಾರೆ. ತಪ್ಪಿತಸ್ಥರ ಲೈಸನ್ಸ್‌ ರದ್ದುಪಡಿಸಲು ಜಿಲ್ಲಾ ಧಿಕಾರಿಗೆ
ಶಿಫಾರಸು ಮಾಡುತ್ತಾರೆ. ಕೊರೊನಾ ಸಂದರ್ಭ ಮಾಡುವ ತಪ್ಪುಗಳಿಗೆ ಕ್ಷಮೆ ಇರಲ್ಲ ಎಂದು ತಿಳಿಸಿದರು. ಈ ವೇಳೆ ಕೆಲ ವಿತರಕರು ಮಾತನಾಡಿ, ಹೊಸ ಯೋಜನೆ ಅಳವಡಿಕೆ ಕಷ್ಟಕರವಾಗಬಹುದು ಎಂದರೆ ಮತ್ತೇ ಹಲವರು ಒದೊಂದು ಸೇವೆಗೆ ಸದವಕಾಶವಾಗಿದ್ದು ಮನೆಮೆನೆಗೆ ಪಡಿತರ ತಲುಪಿಸಲು ಪ್ರಯತ್ನ ನಡೆಸುವ ಭರವಸೆ ನೀಡಿದರು.

ಸಿಪಿಐ ಆನಂದ ವಾಗಮೋಡೆ, ಪುರಸಭೆ ಮುಖ್ಯಾಧಿಕಾರಿ ಗೋಪಾಲ ಕಾಸೆ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ, ತಾಲೂಕು ಬಿಜೆಪಿ ಅಧ್ಯಕ್ಷ ಡಾ| ಪರಶುರಾಮ ಪವಾರ, ಬಿಜೆಪಿ ಧುರೀಣರಾದ ಮಲಕೇಂದ್ರಗೌಡ ಪಾಟೀಲ, ಮನೋಹರ ತುಪ್ಪದ, ತಹಶೀಲ್ದಾರ್‌ ಕಚೇರಿ ಆಹಾರ ವಿಭಾಗದ ಶಿರಸ್ತೇದಾರ ಎ.ಬಿ.ಹಿರೇಮಠ, ಆಹಾರ ನಿರೀಕ್ಷಕರು, ಗೋದಾಮು ಮ್ಯಾನೇಜರುಗಳು, 250ಕ್ಕೂ ಹೆಚ್ಚು ಪಡಿತರ ಅಂಗಡಿಕಾರರು ಇದ್ದರು.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.