ಮುದ್ದೇಬಿಹಾಳ: ಖೈದಿ ಸುಳಿವು ನೀಡಿದರೆ ಲಕ್ಷ ರೂ. ಬಹುಮಾನ !
Team Udayavani, Jan 27, 2023, 11:38 AM IST
ಮುದ್ದೇಬಿಹಾಳ: ಜೀವಾವಧಿ ಶಿಕ್ಷೆಗೊಳಗಾಗಿದ್ದ ತಾಲೂಕಿನ ಮುದ್ನಾಳದ ರಮೇಶ ಯಮನಪ್ಪ ಪರಪ್ಪಗೋಳ ಎಂಬವನು ಪರೋಲ್ ಮೇಲೆ ಹೊರ ಬಂದು ಮರಳಿ ಕೇಂದ್ರ ಕಾರಾಗೃಹಕ್ಕೆ ಹೋಗಿ ಶರಣಾಗದೆ ತಲೆಮರೆಸಿಕೊಂಡಿದ್ದು, ಇವನ ಸುಳಿವು ನೀಡಿದವರಿಗೆ ಜಿಲ್ಲಾ ಎಸ್ಪಿ ಅವರು ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.
ಎಸ್.ಸಿ.ನಂಬರ್ 81/2008ರ ಪ್ರಕರಣವೊಂದರಲ್ಲಿ ವಿಜಯಪುರದ ಒಂದನೇ ತ್ವರಿತ ನ್ಯಾಯಾಲಯದ ನ್ಯಾಯಾಧೀಶರು ಈತನಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದರು.
ವಿಜಯಪುರದ ಕೇಂದ್ರ ಕಾರಾಗೃಹದಲ್ಲಿ ಸಜಾಬಂಧಿ ಅಪರಾಧಿಯಾಗಿದ್ದ. 2017ರ ಆಗಸ್ಟ್ 16 ರಂದು ಪರೋಲ್ ರಜೆಯ ಮೇಲೆ ತನ್ನ ಸ್ವಂತ ಊರು ಮುದ್ನಾಳ ಗ್ರಾಮಕ್ಕೆ ಬಂದಿದ್ದು, ಸೆಪ್ಟೆಂಬರ್ 16 ರಂದು ಪರೋಲ್ ರಜೆ ಅವಧಿ ಮುಗಿದು ಕೇಂದ್ರ ಕಾರಾಗೃಹಕ್ಕೆ ಹಾಜರಾಗಿ ಶರಣಾಗಬೇಕಿತ್ತು. ಆದರೆ ಆತ ಹಾಗೆ ಮಾಡದೆ ಅಂದಿನಿಂದಲೇ ತಲೆಮರೆಸಿಕೊಂಡಿದ್ದಾನೆ.
ಭಾವಚಿತ್ರದಲ್ಲಿರುವ ಅಪರಾಧಿಯ ಸುಳಿವು ನೀಡಿದರೆ ಅವರಿಗೆ ಲಕ್ಷ ರೂ. ನಗದು ಬಹುಮಾನ ನೀಡಲಾಗುತ್ತದೆ. ಈತನ ಸುಳಿವು ಪತ್ತೆಯಾದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು, ಇಲ್ಲವೇ ಪೊಲೀಸ್ ಕಂಟ್ರೋಲ್ ರೂಂ ಸಂಪರ್ಕಿಸಬೇಕು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಮಾಹಿತಿ ನೀಡಲು ಜಿಲ್ಲಾ ಎಸ್ಪಿ ಮೋ: 9480804201, ಪೊಲೀಸ್ ಕಂಟ್ರೋಲ್ ರೂಂ: ದೂ: 0852- 250948, ಬಸವನ ಬಾಗೇವಾಡಿ ಉಪ ವಿಭಾಗ ಡಿವೈಎಸ್ಪಿ ಮೋ: 9480804221, ಮುದ್ದೇಬಿಹಾಳ ಸಿಪಿಐ ಮೋ:9480804221, ದೂರವಾಣಿ: 08356-220332 ಸಂಪರ್ಕಿಸಲು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ