ಕ್ವಾರಂಟೈನ್ ನಲ್ಲಿದ್ದವರಿಗೆ ಖಡಕ್‌ ರೊಟ್ಟಿ ಊಟ

ಶಾಸಕರ ಪತ್ನಿ ಮಹಾದೇವಿಯವರಿಂದ ವಿನೂತನ ಕಾರ್ಯ  ಕ್ವಾರಂಟೈನ್‌ ಕೇಂದ್ರಗಳಿಗೆ ವಿತರಿಸಲು 1.5 ಲಕ್ಷ ರೊಟ್ಟಿ

Team Udayavani, May 20, 2020, 12:10 PM IST

20-April-05

ಮುದ್ದೇಬಿಹಾಳ: ಸಿದ್ಧಗೊಂಡ ರೊಟ್ಟಿಗಳನ್ನು ಪರಿಶೀಲಿಸಿದ ಮಹಾದೇವಿ ಪಾಟೀಲ.(ನಡಹಳ್ಳಿ)

ಮುದ್ದೇಬಿಹಾಳ: ತಾಲೂಕಿನ ಒಟ್ಟು 30 ಸಾಂಸ್ಥಿಕ ಕ್ವಾರೆಂಟೈನ್‌ ಕೇಂದ್ರಗಳಲ್ಲಿ ಬಿಡಾರ ಹೂಡಿರುವ 2500ಕ್ಕೂ ಹೆಚ್ಚು ಮಹಾರಾಷ್ಟ್ರ, ತಮಿಳುನಾಡು, ಗುಜರಾತ್‌ ರಾಜ್ಯಗಳಿಂದ ಮರಳಿ ಬಂದಿರುವ ವಲಸೆ ಕೂಲಿಕಾರ್ಮಿಕರ ಹಸಿವು ತಣಿಸಲು 1.50 ಲಕ್ಷ ಜೋಳದ ರೊಟ್ಟಿಗಳು ಬಸರಕೋಡದ ಶ್ರೀ ಪವಾಡಬಸವೇಶ್ವರ ದೇವಸ್ಥಾನದ ಅಡುಗೆಮನೆಯಲ್ಲಿ ಭರದಿಂದ ಸಿದ್ದಗೊಳ್ಳುತ್ತಿವೆ.

ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಮತ್ತು ಅವರ ಪತ್ನಿ ಮಹಾದೇವಿ ಪಾಟೀಲ ಅವರ ಪರಿಕಲ್ಪನೆಯಲ್ಲಿ ಮೂಡಿಬಂದಿರುವ ಈ ಯೋಜನೆ ಜಾರಿಗೊಳಿಸಲು ನಿತ್ಯ 30 ಮಹಿಳೆಯರು ರೊಟ್ಟಿ ತಟ್ಟುವ ಕಾರ್ಯದಲ್ಲಿ ತೊಡಗಿದ್ದಾರೆ. ಮಹಾದೇವಿ ಅವರು ಮೇಲಿಂದ ಮೇಲೆ ಸ್ಥಳಕ್ಕೆ ಭೇಟಿ ನೀಡಿ ರೊಟ್ಟಿಯ ಗುಣಮಟ್ಟದ ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆ ಕೊಡುತ್ತಿದ್ದಾರೆ. 2-3 ದಿನಗಳಲ್ಲಿ ರೊಟ್ಟಿಗಳು ಸಿದ್ಧಗೊಂಡು ಎಲ್ಲ ಕೇಂದ್ರಗಳಿಗೆ ತಲುಪಿಸಲು ಶಾಸಕರು ತಂಡವೊಂದನ್ನು ಈಗಾಗಲೇ ರಚಿಸಿದ್ದು ಅದು ಕ್ರಿಯಾಶೀಲವಾಗಿ ಕೆಲಸ ಮಾಡತೊಡಗಿದೆ.

ರೊಟ್ಟಿಗೆ ಮಹತ್ವ ಏಕೆ?: ದಕ್ಷಿಣ ಕರ್ನಾಟಕದಲ್ಲಿ ರಾಗಿಗೆ ಎಷ್ಟು ಮಹತ್ವ ಇದೆಯೋ ಅಷ್ಟು ಮಹತ್ವ ಉತ್ತರ ಕರ್ನಾಟಕದಲ್ಲಿ ಜೋಳಕ್ಕೆ ಇದೆ. ಇದರ ಹಿಟ್ಟಿನಿಂದ ತಯಾರಿಸಿದ ರೊಟ್ಟಿಗಳನ್ನು ಇಲ್ಲಿನ ಜನ ನಿತ್ಯವೂ ಸೇವಿಸುತ್ತಾರೆ. ಬೇರೆ ರಾಜ್ಯಗಳಿಗೆ ದುಡಿಯಲು ವಲಸೆ ಹೋಗುವ ಇಲ್ಲಿನ ಕೂಲಿ ಕಾರ್ಮಿಕರು ತಮ್ಮ ಜೊತೆ 4 ತಿಂಗಳಿಗೆ ಆಗುವಷ್ಟು ಜೋಳ, ಜೋಳದ ಹಿಟ್ಟನ್ನೂ ಜೊತೆಗೊಯ್ಯುವುದು ಇದರ ಮಹತ್ವ ಸಾರಿ ಹೇಳುತ್ತವೆ.

ಕ್ವಾರೆಂಟೈನ್‌ ಕೇಂದ್ರಗಳಲ್ಲಿರುವ ಜನರಿಗೆ ಸರ್ಕಾರದ ವತಿಯಿಂದ ಅನ್ನ ಸಾಂಬಾರ್‌, ಪಲಾವ್‌ ಕೆಲ ಸಂದರ್ಭ ಗೋಧಿ  ಹಿಟ್ಟಿನ ಚಪಾತಿ ನೀಡಲಾಗುತ್ತಿದೆ. ಕೆಲ ಕೇಂದ್ರಗಳಲ್ಲಿ ಅಡುಗೆ ಸಾಮಗ್ರಿ ಪೂರೈಸಿ ಅಲ್ಲೇ ಅಡುಗೆಗೆ ವ್ಯವಸ್ಥೆ ಮಾಡಲಾಗಿದೆ. ಆದರೆ, ಜೋಳದ ರೊಟ್ಟಿ ಕೊಡುವುದು ಸಾಧ್ಯವಾಗುತ್ತಿಲ್ಲ. ಇದನ್ನು ಗಮನಿಸಿದ ಶಾಸಕರು ಮತ್ತು ಅವರ ಪತ್ನಿ ಈ ವಿನೂತನ ಕಾರ್ಯಕ್ಕೆ ಕೈ ಹಾಕಿ ನಮ್ಮ ಜನರಿಗೆ ಜೋಳದ ರೊಟ್ಟಿಯ ರುಚಿ ತೋರಿಸಲು ಸಿದ್ದರಾಗಿದ್ದಾರೆ.

ನಾವು ಕ್ವಾರೆಂಟೈನ್‌ ಕೇಂದ್ರಗಳಿಗೆ ಹೋದಾಗ ನಮ್ಮ ಜನರು ರೊಟ್ಟಿ ಕೊಡುವಂತೆ ಮನವಿ ಮಾಡಿದ್ದರು. ರೊಟ್ಟಿಯ ಮಹತ್ವ ಗೊತ್ತಿದ್ದ ನಾವು ಇದಕ್ಕೆ ಒಪ್ಪಿ ಸಿದ್ದತೆ ನಡೆಸುತ್ತಿದ್ದೇವೆ. ರೊಟ್ಟಿಯಲ್ಲಿ ಅರಿಷಿಣಪುಡಿ ಸೇರಿಸಿದ್ದು, ಅದಿನ್ನೂ ಹೆಚ್ಚು ಪೌಷ್ಠಿಕ ಆಹಾರವಾಗಲಿದೆ. ಜನರು ಕ್ವಾರೆಂಟೈನ್‌ ಅವಧಿ ಮುಗಿಸುವವರೆಗೂ ರೊಟ್ಟಿ ಕೊಡುವ ಯೋಜನೆ ಇದೆ.
ಮಹಾದೇವಿ ಪಾಟೀಲ ನಡಹಳ್ಳಿ,
ರೊಟ್ಟಿ ಹಂಚಿಕೆಯ ರೂವಾರಿ

ಡಿ. ಬಿ. ವಡವಡಗಿ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.