ಸರ್ವರ್ ಸಮಸ್ಯೆ: ಮುಂಗಾರು ಬಿತ್ತನೆ ಬೀಜಕ್ಕೆ ರೈತರ ಸರದಿ
Team Udayavani, Jun 17, 2020, 4:04 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುದ್ದೇಬಿಹಾಳ: ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿರುವ ಮುದ್ದೇಬಿಹಾಳ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದಲ್ಲಿ ರೈತರು ಬೆಳಗ್ಗೆಯಿಂದ ಸರದಿಯಲ್ಲಿ ನಿಂತಿದ್ದರೂ ಸರ್ವರ್ ಸಮಸ್ಯೆಯಿಂದಾಗಿ ಬಿತ್ತನೆ ಬೀಜ ದೊರಕದೆ ನಿರಾಶರಾಗಿ ಮರಳಿದ್ದು ಇದು ಕೇಂದ್ರದ ಸಿಬ್ಬಂದಿಯ ಬೇಜವಾಬ್ಧಾರಿತನದ ಪರಿಣಾಮವಾಗಿದೆ ಎಂದು ರೈತರು ದೂರಿದ್ದಾರೆ.
ತಾಲೂಕಿನಾದ್ಯಂತ ಹದವಾಗಿ ಮಳೆ ಸುರಿದಿದ್ದು, ರೈತರು ಬಿತ್ತನೆ ಸಲುವಾಗಿ ಓಡಾಡುತ್ತಿದ್ದಾರೆ. ಈಗಾಗಲೇ ಒಂದು ವಾರದಿಂದ ಬಿತ್ತನೆ ಬೀಜ ಪೂರೈಕೆಗೆ ತಾಲೂಕು ಕೃಷಿ ಇಲಾಖೆ ಕ್ರಮ ತೆಗೆದುಕೊಂಡಿದೆ. ಆದರೆ ಸರದಿಯಲ್ಲಿ ನಿಲ್ಲುವ ರೈತರಿಗೆ ಬೀಜಗಳು ಸರಳವಾಗಿ ಸಿಗದಂತಾಗಿವೆ. ಮೇಲಿಂದ ಮೇಲೆ ಸರ್ವರ್ ಸಮಸ್ಯೆ ನೆಪ ಹೇಳುತ್ತಿರುವುದು ರೈತರ ಸಮಸ್ಯೆಗೆ ಕಾರಣವಾಗಿದೆ ಎಂದು ದೂರಿದ್ದಾರೆ.
ತಾಲೂಕಿನಲ್ಲಿರುವ ನಾಲ್ಕು ರೈತ ಸಂಪರ್ಕ ಕೇಂದ್ರಗಳ ಮೂಲಕ ಬಿತ್ತನೆ ಬೀಜ ವಿತರಿಸಲಾಗುತ್ತಿದೆ. ಕೆ. ಕಿಸಾನ್ ಎಂಬ ಸೀಡ್ ಎಂಐಎಸ್ ಆನ್ಲೈನ್ನಲ್ಲಿ ಮಾರಾಟ ಮಾಡಬೇಕೆಂದು ಸರ್ಕಾರದ ಆದೇಶ ಇದೆ. ಆದರೆ ಈ ಸರ್ವರ್ ನಿಧಾನವಾಗಿ ಕೆಲಸ ಮಾಡುತ್ತಿರುವುದು ಬೀಜ ಹಂಚಿಕೆ ವಿಳಂಬಕ್ಕೆ ಕಾರಣ ಎನ್ನುವ ಮಾತು ಕೃಷಿ ಸಂಪರ್ಕ ಕೇಂದ್ರದಲ್ಲಿ ಕೇಳಿ ಬರುತ್ತಿದೆ. ರೈತರು ತೊಗರಿ ಬೀಜಕ್ಕೆ ಹೆಚ್ಚು ಬೇಡಿಕೆ ಸಲ್ಲಿಸುತ್ತಿದ್ದಾರೆ. ಈ ಭಾಗದಲ್ಲಿ ಹೆಸರು, ಸಜ್ಜೆ, ಮೆಕ್ಕೆಜೋಳಕ್ಕೆ ಬೇಡಿಕೆ ಬಂದಿದ್ದು ಅವು ಲಭ್ಯ ಇವೆ ಎಂದು ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್. ಯರಝರಿ ಪ್ರತಿಕ್ರಿಯಿಸಿದ್ದಾರೆ.
ಬೆಳಗ್ಗೆ ಎಂಟಕ್ಕೆ ಪಾಳಿ ಹಚ್ಚಿದ್ದೆ. ನನಗೆ ಬೇಕಾದ ಐದು ಪಾಕೀಟ್ ತೊಗರಿ ಪಡೆಯಲು ಮಧ್ಯಾಹ್ನ ಎರಡು ಗಂಟೆವರೆಗೆ ಕಾಯಬೇಕಾಯ್ತು. ಕಂಪ್ಯೂಟರ್ ಆಪರೇಟರ್ ಒಬ್ಬರನ್ನು ಹೆಚ್ಚಿಗೆ ನೇಮಿಸಿಕೊಂಡರೆ ರೈತರಿಗೆ ಕಾಯುವುದು ತಪ್ಪುತ್ತದೆ ಎಂದು ಇಣಚಗಲ್ನ ರೈತ ಸತೀಶ ಕಾರನೂರ, ಮುತ್ತು ತಾಳಿಕೋಟಿ ಅಸಮಾಧಾನ ತೋಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ