ಮುದ್ದೇಬಿಹಾಳ: ಸಿಡಿಲು ಬಡಿದು ಮಹಿಳೆ ಮೃತ್ಯು
Team Udayavani, May 9, 2023, 8:57 PM IST
ಮುದ್ದೇಬಿಹಾಳ: ಸಿಡಿಲು ಬಡಿದು 65ರ ವಯೋಮಾನದ ಮಹಿಳೆ ನೀಲಗಂಗವ್ವ ಬಸಪ್ಪಗೌಡ ಬಿರಾದಾರ ಮಂಗಳವಾರ ಸಂಜೆ ಮೃತಪಟ್ಟ ಘಟನೆ ಮುದ್ದೇಬಿಹಾಳ ತಾಲೂಕು ಕೃಷ್ಣಾ ನದಿ ತೀರದ ನಾಗರಾಳ ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ಸಂಜೆ ಗುಡುಗು, ಸಿಡಿಲು ಸಹಿತ ಮಳೆ ಸುರಿಯುವ ಲಕ್ಷಣ ಶುರುವಾಗಿದ್ದರಿಂದ ಮನೆಗೆ ತೆರಳುವ ವೇಳೆ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಕಂದಾಯ ನಿರೀಕ್ಷಕ ಮಹಾಂತೇಶ ಮಾಗಿ, ಪಿಎಸೈ ಆರೀಫ ಮುಷಾಪುರಿ ಭೇಟಿ ನೀಡಿ ಘಟನೆಯ ವಿವರ ಪಡೆದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದರು.
ಘಟನೆ ಕುರಿತು ಮೇಲಧಿಕಾರಿಗಳಿಗೆ ಸ್ಥಳೀಯ ಕಂದಾಯ ಅಧಿಕಾರಿಗಳು ವರದಿ ಸಲ್ಲಿಸಿದ್ದು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.